ಚಂಚೋಳಿಯಲ್ಲಿ ಮನೆಗಳಿಗೆ ಹಾನಿ: ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಪಟ್ಟಣದಲ್ಲಿ ಎರಡು ಮನೆಗಳಿಗೆ ಹಾನಿಯಾಗಿದೆ. ಪುರಸಭೆ ವ್ಯಾಪ್ತಿಯ ಚಂದಾಪುರ ಮಾರ್ಗದ ಮುಖ್ಯರಸ್ತೆಯಲ್ಲಿರುವ ಪದ್ಮಾ ಪದವಿ ಪೂರ್ವ ಕಾಲೇಜು ಬಳಿಯ ಮಹೇಶ ಸಜ್ಜನ್ ಅವರ ಮನೆಯ ಗೋಡೆ ನಸುಕಿನ 5 ಗಂಟೆ ಸುಮಾರಿಗೆ ಉರುಳಿದೆ. ಆಗ ಕಲ್ಲುಗಳು ಉರುಳಿದ ಸದ್ದು ಬಂದಿದ್ದು ಮನೆಯವರು ಹೊರಗಡೆ ಓಡಿ ಬಂದಿದ್ದೇವೆ. ಆಗ ಅಕ್ಕಪಕ್ಕದವರು ಬಂದು ನೋಡಿದಾಗ ಮನೆಯ ಗೋಡೆ ಉರುಳಿತ್ತು. ನಾವು ಪಕ್ಕದ ಕೋಣೆಯಲ್ಲಿ ಮಲಗಿದ್ದೆವು ಎಂದು ಮಹೇಶ ಸಜ್ಜನ್ ತಿಳಿಸಿದರು.