‘ಬಿಸಿಗಾಳಿಯಿಂದ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿ, ಶಾಖಾಘಾತ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಗಾಗ ನೀರು ಕುಡಿಯಬೇಕು. ತಾಪಮಾನ ಹೆಚ್ಚಳದ ಕಾರಣ ಮಕ್ಕಳು, ವೃದ್ಧರು, ಗರ್ಭಿಣಿಯರು, ಹೃದಯ ಸೇರಿ ವಿವಿಧ ಅನಾರೋಗ್ಯ ಸಮಸ್ಯೆ ಇರುವವರ ರಕ್ಷಣೆಗೆ ಆದ್ಯತೆ ನೀಡಬೇಕು. ತಾಜಾ ಹಣ್ಣುಗಳ ಸೇವನೆ ಸೇರಿ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಇಲಾಖೆ ಹೇಳಿದೆ.