<p><strong>ಬೆಂಗಳೂರು:</strong> ಹೆರಿಗೆ ಸಮಯದಲ್ಲಿ ಆಸ್ಪತ್ರೆ ಬಿಲ್ ಕಟ್ಟಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ತುಮಕೂರು ಜಿಲ್ಲೆಯ ಶಿರಾದ ನಾಗಮಣಿ ಅವರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶನಿವಾರ ನಡೆದ ಜನತಾ ದರ್ಶನದಲ್ಲಿ ₹2 ಲಕ್ಷ ಚೆಕ್ ನೀಡಿದರು.</p>.<p>ಮೂರು ತಿಂಗಳ ಮಗುವನ್ನು ಎತ್ತಿಕೊಂಡು ಬಂದಿದ್ದ ನಾಗಮಣಿ ಸಂತೋಷದಿಂದ ಊರಿಗೆ ತೆರಳಿದರು.</p>.<p>ಇದೇ ವೇಳೆ ಮೂರು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಮಂಡ್ಯ ಜಿಲ್ಲೆಯ ಹುಲಿವಾಲ ಗ್ರಾಮದ ರಾಮಯ್ಯ ಎಂಬ ರೈತನ ಕುಟುಂಬದ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದರು.</p>.<p>‘ಸಿದ್ದರಾಮಯ್ಯ ಸಿ.ಎಂ ಆಗಿದ್ದಾಗ ನಮ್ಮ ಮನೆಗೆ ಭೇಟಿ ಕೊಟ್ಟಿದ್ದರು. ಆದರೆ ಇದುವರೆಗೂ ಸರ್ಕಾರದಿಂದ ಪರಿಹಾರ ಬಂದಿಲ್ಲ’ ಎಂದು ಕುಟುಂಬಸ್ಥರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,‘ಪರಿಹಾರ ಹಾಗೂ ಉದ್ಯೋಗಕ್ಕಾಗಿ ಮಂಡ್ಯ ಜಿಲ್ಲಾಧಿಕಾರಿಯನ್ನು ಭೇಟಿ ಮಾಡುವಂತೆ’ಸೂಚಿಸಿದರು.</p>.<p>ಹೈದರಾಬಾದ್ ಕರ್ನಾಟಕ ಭಾಗದ ಶಿಕ್ಷಕರ ನೇಮಕಾತಿಗೆ ಇರುವ ತೊಡಕನ್ನು ನಿವಾರಿಸುವಂತೆ ಅಫಜಲಪುರ ಶಾಸಕ ಎಂ.ವೈ ಪಾಟೀಲ್, ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೆರಿಗೆ ಸಮಯದಲ್ಲಿ ಆಸ್ಪತ್ರೆ ಬಿಲ್ ಕಟ್ಟಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ತುಮಕೂರು ಜಿಲ್ಲೆಯ ಶಿರಾದ ನಾಗಮಣಿ ಅವರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶನಿವಾರ ನಡೆದ ಜನತಾ ದರ್ಶನದಲ್ಲಿ ₹2 ಲಕ್ಷ ಚೆಕ್ ನೀಡಿದರು.</p>.<p>ಮೂರು ತಿಂಗಳ ಮಗುವನ್ನು ಎತ್ತಿಕೊಂಡು ಬಂದಿದ್ದ ನಾಗಮಣಿ ಸಂತೋಷದಿಂದ ಊರಿಗೆ ತೆರಳಿದರು.</p>.<p>ಇದೇ ವೇಳೆ ಮೂರು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಮಂಡ್ಯ ಜಿಲ್ಲೆಯ ಹುಲಿವಾಲ ಗ್ರಾಮದ ರಾಮಯ್ಯ ಎಂಬ ರೈತನ ಕುಟುಂಬದ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದರು.</p>.<p>‘ಸಿದ್ದರಾಮಯ್ಯ ಸಿ.ಎಂ ಆಗಿದ್ದಾಗ ನಮ್ಮ ಮನೆಗೆ ಭೇಟಿ ಕೊಟ್ಟಿದ್ದರು. ಆದರೆ ಇದುವರೆಗೂ ಸರ್ಕಾರದಿಂದ ಪರಿಹಾರ ಬಂದಿಲ್ಲ’ ಎಂದು ಕುಟುಂಬಸ್ಥರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,‘ಪರಿಹಾರ ಹಾಗೂ ಉದ್ಯೋಗಕ್ಕಾಗಿ ಮಂಡ್ಯ ಜಿಲ್ಲಾಧಿಕಾರಿಯನ್ನು ಭೇಟಿ ಮಾಡುವಂತೆ’ಸೂಚಿಸಿದರು.</p>.<p>ಹೈದರಾಬಾದ್ ಕರ್ನಾಟಕ ಭಾಗದ ಶಿಕ್ಷಕರ ನೇಮಕಾತಿಗೆ ಇರುವ ತೊಡಕನ್ನು ನಿವಾರಿಸುವಂತೆ ಅಫಜಲಪುರ ಶಾಸಕ ಎಂ.ವೈ ಪಾಟೀಲ್, ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>