<p><strong>ಬೆಂಗಳೂರು:</strong> ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪ ಎದುರಿಸುತ್ತಿದ್ದ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣದ ಅಪರಾಧ ಪರಿಗಣಿಸಲು ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರಾಕರಿಸಿದೆ.</p>.<p>ಈ ಸಂಬಂಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ, ಭಾರತೀಯ ದಂಡ ಸಂಹಿತೆ-1860ರ ಕಲಂ 354–ಎ (ಲೈಂಗಿಕ ಸಮ್ಮತಿಗಾಗಿ ಒತ್ತಾಯ ಅಥವಾ ಮನವಿ) ಅಡಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಿಂದ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗಿದೆ.</p>.<p>ಪ್ರಕರಣದ ವಿಚಾರಣೆ ನಡೆಸುತ್ತಿದ್ದ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ಶಿವಕುಮಾರ್ ಈ ಕುರಿತ ಆದೇಶವನ್ನು ಸೋಮವಾರ ಪ್ರಕಟಿಸಿದ್ದಾರೆ.</p>.<p>‘ಎಚ್.ಡಿ.ರೇವಣ್ಣ ಅವರ ವಿರುದ್ಧ ದೂರು ದಾಖಲಿಸುವಲ್ಲಿ ಸಂತ್ರಸ್ತೆಯು ವಿಳಂಬ ಮಾಡಿದ್ದಾರೆ. ಹಾಗಾಗಿ, ವಿಳಂಬ ತೋರಿರುವುದನ್ನು ಕ್ಷಮಿಸಿ ಶಿಕ್ಷಾರ್ಹ ಅಪರಾಧದ ವಿಚಾರಣೆ ಮುಂದುವರಿಸಲು ಇದು ಸೂಕ್ತ ಪ್ರಕರಣವಲ್ಲ’ ಎಂಬ ಅಭಿಪ್ರಾಯವನ್ನು ನ್ಯಾಯಾಧೀಶರು ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪ ಎದುರಿಸುತ್ತಿದ್ದ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣದ ಅಪರಾಧ ಪರಿಗಣಿಸಲು ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರಾಕರಿಸಿದೆ.</p>.<p>ಈ ಸಂಬಂಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ, ಭಾರತೀಯ ದಂಡ ಸಂಹಿತೆ-1860ರ ಕಲಂ 354–ಎ (ಲೈಂಗಿಕ ಸಮ್ಮತಿಗಾಗಿ ಒತ್ತಾಯ ಅಥವಾ ಮನವಿ) ಅಡಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಿಂದ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಗಿದೆ.</p>.<p>ಪ್ರಕರಣದ ವಿಚಾರಣೆ ನಡೆಸುತ್ತಿದ್ದ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ಶಿವಕುಮಾರ್ ಈ ಕುರಿತ ಆದೇಶವನ್ನು ಸೋಮವಾರ ಪ್ರಕಟಿಸಿದ್ದಾರೆ.</p>.<p>‘ಎಚ್.ಡಿ.ರೇವಣ್ಣ ಅವರ ವಿರುದ್ಧ ದೂರು ದಾಖಲಿಸುವಲ್ಲಿ ಸಂತ್ರಸ್ತೆಯು ವಿಳಂಬ ಮಾಡಿದ್ದಾರೆ. ಹಾಗಾಗಿ, ವಿಳಂಬ ತೋರಿರುವುದನ್ನು ಕ್ಷಮಿಸಿ ಶಿಕ್ಷಾರ್ಹ ಅಪರಾಧದ ವಿಚಾರಣೆ ಮುಂದುವರಿಸಲು ಇದು ಸೂಕ್ತ ಪ್ರಕರಣವಲ್ಲ’ ಎಂಬ ಅಭಿಪ್ರಾಯವನ್ನು ನ್ಯಾಯಾಧೀಶರು ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>