ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಚಾರ್ಯರು, ಮೇ 2ರಂದು ಹೊರಡಿಸಿರುವ ಪ್ರಕಟಣೆಯಲ್ಲಿ ‘ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದಾಗಿ ವರದಿ ಆಗುತ್ತಿದೆ. ಹಾಗಾಗಿ, ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು, ಪೋಷಕರು ಫ್ರಿಡ್ಜ್ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು. ಐಸ್ಕ್ರೀಮ್ ಸೇವಿಸಬಾರದು’ ಎಂದು ತಿಳಿಸಲಾಗಿತ್ತು. ಈ ಪ್ರಕಟಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.