<p><strong>ಬೆಂಗಳೂರು:</strong> ‘ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ 10 ದಿನಗಳಲ್ಲಿ ವರದಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಲಾಗಿದೆ. ಈ ವರದಿ ಆಧರಿಸಿ ಹೃದಯಾಘಾತ ತಡೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. </p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಠಾತ್ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಕೋವಿಡ್ ಹಾಗೂ ಲಸಿಕೆಯ ಅಡ್ಡ ಪರಿಣಾಮದ ಬಗ್ಗೆ ಅಧ್ಯಯನ ನಡೆಸಲು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈ ಹಿಂದೆ ಸಮಿತಿ ರಚಿಸಲಾಗಿತ್ತು. ಹಾಸನದಲ್ಲಿ ವರದಿಯಾಗುತ್ತಿರುವ ಹೃದಯಾಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆಯೂ ಇದೇ ಸಮಿತಿಗೆ ಅಧ್ಯಯನ ನಡೆಸಲು ಸೂಚಿಸಲಾಗಿದೆ. ಹೃದಯಾಘಾತಕ್ಕೆ ಒಳಗಾದವರ ವಯಸ್ಸು, ವೈದ್ಯಕೀಯ ಇತಿಹಾಸ ಸೇರಿ ವಿವಿಧ ಅಂಶಗಳನ್ನು ಪರಿಗಣಿಸಿ ಸಮಿತಿ ಅಧ್ಯಯನ ಕೈಗೊಳ್ಳಲಿದೆ. ಈ ಅಧ್ಯಯನದ ಬಳಿಕ ನಿಖರ ಕಾರಣ ತಿಳಿಯಲಿದೆ’ ಎಂದು ಹೇಳಿದರು. </p>.<p>‘ಬದಲಾದ ಜೀವನಶೈಲಿಯಿಂದ ಸಹಜವಾಗಿಯೇ ವಿವಿಧ ಕಾಯಿಲೆಗಳಿಂದ ಮೃತಪಡುವವರ ಸಂಖ್ಯೆ ಹೆಚ್ಚುತ್ತಿದೆ. ಜನರು ಉತ್ತಮ ಜೀವನಶೈಲಿ ಅಳವಡಿಸಿಕೊಂಡು, ಹೃದಯದ ಆರೋಗ್ಯಕ್ಕೆ ಆದ್ಯತೆ ನೀಡಬೇಕು’ ಎಂದು ತಿಳಿಸಿದರು. </p>.<p>‘ಹೃದಯ ತಪಾಸಣೆ ಹಾಗೂ ಚಿಕಿತ್ಸೆಗೆ ಇಲಾಖೆಯು ಆದ್ಯತೆ ನೀಡಿದ್ದು, ‘ಸ್ಟೆಮಿ’ (ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗಿದೆ. ಹಾಸನದಲ್ಲಿ ಹೃದ್ರೋಗಕ್ಕೆ ಸಂಬಂಧಿಸಿದಂತೆ 2023ರ ಮಾರ್ಚ್ನಿಂದ 2025ರ ಮೇ ತಿಂಗಳ ಅವಧಿಯಲ್ಲಿ ಈ ಕಾರ್ಯಕ್ರಮದಡಿ 37,847 ಮಂದಿಗೆ ಇಸಿಜಿ ಮಾಡಲಾಗಿದೆ. 480 ಪ್ರಕರಣಗಳಲ್ಲಿ ಹೃದಯ ಸ್ನಾಯುವಿನ ಸೋಂಕು ದೃಢಪಟ್ಟಿದ್ದು, ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇವರಲ್ಲಿ 420 ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದು, 60 ಮಂದಿ ಮೃತಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದರು. </p>.<p>‘ಹೃದಯಾಘಾತಕ್ಕೆ ಕೊರೊನಾ ಸೋಂಕು ಅಥವಾ ಕೋವಿಡ್ ಲಸಿಕೆ ಕಾರಣವೆಂದು ಹೇಳಲು ಪುರಾವೆಗಳಿಲ್ಲ. ಜಗತ್ತಿನಾದ್ಯಂತ ಲಸಿಕೆ ನೀಡಲಾಗಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಅಥವಾ ರಾಷ್ಟ್ರ ಮಟ್ಟದಲ್ಲಿ ಅಧ್ಯಯನ ನಡೆಯಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನಂತಹ (ಐಸಿಎಂಆರ್) ಸಂಸ್ಥೆಗಳು ಅಧ್ಯಯನ ಕೈಗೊಳ್ಳಬೇಕು. ನಮ್ಮ ವ್ಯಾಪ್ತಿಯಲ್ಲಿ ಈ ಅಧ್ಯಯನ ಕಷ್ಟ. ಆದರೂ ಮುಖ್ಯಮಂತ್ರಿ ಅವರ ಸೂಚನೆ ಅನುಸಾರ ರಾಜ್ಯದಲ್ಲಿ ಅಧ್ಯಯನಕ್ಕೆ ಸಮಿತಿ ರಚಿಸಲಾಗಿದೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ 10 ದಿನಗಳಲ್ಲಿ ವರದಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಲಾಗಿದೆ. ಈ ವರದಿ ಆಧರಿಸಿ ಹೃದಯಾಘಾತ ತಡೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. </p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಠಾತ್ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಕೋವಿಡ್ ಹಾಗೂ ಲಸಿಕೆಯ ಅಡ್ಡ ಪರಿಣಾಮದ ಬಗ್ಗೆ ಅಧ್ಯಯನ ನಡೆಸಲು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈ ಹಿಂದೆ ಸಮಿತಿ ರಚಿಸಲಾಗಿತ್ತು. ಹಾಸನದಲ್ಲಿ ವರದಿಯಾಗುತ್ತಿರುವ ಹೃದಯಾಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆಯೂ ಇದೇ ಸಮಿತಿಗೆ ಅಧ್ಯಯನ ನಡೆಸಲು ಸೂಚಿಸಲಾಗಿದೆ. ಹೃದಯಾಘಾತಕ್ಕೆ ಒಳಗಾದವರ ವಯಸ್ಸು, ವೈದ್ಯಕೀಯ ಇತಿಹಾಸ ಸೇರಿ ವಿವಿಧ ಅಂಶಗಳನ್ನು ಪರಿಗಣಿಸಿ ಸಮಿತಿ ಅಧ್ಯಯನ ಕೈಗೊಳ್ಳಲಿದೆ. ಈ ಅಧ್ಯಯನದ ಬಳಿಕ ನಿಖರ ಕಾರಣ ತಿಳಿಯಲಿದೆ’ ಎಂದು ಹೇಳಿದರು. </p>.<p>‘ಬದಲಾದ ಜೀವನಶೈಲಿಯಿಂದ ಸಹಜವಾಗಿಯೇ ವಿವಿಧ ಕಾಯಿಲೆಗಳಿಂದ ಮೃತಪಡುವವರ ಸಂಖ್ಯೆ ಹೆಚ್ಚುತ್ತಿದೆ. ಜನರು ಉತ್ತಮ ಜೀವನಶೈಲಿ ಅಳವಡಿಸಿಕೊಂಡು, ಹೃದಯದ ಆರೋಗ್ಯಕ್ಕೆ ಆದ್ಯತೆ ನೀಡಬೇಕು’ ಎಂದು ತಿಳಿಸಿದರು. </p>.<p>‘ಹೃದಯ ತಪಾಸಣೆ ಹಾಗೂ ಚಿಕಿತ್ಸೆಗೆ ಇಲಾಖೆಯು ಆದ್ಯತೆ ನೀಡಿದ್ದು, ‘ಸ್ಟೆಮಿ’ (ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗಿದೆ. ಹಾಸನದಲ್ಲಿ ಹೃದ್ರೋಗಕ್ಕೆ ಸಂಬಂಧಿಸಿದಂತೆ 2023ರ ಮಾರ್ಚ್ನಿಂದ 2025ರ ಮೇ ತಿಂಗಳ ಅವಧಿಯಲ್ಲಿ ಈ ಕಾರ್ಯಕ್ರಮದಡಿ 37,847 ಮಂದಿಗೆ ಇಸಿಜಿ ಮಾಡಲಾಗಿದೆ. 480 ಪ್ರಕರಣಗಳಲ್ಲಿ ಹೃದಯ ಸ್ನಾಯುವಿನ ಸೋಂಕು ದೃಢಪಟ್ಟಿದ್ದು, ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇವರಲ್ಲಿ 420 ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದು, 60 ಮಂದಿ ಮೃತಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದರು. </p>.<p>‘ಹೃದಯಾಘಾತಕ್ಕೆ ಕೊರೊನಾ ಸೋಂಕು ಅಥವಾ ಕೋವಿಡ್ ಲಸಿಕೆ ಕಾರಣವೆಂದು ಹೇಳಲು ಪುರಾವೆಗಳಿಲ್ಲ. ಜಗತ್ತಿನಾದ್ಯಂತ ಲಸಿಕೆ ನೀಡಲಾಗಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಅಥವಾ ರಾಷ್ಟ್ರ ಮಟ್ಟದಲ್ಲಿ ಅಧ್ಯಯನ ನಡೆಯಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನಂತಹ (ಐಸಿಎಂಆರ್) ಸಂಸ್ಥೆಗಳು ಅಧ್ಯಯನ ಕೈಗೊಳ್ಳಬೇಕು. ನಮ್ಮ ವ್ಯಾಪ್ತಿಯಲ್ಲಿ ಈ ಅಧ್ಯಯನ ಕಷ್ಟ. ಆದರೂ ಮುಖ್ಯಮಂತ್ರಿ ಅವರ ಸೂಚನೆ ಅನುಸಾರ ರಾಜ್ಯದಲ್ಲಿ ಅಧ್ಯಯನಕ್ಕೆ ಸಮಿತಿ ರಚಿಸಲಾಗಿದೆ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>