ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಎಡಬಿಡಂಗಿ ಸರ್ಕಾರ ಎನ್ನಲಾಗಿದೆ. ಆದರೆ ಇದೇ ನಮ್ಮ ಸರ್ಕಾರ ಉತ್ತಮವಾದ ನಿರ್ಧಾರಗಳಿಂದ ಕೊರೊನಾ ನಿಯಂತ್ರಣಕ್ಕೆ ತಂದಿದೆ. ರಾಜ್ಯ ಸರ್ಕಾರದ ಕ್ರಮಗಳಿಂದಾಗಿ ಕೊರೊನಾ ಸೋಂಕಿಗೊಳಗಾದವರಲ್ಲಿ 97.5% ರಷ್ಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ 1.22% ಗೆ ಇಳಿಕೆಯಾಗಿದೆ. ಯುಕೆಯಲ್ಲಿ ಲಾಕ್ಡೌನ್ ಆಗಿದೆ ಹಾಗೂ ಜರ್ಮನಿಯಲ್ಲಿ ರಾತ್ರಿ ಕರ್ಫ್ಯೂ ಆಗಿದೆ. ಹಾಗೆಂದು ಅಲ್ಲಿ ಇರುವವರಿಗೆ ಬುದ್ಧಿ ಇಲ್ಲ ಎಂದರ್ಥವಲ್ಲ. ನಮ್ಮ ಸರ್ಕಾರ ಯಾವುದೇ ರಾಜಕೀಯ ತೀರ್ಮಾನ ಕೈಗೊಂಡಿಲ್ಲ. ಆರೋಗ್ಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದವರ ಜೊತೆ ಕೂಲಕಂಷವಾಗಿ ಚರ್ಚಿಸಿ ಪ್ರತಿಯೊಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾತ್ರಿ ಕರ್ಫ್ಯೂ ಕುರಿತು ಕೂಡ ಹಲವಾರು ಬಾರಿ ಚರ್ಚಿಸಿ, ಜನರ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಸ್ಪಷ್ಟಪಡಿಸಿದರು.