<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ಬಳ್ಳಾರಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವಿಗೆ ಸಂಬಂಧಿಸಿದಂತೆ ಆರೋಗ್ಯ ಸಚಿವರನ್ನು ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಗ್ರಹಿಸಿದರು.</p><p>ವಿಧಾನಸಭೆಯಲ್ಲಿ ಬಾಣಂತಿಯರ ಸರಣಿ ಸಾವಿನ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಅವರು, ಈ ಸರಣಿ ಸಾವಿಗೆ ರಾಜ್ಯ ಸರ್ಕಾರವೇ ಹೊಣೆಯಾಗಿದ್ದು, ಇದೊಂದು ಕೊಲೆಗಡುಕ ಸರ್ಕಾರ ಎಂದರು.</p><p>ರಾಜ್ಯದಲ್ಲಿ ಬಾಣಂತಿಯರ ಸಾವು ಸರಿಯಾಗಿ ವರದಿಯಾಗುತ್ತಿಲ್ಲ. ಅದನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ಬಾಣಂತಿಯರ ಆರೋಗ್ಯ ಸ್ಥಿತಿ ಹದೆಗಟ್ಟಾಗ ತಕ್ಷಣವೇ ಐಸಿಯುಗೆ ಏಕೆ ಹಾಕಲಿಲ್ಲ. ಏಕೆಂದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯುಗಳು ಮತ್ತು ಟ್ರಾಮಾ ಕೇರ್ ಕೇಂದ್ರಗಳು ಮುಚ್ಚಿ ಹೋಗಿವೆ ಎಂದು ದೂರಿದರು.</p><p>ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅಗತ್ಯವಾಗಿ ಇರಬೇಕಾದ 761 ಔಷಧಗಳ ಪೈಕಿ 253 ಔಷಧಿಗಳು ಲಭ್ಯವಿದ್ದು, ಉಳಿದ 508 ಔಷಧಿಗಳು ಲಭ್ಯವಿಲ್ಲ. ಬಾಣಂತಿಯರಿಗೆ ಬಳಿಸಿದ ಔಷಧಿಯ ಒಟ್ಟು 22 ಬ್ಯಾಚ್ಗಳನ್ನು ಕೇಂದ್ರ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಅದರಲ್ಲಿ 4 ಬ್ಯಾಚ್ಗಳು ಮಾತ್ರ ಬಳಕೆ ಯೋಗ್ಯವೆಂದು ಹೇಳಿದ್ದು, ಉಳಿದವು ಬಳಕೆಗೆ ಯೋಗ್ಯವಿಲ್ಲ ಎಂದು ತಿಳಿಸಿದೆ. ಪಶ್ಚಿಮಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಔಷಧ ಬಳಕೆಗೆ ಯೋಗ್ಯವಲ್ಲ ಎಂದು ಪ್ರಯೋಗಾಲಯ ಮಾರ್ಚ್ನಲ್ಲಿ ವರದಿ ನೀಡಿದೆ. ಕಪ್ಪು ಪಟ್ಟಿಗೆ ಸೇರಿಸಿದ್ದರೂ ಆ ಔಷಧ ಬಳಕೆ ಮಾಡಿದ್ದು ಹೇಗೆ ಎಂದು ಪ್ರಶ್ನಿಸಿದರು.</p>.<p><strong>ನ್ಯಾಯಾಂಗ ತನಿಖೆಗೆ ಅಶೋಕ ಆಗ್ರಹ</strong></p><p>ಬಳ್ಳಾರಿ ಮತ್ತು ಇತರ ಜಿಲ್ಲೆಗಳಲ್ಲಿ ನಡೆದಿರುವ ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದರು.</p><p>ರಾಜ್ಯದ ಈ ಪ್ರಕರಣ ಬೆಚ್ಚಿ ಬೀಳಿಸುವಂತಹದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಯಚೂರು ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಸಂಭವಿಸಿದೆ. ಸಚಿವರಿಗಂತೂ ಕಾಳಜಿಯೇ ಇಲ್ಲ ಎಂದು ಟೀಕಿಸಿದರು.</p><p>ದಾವಣಗೆರೆಯಲ್ಲಿ 28, ರಾಯಚೂರಿನಲ್ಲಿ 10, ಚಿತ್ರದುರ್ಗದಲ್ಲಿ ಒಬ್ಬ ಬಾಣಂತಿ ಸಾವಿಗೀಡಾಗಿದ್ದಾರೆ. ಅಷ್ಟೇ ಅಲ್ಲ, ಸತ್ತ ಬಾಣಂತಿಯರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಕೊಟ್ಟರು. ವಯನಾಡಿನಲ್ಲಿ ಆನೆ ತುಳಿತಕ್ಕೆ ಸಿಕ್ಕ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹15 ಲಕ್ಷ ಪರಿಹಾರ ನೀಡಿದ್ದಾರೆ. ಇದು ಸರ್ಕಾರದ ಆದ್ಯತೆ ಎಂದು ಅಶೋಕ ಹರಿಹಾಯ್ದರು.</p><p>ಈ ಸರಣಿ ಸಾವಿನ ಪ್ರಕರಣದ ಬಳಿಕ ಸರ್ಕಾರಿ ಆಸ್ಪತ್ರೆಗೆ ಹೋಗುವ ಗರ್ಭಿಣಿಯರ ಪೈಕಿ ಶೇ 50ರಷ್ಟು ಇಳಿಕೆಯಾಗಿದೆ ಎಂದು ಅಶೋಕ ಹೇಳಿದಾಗ, ತಕರಾರು ಎತ್ತಿದ ಕಾಂಗ್ರೆಸ್ನ ಕೋನರಡ್ಡಿ, ‘ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಕಾರಾತ್ಮಕವಾಗಿ ಮಾತನಾಡಬೇಡಿ. ಜನ ಹೋಗುವುದಿಲ್ಲ’ ಎಂದರು.</p><p>ಈ ವಿಚಾರವಾಗಿ ಆಡಳಿತ ಮತ್ತು ವಿರೋಧಪಕ್ಷದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಧ್ಯಪ್ರವೇಶಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ, ಅಶೋಕ ಅವರು ಹೇಳಿದ್ದರಲ್ಲಿ ತಪ್ಪಿಲ್ಲ. ಅವರು ವಾಸ್ತವ ಸಂಗತಿಯನ್ನೇ ಹೇಳಿದ್ದಾರೆ. ಈ ಬಗ್ಗೆ ಸಚಿವ ದಿನೇಶ್ ಅವರು ವಿಧಾನ ಪರಿಷತ್ತಿನಲ್ಲಿ ಇನ್ನೂ ಖಾರವಾಗಿ ಮಾತನಾಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ಬಳ್ಳಾರಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವಿಗೆ ಸಂಬಂಧಿಸಿದಂತೆ ಆರೋಗ್ಯ ಸಚಿವರನ್ನು ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಗ್ರಹಿಸಿದರು.</p><p>ವಿಧಾನಸಭೆಯಲ್ಲಿ ಬಾಣಂತಿಯರ ಸರಣಿ ಸಾವಿನ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಅವರು, ಈ ಸರಣಿ ಸಾವಿಗೆ ರಾಜ್ಯ ಸರ್ಕಾರವೇ ಹೊಣೆಯಾಗಿದ್ದು, ಇದೊಂದು ಕೊಲೆಗಡುಕ ಸರ್ಕಾರ ಎಂದರು.</p><p>ರಾಜ್ಯದಲ್ಲಿ ಬಾಣಂತಿಯರ ಸಾವು ಸರಿಯಾಗಿ ವರದಿಯಾಗುತ್ತಿಲ್ಲ. ಅದನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ಬಾಣಂತಿಯರ ಆರೋಗ್ಯ ಸ್ಥಿತಿ ಹದೆಗಟ್ಟಾಗ ತಕ್ಷಣವೇ ಐಸಿಯುಗೆ ಏಕೆ ಹಾಕಲಿಲ್ಲ. ಏಕೆಂದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯುಗಳು ಮತ್ತು ಟ್ರಾಮಾ ಕೇರ್ ಕೇಂದ್ರಗಳು ಮುಚ್ಚಿ ಹೋಗಿವೆ ಎಂದು ದೂರಿದರು.</p><p>ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅಗತ್ಯವಾಗಿ ಇರಬೇಕಾದ 761 ಔಷಧಗಳ ಪೈಕಿ 253 ಔಷಧಿಗಳು ಲಭ್ಯವಿದ್ದು, ಉಳಿದ 508 ಔಷಧಿಗಳು ಲಭ್ಯವಿಲ್ಲ. ಬಾಣಂತಿಯರಿಗೆ ಬಳಿಸಿದ ಔಷಧಿಯ ಒಟ್ಟು 22 ಬ್ಯಾಚ್ಗಳನ್ನು ಕೇಂದ್ರ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಅದರಲ್ಲಿ 4 ಬ್ಯಾಚ್ಗಳು ಮಾತ್ರ ಬಳಕೆ ಯೋಗ್ಯವೆಂದು ಹೇಳಿದ್ದು, ಉಳಿದವು ಬಳಕೆಗೆ ಯೋಗ್ಯವಿಲ್ಲ ಎಂದು ತಿಳಿಸಿದೆ. ಪಶ್ಚಿಮಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಔಷಧ ಬಳಕೆಗೆ ಯೋಗ್ಯವಲ್ಲ ಎಂದು ಪ್ರಯೋಗಾಲಯ ಮಾರ್ಚ್ನಲ್ಲಿ ವರದಿ ನೀಡಿದೆ. ಕಪ್ಪು ಪಟ್ಟಿಗೆ ಸೇರಿಸಿದ್ದರೂ ಆ ಔಷಧ ಬಳಕೆ ಮಾಡಿದ್ದು ಹೇಗೆ ಎಂದು ಪ್ರಶ್ನಿಸಿದರು.</p>.<p><strong>ನ್ಯಾಯಾಂಗ ತನಿಖೆಗೆ ಅಶೋಕ ಆಗ್ರಹ</strong></p><p>ಬಳ್ಳಾರಿ ಮತ್ತು ಇತರ ಜಿಲ್ಲೆಗಳಲ್ಲಿ ನಡೆದಿರುವ ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದರು.</p><p>ರಾಜ್ಯದ ಈ ಪ್ರಕರಣ ಬೆಚ್ಚಿ ಬೀಳಿಸುವಂತಹದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಯಚೂರು ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಸಂಭವಿಸಿದೆ. ಸಚಿವರಿಗಂತೂ ಕಾಳಜಿಯೇ ಇಲ್ಲ ಎಂದು ಟೀಕಿಸಿದರು.</p><p>ದಾವಣಗೆರೆಯಲ್ಲಿ 28, ರಾಯಚೂರಿನಲ್ಲಿ 10, ಚಿತ್ರದುರ್ಗದಲ್ಲಿ ಒಬ್ಬ ಬಾಣಂತಿ ಸಾವಿಗೀಡಾಗಿದ್ದಾರೆ. ಅಷ್ಟೇ ಅಲ್ಲ, ಸತ್ತ ಬಾಣಂತಿಯರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಕೊಟ್ಟರು. ವಯನಾಡಿನಲ್ಲಿ ಆನೆ ತುಳಿತಕ್ಕೆ ಸಿಕ್ಕ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ₹15 ಲಕ್ಷ ಪರಿಹಾರ ನೀಡಿದ್ದಾರೆ. ಇದು ಸರ್ಕಾರದ ಆದ್ಯತೆ ಎಂದು ಅಶೋಕ ಹರಿಹಾಯ್ದರು.</p><p>ಈ ಸರಣಿ ಸಾವಿನ ಪ್ರಕರಣದ ಬಳಿಕ ಸರ್ಕಾರಿ ಆಸ್ಪತ್ರೆಗೆ ಹೋಗುವ ಗರ್ಭಿಣಿಯರ ಪೈಕಿ ಶೇ 50ರಷ್ಟು ಇಳಿಕೆಯಾಗಿದೆ ಎಂದು ಅಶೋಕ ಹೇಳಿದಾಗ, ತಕರಾರು ಎತ್ತಿದ ಕಾಂಗ್ರೆಸ್ನ ಕೋನರಡ್ಡಿ, ‘ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಕಾರಾತ್ಮಕವಾಗಿ ಮಾತನಾಡಬೇಡಿ. ಜನ ಹೋಗುವುದಿಲ್ಲ’ ಎಂದರು.</p><p>ಈ ವಿಚಾರವಾಗಿ ಆಡಳಿತ ಮತ್ತು ವಿರೋಧಪಕ್ಷದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಧ್ಯಪ್ರವೇಶಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ, ಅಶೋಕ ಅವರು ಹೇಳಿದ್ದರಲ್ಲಿ ತಪ್ಪಿಲ್ಲ. ಅವರು ವಾಸ್ತವ ಸಂಗತಿಯನ್ನೇ ಹೇಳಿದ್ದಾರೆ. ಈ ಬಗ್ಗೆ ಸಚಿವ ದಿನೇಶ್ ಅವರು ವಿಧಾನ ಪರಿಷತ್ತಿನಲ್ಲಿ ಇನ್ನೂ ಖಾರವಾಗಿ ಮಾತನಾಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>