ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಕ್ರಂ ಸಿಂಹ ಬೆಂಬಲಕ್ಕೆ ಎಚ್‌ಡಿಕೆ

Published 5 ಜನವರಿ 2024, 16:19 IST
Last Updated 5 ಜನವರಿ 2024, 16:19 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲು ಹಾಗೂ ಅವರನ್ನು ಲೋಕಸಭೆ ಚುನಾವಣೆ ಕಣದಿಂದ ತಪ್ಪಿಸಲು ಮುಖ್ಯಮಂತ್ರಿ ಅವರೇ ಷಡ್ಯಂತ್ರ ರೂಪಿಸಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮರ ಕಡಿದ ಆರೋಪಕ್ಕೆ ಗುರಿ ಆಗಿರುವ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಮೇಲೆ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಬಗ್ಗೆ ಹಲವಾರು ಅನುಮಾನಗಳು ಇವೆ. ಸ್ಥಳೀಯ ಒಬ್ಬ ಪುಢಾರಿ ಮುಖ್ಯಮಂತ್ರಿಗೆ ಮಾಹಿತಿ ಕೊಟ್ಟು ಪ್ರತಾಪ್ ಸಿಂಹಗೆ ಪಾಠ ಕಲಿಸಬೇಕು ಎಂದು ತಲೆ ತಿಂದ. ಅಧಿಕಾರಿಗಳಿಗೆ ಕರೆ ಮಾಡಿದ ಸಿದ್ದರಾಮಯ್ಯ ಬೀಟೆ ಮರ ಕಡಿದು ಅ ಜಾಗದಲ್ಲಿ ಹಾಕುವಂತೆ ಹೇಳಿದ್ದರು. ಈ ಪ್ರಕರಣದಲ್ಲಿ ಹಾಸನದ ಶಾಸಕರೊಬ್ಬರು ಪ್ರಧಾನ ಪಾತ್ರ ವಹಿಸಿದ್ದಾರೆ ಎಂದು ಆಪಾದಿಸಿದರು. 

‘ಈ ಬಗ್ಗೆ ನನಗೆ ಅಧಿಕಾರಿಗಳೇ ಮಾಹಿತಿ ಕೊಟ್ಟಿದ್ದಾರೆ. ಬೇಕಿದ್ದರೆ ಮುಖ್ಯಮಂತ್ರಿಯವರ ಮೊಬೈಲ್ ಕರೆಗಳ ಪಟ್ಟಿ ತೆಗೆಸಿ ನೋಡಲಿ. ನಾಗಮೋಹನ್ ದಾಸ್ ನೇತೃತ್ವದ ಆಯೋಗದಿಂದ ತನಿಖೆ ಮಾಡಿಸಲಿ. ಕಾಂಗ್ರೆಸ್ ನವರು ವಿರೋಧಿಗಳ ದನಿ ಅಡಗಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕರ ಸೇವಕರ ಮೇಲೆ ದೌರ್ಜನ್ಯ, ವಿಕ್ರಂ ಸಿಂಹ ಮೇಲಿನ ಪ್ರಕರಣ ಅಧಿಕಾರ ದುರ್ಬಳಕೆಯ ಪರಮಾವಧಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT