ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನಿಸುವ ಸಿದ್ದರಾಮಯ್ಯ ಅವರೇ ಪೊಲೀಸರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅವರಿಗೆ ಆತ್ಮಸಾಕ್ಷಿ ಇದೆಯೇ? ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಕಾಗದದ ಚೂರು ಎಸೆದ ಘಟನೆ ಖಂಡಿಸಿದ್ದ ಸಿದ್ದರಾಮಯ್ಯ, ಕೃಷ್ಣ ಬೈರೇಗೌಡ ಅವರೇ ದಲಿತ ಸಮುದಾಯದ ಹೆಣ್ಣು ಮಗಳ ಮೇಲಿನ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದು ವಿಪರ್ಯಾಸ ಎಂದರು.