<p><strong>ಬೆಂಗಳೂರು:</strong> ಔಷಧ ಸರಬರಾಜು, ವೈದ್ಯರು, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾ.11ರಿಂದ ಮುಷ್ಕರ ಆರಂಭಿಸಲಿದೆ.</p><p>ಈಗಾಗಲೇ ಹಲವು ವರ್ಷಗಳಿಂದ ನಮ್ಮ ಬೇಡಿಕೆ ಮನವಿ ಸಲ್ಲಿಸದರೂ ಪ್ರಯೋಜನವಾಗಿಲ್ಲ. ಈ ಕಾರಣದಿಂದ ಮುಷ್ಕರ ಅನಿವಾರ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಬೇಡಿಕೆ ಈಡೇರಿಸಲು ಗಮನ ಹರಿಸಬೇಕು ಎಂದು ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ್ ಮೇಟಿ, ನೌಕರರ ಕೇಂದ್ರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p><p>ಮಾ.11ರಿಂದ 15ರ ವರೆಗೆ ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಪ್ಪು ಪಟ್ಟಿ ಧರಿಸಿ ಮುಷ್ಕರ ನಡೆಸುತ್ತೇವೆ. ಈ ವೇಳೆ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುತ್ತೇವೆ. ಆನಂತರವೂ ಸರ್ಕಾರದ ನಿಲುವಿನಲ್ಲಿ ಬದಲಾವಣೆ ಕಾಣದೇ ಇದ್ದರೆ ಮಾ.16ರಿಂದ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸುತ್ತೇವೆ ಎಂದರು.</p><p>ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ‘ಆರೋಗ್ಯ ಇಲಾಖೆ ಬೇಡಿಕೆ ನ್ಯಾಯಯುತವಾಗಿವೆ. ಇದನ್ನು ಈಡೇರಿಸುವುದು ಕಷ್ಟವಲ್ಲ. ಪ್ರಧಾನ ಕಾರ್ಯದರ್ಶಿಗಳು ಗಮನ ಹರಿಸಿ ಸರ್ಕಾರದ ಹಂತದಲ್ಲಿ ಸರಿಪಡಿಸಬೇಕು ಮುಷ್ಕರಕ್ಕೆ ಸಂಘದ ಸಂಪೂರ್ಣ ಬೆಂಬಲವಿದೆ’ ಎಂದರು.</p>.<p><strong>‘ಪ್ರಧಾನ ಕಾರ್ಯದರ್ಶಿ ಪ್ರತಿಷ್ಠೆಯಿಂದ ವಿಳಂಬ’</strong></p><p>‘ಬೇಡಿಕೆಗಳ ಈಡೇರಿಕೆಗೆ ಹಲವು ವರ್ಷಗಳಿಂದ ಪ್ರಯತ್ನಗಳು ನಡೆದಿವೆ. ಇಲಾಖೆಯ ಈಗಿನ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರ ಪ್ರತಿಷ್ಠೆಯಿಂದ ಅನುಷ್ಠಾನ ವಿಳಂಬವಾಗುತ್ತಿದೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ದೂರಿದರು.</p><p>‘42 ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮವಿದ್ದು, ಕಾಲಕಾಲಕ್ಕೆ ಪರಿಷ್ಕರಣೆ ಆಗಿ ಬಡ್ತಿಯೂ ಸಿಗುತ್ತಿದೆ. ಆದರೆ, ಆರೋಗ್ಯ ಇಲಾಖೆಯಲ್ಲಿ ಇದು ಜಾರಿಯಾಗುತ್ತಿಲ್ಲ. ಅವರ ಬೇಡಿಕೆಗಳಿಗೆ ನಮ್ಮ ಸಂಘದ ಸಂಪೂರ್ಣ ಬೆಂಬಲವಿದ್ದು, ಮುಷ್ಕರದಲ್ಲಿ ನಾವೂ ಭಾಗಿಯಾಗುತ್ತೇವೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p><strong>ಬೇಡಿಕೆಗಳೇನು?</strong></p><p>l ವೈದ್ಯರು, ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮಾದರಿಯಲ್ಲಿ ವೇತನ ನೀಡಿ</p><p>l ಗುತ್ತಿಗೆ ವೈದ್ಯ, ನೌಕರರು, ಎನ್ಎಚ್ಎಂ ಗುತ್ತಿಗೆ ನೌಕರರಿಗೆ ಭದ್ರತೆ ನೀಡಿ, ವೇತನ ಹೆಚ್ಚಿಸಿ</p><p>l ಕೇಂದ್ರ ಪುರಸ್ಕೃತ ಯೋಜನೆಯಡಿ ಅಡಿ 6,000 ನೌಕರರಿಗೆ ವೇತನ ಭತ್ಯೆ ನೀಡಿ</p><p>l ಖಾಲಿ ಇರುವ 39 ಸಾವಿರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ</p><p>l ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ಮಾಡಿ, ಜ್ಯೇಷ್ಠತಾ ಪಟ್ಟಿ ಪ್ರಕಟಿಸಿ</p><p>l 5 ವರ್ಷದಿಂದ ಮುಂಬಡ್ತಿ ಸ್ಥಗಿತವಾಗಿದ್ದು, ಅದನ್ನು ಕೊಡಿ</p><p>l ವರ್ಗಾವಣೆ ಕಾಯ್ದೆಯಲ್ಲಿನ ನ್ಯೂನತೆ, ಅವೈಜ್ಞಾನಿಕ ಕೌನ್ಸೆಲಿಂಗ್ ಸರಿಪಡಿಸಿ</p>.<p><strong>5 ದಿನ ಕಪ್ಪುಪಟ್ಟಿ ಧರಿಸಿ ತುರ್ತು ಸೇವೆಗೆ ಲಭ್ಯ</strong></p><p>ಮಾರ್ಚ್ 16ರಿಂದ<br>ಅನಿರ್ದಿಷ್ಟಾವಧಿ ಮುಷ್ಕರ</p><p>ಮುಖ್ಯಮಂತ್ರಿ<br>ಮಧ್ಯಪ್ರವೇಶಕ್ಕೆ ಒತ್ತಾಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಔಷಧ ಸರಬರಾಜು, ವೈದ್ಯರು, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾ.11ರಿಂದ ಮುಷ್ಕರ ಆರಂಭಿಸಲಿದೆ.</p><p>ಈಗಾಗಲೇ ಹಲವು ವರ್ಷಗಳಿಂದ ನಮ್ಮ ಬೇಡಿಕೆ ಮನವಿ ಸಲ್ಲಿಸದರೂ ಪ್ರಯೋಜನವಾಗಿಲ್ಲ. ಈ ಕಾರಣದಿಂದ ಮುಷ್ಕರ ಅನಿವಾರ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಬೇಡಿಕೆ ಈಡೇರಿಸಲು ಗಮನ ಹರಿಸಬೇಕು ಎಂದು ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ್ ಮೇಟಿ, ನೌಕರರ ಕೇಂದ್ರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p><p>ಮಾ.11ರಿಂದ 15ರ ವರೆಗೆ ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಪ್ಪು ಪಟ್ಟಿ ಧರಿಸಿ ಮುಷ್ಕರ ನಡೆಸುತ್ತೇವೆ. ಈ ವೇಳೆ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುತ್ತೇವೆ. ಆನಂತರವೂ ಸರ್ಕಾರದ ನಿಲುವಿನಲ್ಲಿ ಬದಲಾವಣೆ ಕಾಣದೇ ಇದ್ದರೆ ಮಾ.16ರಿಂದ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸುತ್ತೇವೆ ಎಂದರು.</p><p>ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ‘ಆರೋಗ್ಯ ಇಲಾಖೆ ಬೇಡಿಕೆ ನ್ಯಾಯಯುತವಾಗಿವೆ. ಇದನ್ನು ಈಡೇರಿಸುವುದು ಕಷ್ಟವಲ್ಲ. ಪ್ರಧಾನ ಕಾರ್ಯದರ್ಶಿಗಳು ಗಮನ ಹರಿಸಿ ಸರ್ಕಾರದ ಹಂತದಲ್ಲಿ ಸರಿಪಡಿಸಬೇಕು ಮುಷ್ಕರಕ್ಕೆ ಸಂಘದ ಸಂಪೂರ್ಣ ಬೆಂಬಲವಿದೆ’ ಎಂದರು.</p>.<p><strong>‘ಪ್ರಧಾನ ಕಾರ್ಯದರ್ಶಿ ಪ್ರತಿಷ್ಠೆಯಿಂದ ವಿಳಂಬ’</strong></p><p>‘ಬೇಡಿಕೆಗಳ ಈಡೇರಿಕೆಗೆ ಹಲವು ವರ್ಷಗಳಿಂದ ಪ್ರಯತ್ನಗಳು ನಡೆದಿವೆ. ಇಲಾಖೆಯ ಈಗಿನ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರ ಪ್ರತಿಷ್ಠೆಯಿಂದ ಅನುಷ್ಠಾನ ವಿಳಂಬವಾಗುತ್ತಿದೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ದೂರಿದರು.</p><p>‘42 ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮವಿದ್ದು, ಕಾಲಕಾಲಕ್ಕೆ ಪರಿಷ್ಕರಣೆ ಆಗಿ ಬಡ್ತಿಯೂ ಸಿಗುತ್ತಿದೆ. ಆದರೆ, ಆರೋಗ್ಯ ಇಲಾಖೆಯಲ್ಲಿ ಇದು ಜಾರಿಯಾಗುತ್ತಿಲ್ಲ. ಅವರ ಬೇಡಿಕೆಗಳಿಗೆ ನಮ್ಮ ಸಂಘದ ಸಂಪೂರ್ಣ ಬೆಂಬಲವಿದ್ದು, ಮುಷ್ಕರದಲ್ಲಿ ನಾವೂ ಭಾಗಿಯಾಗುತ್ತೇವೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p><strong>ಬೇಡಿಕೆಗಳೇನು?</strong></p><p>l ವೈದ್ಯರು, ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮಾದರಿಯಲ್ಲಿ ವೇತನ ನೀಡಿ</p><p>l ಗುತ್ತಿಗೆ ವೈದ್ಯ, ನೌಕರರು, ಎನ್ಎಚ್ಎಂ ಗುತ್ತಿಗೆ ನೌಕರರಿಗೆ ಭದ್ರತೆ ನೀಡಿ, ವೇತನ ಹೆಚ್ಚಿಸಿ</p><p>l ಕೇಂದ್ರ ಪುರಸ್ಕೃತ ಯೋಜನೆಯಡಿ ಅಡಿ 6,000 ನೌಕರರಿಗೆ ವೇತನ ಭತ್ಯೆ ನೀಡಿ</p><p>l ಖಾಲಿ ಇರುವ 39 ಸಾವಿರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ</p><p>l ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ಮಾಡಿ, ಜ್ಯೇಷ್ಠತಾ ಪಟ್ಟಿ ಪ್ರಕಟಿಸಿ</p><p>l 5 ವರ್ಷದಿಂದ ಮುಂಬಡ್ತಿ ಸ್ಥಗಿತವಾಗಿದ್ದು, ಅದನ್ನು ಕೊಡಿ</p><p>l ವರ್ಗಾವಣೆ ಕಾಯ್ದೆಯಲ್ಲಿನ ನ್ಯೂನತೆ, ಅವೈಜ್ಞಾನಿಕ ಕೌನ್ಸೆಲಿಂಗ್ ಸರಿಪಡಿಸಿ</p>.<p><strong>5 ದಿನ ಕಪ್ಪುಪಟ್ಟಿ ಧರಿಸಿ ತುರ್ತು ಸೇವೆಗೆ ಲಭ್ಯ</strong></p><p>ಮಾರ್ಚ್ 16ರಿಂದ<br>ಅನಿರ್ದಿಷ್ಟಾವಧಿ ಮುಷ್ಕರ</p><p>ಮುಖ್ಯಮಂತ್ರಿ<br>ಮಧ್ಯಪ್ರವೇಶಕ್ಕೆ ಒತ್ತಾಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>