<figcaption>""</figcaption>.<p><strong>ಬೆಂಗಳೂರು:</strong> ಲಾಕ್ಡೌನ್ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ’ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ.</p>.<p>ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್ಡೌನ್ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ.</p>.<p>ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದೂ ಕುಮಾರಸ್ವಾಮಿ ಅವರು ಈಗಾಗಲೇ ಸಂದೇಶ ರವಾನಿಸಿದ್ದಾರೆ.</p>.<p>ಇದಿಷ್ಟೇ ಅಲ್ಲದೇ, ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಇದಕ್ಕಾಗಿ ಮಾಹಿತಿ ಸಂಗ್ರಹ ಕಾರ್ಯ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong> ಲಾಕ್ಡೌನ್ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ’ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ.</p>.<p>ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್ಡೌನ್ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ.</p>.<p>ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದೂ ಕುಮಾರಸ್ವಾಮಿ ಅವರು ಈಗಾಗಲೇ ಸಂದೇಶ ರವಾನಿಸಿದ್ದಾರೆ.</p>.<p>ಇದಿಷ್ಟೇ ಅಲ್ಲದೇ, ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಇದಕ್ಕಾಗಿ ಮಾಹಿತಿ ಸಂಗ್ರಹ ಕಾರ್ಯ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>