<p><strong>ಬೆಂಗಳೂರು/ ಕಾರವಾರ:</strong> ರಾಜ್ಯದ ವಿವಿಧೆಡೆ ಶನಿವಾರ ಸಂಜೆ ಮಳೆಯಾಗಿ ತಂಪೆರೆದಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ನೇರಲಗ ಗ್ರಾಮದಲ್ಲಿ ಶನಿವಾರ ಸಂಜೆ ಸಿಡಿಲು ಬಡಿದು ರೈತ ನರಸಪ್ಪ ಜಯವಂತ ಕದಂ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ, ಮಂಡ್ಯ ಜಿಲ್ಲೆಯ ಪಾಂಡವಪುರ, ಚಾಮರಾಜನಗರ ಜಿಲ್ಲೆಯ ಬಂಡೀಪುರ ಜೊತೆಗೆ ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ.</p>.<p>ಮುಂಡಗೋಡ ತಾಲ್ಲೂಕಿನಅರಶಿಣಗೇರಿ ಗ್ರಾಮದಲ್ಲಿ ಭಾರಿ ಗಾಳಿ, ಮಳೆಗೆ ಕೋಳಿ ಫಾರಂನ ಚಾವಣಿ ಬಿದ್ದು ಅಂದಾಜು 5,000 ಕೋಳಿಗಳು ಸತ್ತಿವೆ. ಸ್ಥಳೀಯ ನಿವಾಸಿ ಹಜರತ್ ಅಲಿತಮ್ಮ ಹೊಲದಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದರು. ಈಅವಘಡದಲ್ಲಿ ಸುಮಾರು ₹ 15 ಲಕ್ಷದಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p>.<p>ಭಾರಿ ಗಾಳಿಯಿಂದಾಗಿಇದೇ ಗ್ರಾಮದಲ್ಲಿ 15ರಿಂದ 20 ಎಕರೆಗಳಷ್ಟು ಬಾಳೆ ಮತ್ತು ಮಾವಿನ ತೋಟಕ್ಕೆ ಹಾನಿಯಾಗಿದೆ. ಬಾಳೆ ಗಿಡಗಳು ಮುರಿದು ಬಿದ್ದಿವೆ.ಫಸಲಿಗೆ ಬಂದಿದ್ದ ಮಾವು ಬೆಳೆಯೂ ನೆಲಕಚ್ಚಿದೆ. ಬೆಳೆಗಾರರು ಕಂಗಾಲಾಗಿದ್ದಾರೆ.</p>.<p>ತಾಲ್ಲೂಕಿನ ಹುನಗುಂದ ಗ್ರಾಮದಲ್ಲಿ ಸಿಡಿಲು ಬಡಿದು ಒಂದು ಎತ್ತು ಸತ್ತಿದೆ.ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆಗಳ ಮೇಲೆ ಹೊದಿಸಲಾಗಿದ್ದ ಸಿಮೆಂಟ್, ಕಬ್ಬಿಣದ ಶೀಟ್ಗಳು ಹಾರಿಹೋಗಿವೆ.</p>.<p>ಹಳಿಯಾಳ ಪಟ್ಟಣದಲ್ಲೂ ಅರ್ಧ ಗಂಟೆ ಗಾಳಿ ಮಳೆಯಾಗಿದ್ದು, ಹತ್ತಾರು ವಿದ್ಯುತ್ ಕಂಬಗಳು, ತೆಂಗಿನ ಮರಗಳು ಮುರಿದುಬಿದ್ದಿವೆ. ಶಿರಸಿ, ಸಿದ್ದಾಪುರ, ಯಲ್ಲಾಪುರಸುತ್ತಮುತ್ತ ದಟ್ಟವಾದ ಮೋಡ ಕವಿದು, ನಾಲ್ಕಾರು ಹನಿ ತುಂತುರು ಮಳೆಯಾಯಿತು.</p>.<p>ಧಾರವಾಡ, ಬೆಳಗಾವಿ, ಗದಗ, ವಿಜಯಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಶನಿವಾರ ಸಾಧಾರಣ ಮಳೆಯಾಗಿದೆ. ಹಾವೇರಿ ಜಿಲ್ಲೆಯ ಅಕ್ಕಿಆಲೂರು ಹಾಗೂ ಸುತ್ತಮುತ್ತ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.</p>.<p>ಬೆಳಗಾವಿ ಹಾಗೂ ಖಾನಾಪುರ ಸುತ್ತಮುತ್ತಲು ಸುಮಾರು ಅರ್ಧ ಗಂಟೆ ಮಳೆಯಾಗಿದೆ. ಗಾಳಿ ಜೋರಾಗಿ ಬೀಸಿದ್ದರಿಂದ ಹಲವು ಕಡೆ ಮರಗಳು ಧರೆಗುರುಳಿವೆ. ವಿದ್ಯುತ್ ಕಂಬಗಳು ಕುಸಿದು ಬಿದ್ದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು/ ಕಾರವಾರ:</strong> ರಾಜ್ಯದ ವಿವಿಧೆಡೆ ಶನಿವಾರ ಸಂಜೆ ಮಳೆಯಾಗಿ ತಂಪೆರೆದಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ನೇರಲಗ ಗ್ರಾಮದಲ್ಲಿ ಶನಿವಾರ ಸಂಜೆ ಸಿಡಿಲು ಬಡಿದು ರೈತ ನರಸಪ್ಪ ಜಯವಂತ ಕದಂ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ, ಮಂಡ್ಯ ಜಿಲ್ಲೆಯ ಪಾಂಡವಪುರ, ಚಾಮರಾಜನಗರ ಜಿಲ್ಲೆಯ ಬಂಡೀಪುರ ಜೊತೆಗೆ ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ.</p>.<p>ಮುಂಡಗೋಡ ತಾಲ್ಲೂಕಿನಅರಶಿಣಗೇರಿ ಗ್ರಾಮದಲ್ಲಿ ಭಾರಿ ಗಾಳಿ, ಮಳೆಗೆ ಕೋಳಿ ಫಾರಂನ ಚಾವಣಿ ಬಿದ್ದು ಅಂದಾಜು 5,000 ಕೋಳಿಗಳು ಸತ್ತಿವೆ. ಸ್ಥಳೀಯ ನಿವಾಸಿ ಹಜರತ್ ಅಲಿತಮ್ಮ ಹೊಲದಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದರು. ಈಅವಘಡದಲ್ಲಿ ಸುಮಾರು ₹ 15 ಲಕ್ಷದಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p>.<p>ಭಾರಿ ಗಾಳಿಯಿಂದಾಗಿಇದೇ ಗ್ರಾಮದಲ್ಲಿ 15ರಿಂದ 20 ಎಕರೆಗಳಷ್ಟು ಬಾಳೆ ಮತ್ತು ಮಾವಿನ ತೋಟಕ್ಕೆ ಹಾನಿಯಾಗಿದೆ. ಬಾಳೆ ಗಿಡಗಳು ಮುರಿದು ಬಿದ್ದಿವೆ.ಫಸಲಿಗೆ ಬಂದಿದ್ದ ಮಾವು ಬೆಳೆಯೂ ನೆಲಕಚ್ಚಿದೆ. ಬೆಳೆಗಾರರು ಕಂಗಾಲಾಗಿದ್ದಾರೆ.</p>.<p>ತಾಲ್ಲೂಕಿನ ಹುನಗುಂದ ಗ್ರಾಮದಲ್ಲಿ ಸಿಡಿಲು ಬಡಿದು ಒಂದು ಎತ್ತು ಸತ್ತಿದೆ.ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆಗಳ ಮೇಲೆ ಹೊದಿಸಲಾಗಿದ್ದ ಸಿಮೆಂಟ್, ಕಬ್ಬಿಣದ ಶೀಟ್ಗಳು ಹಾರಿಹೋಗಿವೆ.</p>.<p>ಹಳಿಯಾಳ ಪಟ್ಟಣದಲ್ಲೂ ಅರ್ಧ ಗಂಟೆ ಗಾಳಿ ಮಳೆಯಾಗಿದ್ದು, ಹತ್ತಾರು ವಿದ್ಯುತ್ ಕಂಬಗಳು, ತೆಂಗಿನ ಮರಗಳು ಮುರಿದುಬಿದ್ದಿವೆ. ಶಿರಸಿ, ಸಿದ್ದಾಪುರ, ಯಲ್ಲಾಪುರಸುತ್ತಮುತ್ತ ದಟ್ಟವಾದ ಮೋಡ ಕವಿದು, ನಾಲ್ಕಾರು ಹನಿ ತುಂತುರು ಮಳೆಯಾಯಿತು.</p>.<p>ಧಾರವಾಡ, ಬೆಳಗಾವಿ, ಗದಗ, ವಿಜಯಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಶನಿವಾರ ಸಾಧಾರಣ ಮಳೆಯಾಗಿದೆ. ಹಾವೇರಿ ಜಿಲ್ಲೆಯ ಅಕ್ಕಿಆಲೂರು ಹಾಗೂ ಸುತ್ತಮುತ್ತ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.</p>.<p>ಬೆಳಗಾವಿ ಹಾಗೂ ಖಾನಾಪುರ ಸುತ್ತಮುತ್ತಲು ಸುಮಾರು ಅರ್ಧ ಗಂಟೆ ಮಳೆಯಾಗಿದೆ. ಗಾಳಿ ಜೋರಾಗಿ ಬೀಸಿದ್ದರಿಂದ ಹಲವು ಕಡೆ ಮರಗಳು ಧರೆಗುರುಳಿವೆ. ವಿದ್ಯುತ್ ಕಂಬಗಳು ಕುಸಿದು ಬಿದ್ದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>