ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈ ನಡುಗುತ್ತಿದೆ, ಕಣ್ಣಲ್ಲಿ ನೀರು ಸುರಿಯುತ್ತಿದೆ: ಕಾವೇರಿಗಾಗಿ ಮೋದಿಗೆ HDD ಪತ್ರ

Published 25 ಸೆಪ್ಟೆಂಬರ್ 2023, 15:23 IST
Last Updated 25 ಸೆಪ್ಟೆಂಬರ್ 2023, 15:23 IST
ಅಕ್ಷರ ಗಾತ್ರ

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಕಾವೇರಿ ಕಣಿವೆಯ ಡ್ಯಾಂ ಗಳಲ್ಲಿ ಸದ್ಯ 51 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಿದೆ. ಆದರೆ, ರೈತರ ಬೆಳೆ, ಕುಡಿಯುವ ನೀರಿನ ಉದ್ದೇಶಕ್ಕೆ 112 ಟಿಎಂಸಿ ನೀರು ಬೇಕೇ ಬೇಕು. ಕುಡಿಯುವ ನೀರಿನ ಪೂರೈಕೆ ಸಂವಿಧಾನ ಬದ್ಧವಾದ ಮೂಲಭೂತ ಹಕ್ಕು. ರಾಷ್ಟ್ರೀಯ ನೀರು ನೀತಿಯಲ್ಲೂ ಕುಡಿಯುವ ನೀರಿಗೆ ಅತಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೀಗಾಗಿ ಕಾವೇರಿ ನೀರಿನ ಸಮಸ್ಯೆಗೆ 4 ಪರಿಹಾರ ಸೂತ್ರಗಳನ್ನು ತಿಳಿಸಿ ತಮ್ಮ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT