‘ಕೇತಗಾನಹಳ್ಳಿ ತೋಟದ ಮನೆಯಲ್ಲಿ ಶಿಕ್ಷಕರೊಂದಿಗೆ ನಡೆದ ಸಭೆಯಲ್ಲಿ, ಪುಟ್ಟಣ್ಣ ಕುಟುಂಬದ 10–12 ಜನಕ್ಕೆ ಕ್ಲಾಸ್ ಒನ್ ಹುದ್ದೆ ಕೊಡಿಸಿದ್ದೇನೆ. 1999-2000 ರಲ್ಲಿ ನನ್ನ ಅಧಿಕಾರ ಅವಧಿಯಲ್ಲಿ ಉಪನ್ಯಾಸಕರ ನೇಮಕಾತಿ ನಡೆದಿತ್ತು. ಆಗ ಎಚ್.ಎನ್. ಕೃಷ್ಣ ಕೆಪಿಎಸ್ಸಿ ಅಧ್ಯಕ್ಷರಾಗಿದ್ದರು. ಆದರೆ ಈ (ಪುಟ್ಟಣ್ಣ) ವ್ಯಕ್ತಿ ಅವರಿವರ ಅರ್ಜಿ ಹಿಡಿದುಕೊಂಡು ಬಂದು, ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ’ ಎಂದು ನಾನು ಹೇಳಿದ್ದಾಗಿ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿದೆ. ಈ ರೀತಿಯ ಹೇಳಿಕೆಯನ್ನು ನಾನು ನೀಡಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.