<p>ಬೆಂಗಳೂರು: ಹಲವು ಬಗೆಯ ಸೂಕ್ಷ್ಮಜೀವಿಗಳು ಪ್ರತಿರೋಧಕ ಶಕ್ತಿ ಬೆಳೆಸಿಕೊಂಡಿರುವುದು ಗಂಭೀರ ಬೆಳವಣಿಗೆ. ಇದರಿಂದ ಸಾರ್ವಜನಿಕ ಆರೋಗ್ಯ ಏರುಪೇರಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.</p>.<p>ರಾಜ್ಯದಲ್ಲೂ ಈ ಸಮಸ್ಯೆ ಗಂಭೀರವಾಗಿದೆ. ಇದರ ಪರಿಣಾಮ ಸಾಮಾನ್ಯ ಸೋಂಕುಗಳಿಗೂ ನೀಡುವ ಚಿಕಿತ್ಸೆ ಮತ್ತು ಔಷಧಗಳು ಪರಿಣಾಮ ಬೀರುತ್ತಿಲ್ಲ. ಇದರಿಂದ ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ ಎಂದು ವಿಶ್ವ ಸೂಕ್ಷ್ಮಜೀವಿಗಳ ಪ್ರತಿರೋಧಕ ಜಾಗೃತಿ ಸಪ್ತಾಹದ ಸಂದರ್ಭದಲ್ಲಿ ಅವರು ಮಾತನಾಡಿದರು.</p>.<p>ಈ ವಿಷಯದಲ್ಲಿ ಜಾಗೃತಿ ಮೂಡಿಸುವುದರ ಜತೆಗೆ, ಔಷಧ ನಿರೋಧಕ ಶಕ್ತಿಯನ್ನು ಬೆಳೆಸಿಕೊಂಡಿರುವ ಸೂಕ್ಷ್ಮಾಣುಗಳ ಹರಡುವಿಕೆ ಕಡಿಮೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಅಭಿಯಾನ ನಡೆಸಲಾಗುತ್ತಿದೆ ಎಂದರು.</p>.<p>ರಾಜ್ಯದಲ್ಲಿ ರೈತರು ಯಾವುದೇ ನಿಯಂತ್ರಣವಿಲ್ಲದೇ, ರಸಗೊಬ್ಬರ, ಔಷಧ ಬಳಸುತ್ತಿದ್ದಾರೆ. ಕೋಳಿ ಫಾರಂಗಳಲ್ಲಿ ಇವುಗಳ ಬಳಕೆಗೆ ಯಾವುದೇ ಲಗಾಮು ಇಲ್ಲ. ಇಂತಹ ಔಷಧಗಳ ಖರೀದಿಯ ಮೇಲೂ ಕಡಿವಾಣ ಹಾಕಬೇಕು ಎಂದು ದಿನೇಶ್ ಹೇಳಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಹಲವು ಬಗೆಯ ಸೂಕ್ಷ್ಮಜೀವಿಗಳು ಪ್ರತಿರೋಧಕ ಶಕ್ತಿ ಬೆಳೆಸಿಕೊಂಡಿರುವುದು ಗಂಭೀರ ಬೆಳವಣಿಗೆ. ಇದರಿಂದ ಸಾರ್ವಜನಿಕ ಆರೋಗ್ಯ ಏರುಪೇರಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.</p>.<p>ರಾಜ್ಯದಲ್ಲೂ ಈ ಸಮಸ್ಯೆ ಗಂಭೀರವಾಗಿದೆ. ಇದರ ಪರಿಣಾಮ ಸಾಮಾನ್ಯ ಸೋಂಕುಗಳಿಗೂ ನೀಡುವ ಚಿಕಿತ್ಸೆ ಮತ್ತು ಔಷಧಗಳು ಪರಿಣಾಮ ಬೀರುತ್ತಿಲ್ಲ. ಇದರಿಂದ ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ ಎಂದು ವಿಶ್ವ ಸೂಕ್ಷ್ಮಜೀವಿಗಳ ಪ್ರತಿರೋಧಕ ಜಾಗೃತಿ ಸಪ್ತಾಹದ ಸಂದರ್ಭದಲ್ಲಿ ಅವರು ಮಾತನಾಡಿದರು.</p>.<p>ಈ ವಿಷಯದಲ್ಲಿ ಜಾಗೃತಿ ಮೂಡಿಸುವುದರ ಜತೆಗೆ, ಔಷಧ ನಿರೋಧಕ ಶಕ್ತಿಯನ್ನು ಬೆಳೆಸಿಕೊಂಡಿರುವ ಸೂಕ್ಷ್ಮಾಣುಗಳ ಹರಡುವಿಕೆ ಕಡಿಮೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಅಭಿಯಾನ ನಡೆಸಲಾಗುತ್ತಿದೆ ಎಂದರು.</p>.<p>ರಾಜ್ಯದಲ್ಲಿ ರೈತರು ಯಾವುದೇ ನಿಯಂತ್ರಣವಿಲ್ಲದೇ, ರಸಗೊಬ್ಬರ, ಔಷಧ ಬಳಸುತ್ತಿದ್ದಾರೆ. ಕೋಳಿ ಫಾರಂಗಳಲ್ಲಿ ಇವುಗಳ ಬಳಕೆಗೆ ಯಾವುದೇ ಲಗಾಮು ಇಲ್ಲ. ಇಂತಹ ಔಷಧಗಳ ಖರೀದಿಯ ಮೇಲೂ ಕಡಿವಾಣ ಹಾಕಬೇಕು ಎಂದು ದಿನೇಶ್ ಹೇಳಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>