<p><strong>ಬೆಂಗಳೂರು:</strong> ಬೆಂಗಳೂರು ನಗರದ ಸುತ್ತಮುತ್ತ ಬೆಳೆಯುವ ಸೊಪ್ಪು–ತರಕಾರಿಗಳಲ್ಲಿ ಸೀಸ ಮತ್ತು ಭಾರಿ ಲೋಹಗಳ ಅಂಶಗಳಿವೆ. ನೆಲ, ಜಲ, ವಾಯು ಮಾಲಿನ್ಯ ತಾರಕಕ್ಕೆ ಏರಿದ್ದು, ಜನರ ಆರೋಗ್ಯಕ್ಕೆ ಗಂಡಾಂತರಕಾರಿಯಾಗಿ ಪರಿಣಮಿಸಿದೆ ಎಂದು ಬಿಜೆಪಿಯ ಡಾ.ಸಿ.ಎನ್.ಅಶ್ವತ್ಥನಾರಾಯಣ ಆತಂಕ ವ್ಯಕ್ತಪಡಿಸಿದರು.</p>.<p>ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಈ ಪರಿಸ್ಥಿತಿಯನ್ನು ನಿಭಾಯಿಸಲು ಅಂತರ್ ಇಲಾಖಾ ಅಧಿಕಾರಿಗಳು ಮತ್ತು ಸಚಿವರ ಸಮಿತಿಯೊಂದನ್ನು ರಚಿಸಬೇಕು ಎಂದು ಸಲಹೆ ನೀಡಿದರು. ಈ ವಿಷಯವಾಗಿ ಪಕ್ಷಬೇಧ ಮರೆತ ಸದಸ್ಯರು, ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಕಲಬೆರಕೆ, ಮೊಟ್ಟೆಗಳಲ್ಲಿ ಹಾನಿಕಾರಕ ಅಂಶಗಳು, ಬೀದಿ ಬದಿ ಫಾಸ್ಟ್ಫುಡ್ ಅಂಗಡಿ ಮತ್ತು ಹೋಟೆಲ್ಗಳಲ್ಲಿ ನಿಷೇಧಿತ ರಾಸಾಯನಿಕ ಬಳಸಲಾಗುತ್ತಿದೆ. ಸೊಪ್ಪು– ತರಕಾರಿಗಳಲ್ಲಿ ಭಾರ ಲೋಹ, ಸೀಸದ ಅಂಶ 20 ಪಟ್ಟು ಹೆಚ್ಚಾಗಿದೆ. ಇದರ ಪರಿಣಾಮ ಪ್ರತಿ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರು ಫ್ಯಾಟಿ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿ, ಬೆಂಗಳೂರಿನ ಕೊಳಚೆ ನೀರು ಬಳಸಿ ಸೊಪ್ಪು–ತರಕಾರಿ ಬೆಳೆಯುತ್ತಿದ್ದಾರೆ. ಅದೇ ನೀರಿನಲ್ಲಿ ಹುಲ್ಲು ಬೆಳೆದು ಜಾನುವಾರುಗಳಿಗೆ ಹಾಕುತ್ತಿದ್ದಾರೆ. ಇದರಿಂದ ಹಾಲಿನಲ್ಲೂ ಅಪಾಯಕಾರಿ ರಾಸಾಯನಿಕ ಇರುವುದು ಪತ್ತೆಯಾಗಿದೆ ಎಂದು ತಿಳಿಸಿದರು.</p>.<p>ಆದ್ದರಿಂದ, ಈ ವಿಷಯಕ್ಕೆ ಸಂಬಂಧಿಸಿದ ಸಚಿವರನ್ನು ಒಳಗೊಂಡ ಉಸ್ತುವಾರಿ ಸಮಿತಿ ರಚಿಸಿ ಪರಿಹಾರೋಪಾಯವನ್ನು ಕಂಡುಕೊಳ್ಳಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ನಗರದ ಸುತ್ತಮುತ್ತ ಬೆಳೆಯುವ ಸೊಪ್ಪು–ತರಕಾರಿಗಳಲ್ಲಿ ಸೀಸ ಮತ್ತು ಭಾರಿ ಲೋಹಗಳ ಅಂಶಗಳಿವೆ. ನೆಲ, ಜಲ, ವಾಯು ಮಾಲಿನ್ಯ ತಾರಕಕ್ಕೆ ಏರಿದ್ದು, ಜನರ ಆರೋಗ್ಯಕ್ಕೆ ಗಂಡಾಂತರಕಾರಿಯಾಗಿ ಪರಿಣಮಿಸಿದೆ ಎಂದು ಬಿಜೆಪಿಯ ಡಾ.ಸಿ.ಎನ್.ಅಶ್ವತ್ಥನಾರಾಯಣ ಆತಂಕ ವ್ಯಕ್ತಪಡಿಸಿದರು.</p>.<p>ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಈ ಪರಿಸ್ಥಿತಿಯನ್ನು ನಿಭಾಯಿಸಲು ಅಂತರ್ ಇಲಾಖಾ ಅಧಿಕಾರಿಗಳು ಮತ್ತು ಸಚಿವರ ಸಮಿತಿಯೊಂದನ್ನು ರಚಿಸಬೇಕು ಎಂದು ಸಲಹೆ ನೀಡಿದರು. ಈ ವಿಷಯವಾಗಿ ಪಕ್ಷಬೇಧ ಮರೆತ ಸದಸ್ಯರು, ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಹಾಲು ಮತ್ತು ಹಾಲಿನ ಉತ್ಪನ್ನಗಳಲ್ಲಿ ಕಲಬೆರಕೆ, ಮೊಟ್ಟೆಗಳಲ್ಲಿ ಹಾನಿಕಾರಕ ಅಂಶಗಳು, ಬೀದಿ ಬದಿ ಫಾಸ್ಟ್ಫುಡ್ ಅಂಗಡಿ ಮತ್ತು ಹೋಟೆಲ್ಗಳಲ್ಲಿ ನಿಷೇಧಿತ ರಾಸಾಯನಿಕ ಬಳಸಲಾಗುತ್ತಿದೆ. ಸೊಪ್ಪು– ತರಕಾರಿಗಳಲ್ಲಿ ಭಾರ ಲೋಹ, ಸೀಸದ ಅಂಶ 20 ಪಟ್ಟು ಹೆಚ್ಚಾಗಿದೆ. ಇದರ ಪರಿಣಾಮ ಪ್ರತಿ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರು ಫ್ಯಾಟಿ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿ, ಬೆಂಗಳೂರಿನ ಕೊಳಚೆ ನೀರು ಬಳಸಿ ಸೊಪ್ಪು–ತರಕಾರಿ ಬೆಳೆಯುತ್ತಿದ್ದಾರೆ. ಅದೇ ನೀರಿನಲ್ಲಿ ಹುಲ್ಲು ಬೆಳೆದು ಜಾನುವಾರುಗಳಿಗೆ ಹಾಕುತ್ತಿದ್ದಾರೆ. ಇದರಿಂದ ಹಾಲಿನಲ್ಲೂ ಅಪಾಯಕಾರಿ ರಾಸಾಯನಿಕ ಇರುವುದು ಪತ್ತೆಯಾಗಿದೆ ಎಂದು ತಿಳಿಸಿದರು.</p>.<p>ಆದ್ದರಿಂದ, ಈ ವಿಷಯಕ್ಕೆ ಸಂಬಂಧಿಸಿದ ಸಚಿವರನ್ನು ಒಳಗೊಂಡ ಉಸ್ತುವಾರಿ ಸಮಿತಿ ರಚಿಸಿ ಪರಿಹಾರೋಪಾಯವನ್ನು ಕಂಡುಕೊಳ್ಳಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>