<p><strong>ಬೆಂಗಳೂರು: </strong>ಅತಿವೃಷ್ಠಿ ಪೀಡಿತ ತಾಲ್ಲೂಕುಗಳ ಪಟ್ಟಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕನ್ನು ಸೇರಿಸಲಾಗಿದೆ.</p>.<p>ರಾಜ್ಯದ 13 ಜಿಲ್ಲೆಗಳ 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಈ ಹಿಂದೆ ಘೋಷಣೆ ಮಾಡಲಾಗಿತ್ತು. ಇದೀಗ ಹೆಚ್ಚುವರಿಯಾಗಿ ಮತ್ತೆ 22 ತಾಲ್ಲೂಕುಗಳನ್ನು ಈ ಪಟ್ಟಿಯಲ್ಲಿ ಸೇರಿಸಗೊಳಿಸಲಾಗಿದೆ.</p>.<p>ತಮ್ಮ ಕ್ಷೇತ್ರವನ್ನು ಅತಿವೃಷ್ಠಿ ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಆಗ ಸ್ಥಳಕ್ಕೆ ಬಂದಿದ್ದ ಸಚಿವ ಆರ್.ಅಶೋಕ ಮುಂದೆ ಕಣ್ಣೀರು ಹಾಕಿದ್ದರು.</p>.<p>ಈ ಸಂದರ್ಭದಲ್ಲಿ ತಾಲ್ಲೂಕನ್ನು ಅತಿವೃಷ್ಠಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಭರವಸೆಯನ್ನು ಅಶೋಕ ನೀಡಿದ್ದರು. ಅದರಂತೆ ಇದೀಗ ಬಿಡುಗಡೆಗೊಳಿಸಿರುವ ಹೆಚ್ಚುವರಿ ತಾಲ್ಲೂಕುಗಳ ಪಟ್ಟಿಯಲ್ಲಿ ಮೂಡಿಗೆರೆ ತಾಲ್ಲೂಕನ್ನು ಸೇರಿಸಲಾಗಿದೆ.</p>.<p><strong>ಹೊಸತಾಗಿ ಸೇರಿಸಿದ 22 ತಾಲ್ಲೂಕುಗಳು: </strong>ಬೆಳಗಾವಿ, ಚಿಕ್ಕಮಗಳೂರು, ಹುಬ್ಬಳ್ಳಿನಗರ, ಕಡೂರು, ದಾವಣಗೆರೆ, ದಾಂಡೇಲಿ, ಆಲೂರು, ಲಕ್ಷ್ಮೇಶ್ವರ, ತರೀಕೆರೆ, ಮುಂಡಗೋಡು, ಸೂಪ, ಹುಬ್ಬಳ್ಳಿ, ಭದ್ರಾವತಿ, ಚೆನ್ನಗಿರಿ, ಅಣ್ಣಿಗೇರಿ, ಬಬಲೇಶ್ವರ, ನಿಡಗುಂದಿ, ಕೋಲ್ಹಾರ, ಮುದ್ದೆಬಿಹಾಳ, ಹರಪಮಹಳ್ಳಿ, ಹೊಸನಗರ, ಮೂಡಿಗೆರೆ ತಾಲ್ಲೂಕುಗಳನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ.</p>.<p>ಈ ಬಗ್ಗೆ ಮಾತನಾಡಿದ ಸಚಿವ ಅಶೋಕ್, 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಈ ಹಿಂದೆ ಘೋಷಣೆ ಮಾಡಲಾಗಿತ್ತು. ಮಳೆ ಹೆಚ್ಚಾಗಿ ಮತ್ತೆ ಹಾನಿ ಉಂಟಾಗಿದೆ. ಹೀಗಾಗಿ ಹೊಸತಾಗಿ 22 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದರು.</p>.<p>ಬೆಂಗಳೂರು ನಗರದಲ್ಲೂ 50 ಕ್ಕೂ ಹೆಚ್ವು ರಸ್ತೆಗಳಲ್ಲಿ ನೀರು ನಿಲ್ಲುತ್ತಿದೆ. ಇದನ್ನು ಗುರುತಿಲಾಗಿದ್ದು ತುರ್ತು ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/flood-effects-mudigere-mla-mp-kumaraswamy-protest-in-front-of-vidhana-soudha-gandhi-statue-857061.html" target="_blank">ಮೂಡಿಗೆರೆ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶ:ಎಂ.ಪಿ. ಕುಮಾರಸ್ವಾಮಿಧರಣಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅತಿವೃಷ್ಠಿ ಪೀಡಿತ ತಾಲ್ಲೂಕುಗಳ ಪಟ್ಟಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕನ್ನು ಸೇರಿಸಲಾಗಿದೆ.</p>.<p>ರಾಜ್ಯದ 13 ಜಿಲ್ಲೆಗಳ 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಈ ಹಿಂದೆ ಘೋಷಣೆ ಮಾಡಲಾಗಿತ್ತು. ಇದೀಗ ಹೆಚ್ಚುವರಿಯಾಗಿ ಮತ್ತೆ 22 ತಾಲ್ಲೂಕುಗಳನ್ನು ಈ ಪಟ್ಟಿಯಲ್ಲಿ ಸೇರಿಸಗೊಳಿಸಲಾಗಿದೆ.</p>.<p>ತಮ್ಮ ಕ್ಷೇತ್ರವನ್ನು ಅತಿವೃಷ್ಠಿ ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಆಗ ಸ್ಥಳಕ್ಕೆ ಬಂದಿದ್ದ ಸಚಿವ ಆರ್.ಅಶೋಕ ಮುಂದೆ ಕಣ್ಣೀರು ಹಾಕಿದ್ದರು.</p>.<p>ಈ ಸಂದರ್ಭದಲ್ಲಿ ತಾಲ್ಲೂಕನ್ನು ಅತಿವೃಷ್ಠಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಭರವಸೆಯನ್ನು ಅಶೋಕ ನೀಡಿದ್ದರು. ಅದರಂತೆ ಇದೀಗ ಬಿಡುಗಡೆಗೊಳಿಸಿರುವ ಹೆಚ್ಚುವರಿ ತಾಲ್ಲೂಕುಗಳ ಪಟ್ಟಿಯಲ್ಲಿ ಮೂಡಿಗೆರೆ ತಾಲ್ಲೂಕನ್ನು ಸೇರಿಸಲಾಗಿದೆ.</p>.<p><strong>ಹೊಸತಾಗಿ ಸೇರಿಸಿದ 22 ತಾಲ್ಲೂಕುಗಳು: </strong>ಬೆಳಗಾವಿ, ಚಿಕ್ಕಮಗಳೂರು, ಹುಬ್ಬಳ್ಳಿನಗರ, ಕಡೂರು, ದಾವಣಗೆರೆ, ದಾಂಡೇಲಿ, ಆಲೂರು, ಲಕ್ಷ್ಮೇಶ್ವರ, ತರೀಕೆರೆ, ಮುಂಡಗೋಡು, ಸೂಪ, ಹುಬ್ಬಳ್ಳಿ, ಭದ್ರಾವತಿ, ಚೆನ್ನಗಿರಿ, ಅಣ್ಣಿಗೇರಿ, ಬಬಲೇಶ್ವರ, ನಿಡಗುಂದಿ, ಕೋಲ್ಹಾರ, ಮುದ್ದೆಬಿಹಾಳ, ಹರಪಮಹಳ್ಳಿ, ಹೊಸನಗರ, ಮೂಡಿಗೆರೆ ತಾಲ್ಲೂಕುಗಳನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ.</p>.<p>ಈ ಬಗ್ಗೆ ಮಾತನಾಡಿದ ಸಚಿವ ಅಶೋಕ್, 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಈ ಹಿಂದೆ ಘೋಷಣೆ ಮಾಡಲಾಗಿತ್ತು. ಮಳೆ ಹೆಚ್ಚಾಗಿ ಮತ್ತೆ ಹಾನಿ ಉಂಟಾಗಿದೆ. ಹೀಗಾಗಿ ಹೊಸತಾಗಿ 22 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದರು.</p>.<p>ಬೆಂಗಳೂರು ನಗರದಲ್ಲೂ 50 ಕ್ಕೂ ಹೆಚ್ವು ರಸ್ತೆಗಳಲ್ಲಿ ನೀರು ನಿಲ್ಲುತ್ತಿದೆ. ಇದನ್ನು ಗುರುತಿಲಾಗಿದ್ದು ತುರ್ತು ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/flood-effects-mudigere-mla-mp-kumaraswamy-protest-in-front-of-vidhana-soudha-gandhi-statue-857061.html" target="_blank">ಮೂಡಿಗೆರೆ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶ:ಎಂ.ಪಿ. ಕುಮಾರಸ್ವಾಮಿಧರಣಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>