<p><strong>ಹುಬ್ಬಳ್ಳಿ</strong>: ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಗದಗ ಸೇರಿದಂತೆ ಬಹುತೇಕ ಕಡೆ ಮಂಗಳವಾರ ರಾತ್ರಿ ಮತ್ತು ಬುಧವಾರ ಉತ್ತಮ ಮಳೆಯಾಯಿತು. ಬಹುತೇಕ ಕಡೆ ಮನೆಗಳಿಗೆ ಹಾನಿಯಾಗಿದೆ. ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದವು.</p><p>ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಸಮೀಪದ ಚಂದನಹೊಸೂರ ಗ್ರಾಮದ ಬಳಿ ಮಂಗಳವಾರ ರಾತ್ರಿ ತಾರಿಹಾಳ ಗ್ರಾಮ ಪಂಚಾಯಿತಿ ಸಿಬ್ಬಂದಿ, ಖಾನಾಪೂರ ತಾಲ್ಲೂಕಿನ ಗಾಡಿಕೊಪ್ಪ ಗ್ರಾಮದ ನಿವಾಸಿ ಸುರೇಶ ನಿಜಗುಣಿ ಗುಂಡಣ್ಣವರ (48) ಅವರು ಹಳ್ಳ ದಾಟುವ ವೇಳೆ ಬೈಕ್ ಸಮೇತ ಕೊಚ್ಚಿಕೊಂಡು ಹೋದರು.</p><p>ವಿಜಯಪುರ ಜಿಲ್ಲೆಯಲ್ಲಿ 19 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಎರಡು ಆಕಳು ಸಾವಿಗೀಡಾಗಿವೆ. ಡೋಣಿ ನದಿ ಉಕ್ಕಿ ಹರಿದು ನದಿಪಾತ್ರದ ಹೊಲಗಳಿಗೆ ನೀರು ನುಗ್ಗಿದೆ. </p><p>ತಿಕೋಟಾ ತಾಲ್ಲೂಕಿನ ಕಳ್ಳಕವಟಗಿ- ವಿಜಯಪುರ ರಸ್ತೆಯಲ್ಲಿರುವ ಸಂಗಮನಾಥ ದೇವಸ್ಥಾನ ಬಳಿ ಸೇತುವೆ ಮೇಲೆ ಹಳ್ಳ ಉಕ್ಕಿ ಹರಿದಿದೆ. ಮುಳುಗಿದ್ದ ಸೇತುವೆ ಮೇಲೆ ಬೈಕಿನಲ್ಲಿ ದಾಟಲು ಮುಂದಾಗಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಜನರು ರಕ್ಷಿಸಿದರು. </p><p>ಬಾಗಲಕೋಟೆ ನಗರದ ಹಾಗೂ ಸುತ್ತ ಮುತ್ತಲ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯಿತು. ಇಳಕಲ್, ಹುನಗುಂದ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗಿ, ಕೆಲ ಹೊತ್ತು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಹಿರೇಹಳ್ಳ ತುಂಬಿ ಹರಿದಿದ್ದರಿಂದ ವಿಜಯ ಮಹಾಂತೇಶ ಕರ್ತೃ ಗದ್ದುಗೆ ತಲುಪುವ ಸೇತುವೆ ಜಲಾವೃತಗೊಂಡಿತು.</p><p>ಉತ್ತರ ಕನ್ನಡ ಜಿಲ್ಲೆಯ<br>ಹೊನ್ನಾವರ ತಾಲ್ಲೂಕಿನ ಕೆಲವೆಡೆ ಬಿರುಗಾಳಿ ಸಹಿತ ಜೋರು ಮಳೆ ಸುರಿಯಿತು. ಮಳೆಗೆ ಗುಂಡಬಾಳ ನದಿ ತುಂಬಿ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತು. ನದಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಗುಡ್ಡ ಕುಸಿಯಿತು.<br>ರಸ್ತೆಗಳು ಕೊಚ್ಚಿಹೋಗಿ, ಕಂದಕ ಸೃಷ್ಟಿಯಾಗಿದೆ. ಕೆಲ ಹಳ್ಳಗಳ ತಡೆಗೋಡೆಗಳು ಕುಸಿದಿವೆ.</p><p>ವಿಜಯನಗರ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದ್ದರಿಂದ ಕೂಡ್ಲಿಗಿಯಲ್ಲಿ ಮೂರು ಕೆರೆ ಕೋಡಿ ಬಿದ್ದಿವೆ. ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೊಸಪೇಟೆ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಯಿತು. ಕೊಟ್ಟೂರು ತಾಲ್ಲೂಕಿನಲ್ಲಿ ನಾಲ್ಕು ಮನೆಗಳು, ಹೂವಿನಹಡಗಲಿ ತಾಲ್ಲೂಕಿನಲ್ಲಿ ಒಂದು ಮನೆ ಕುಸಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಗದಗ ಸೇರಿದಂತೆ ಬಹುತೇಕ ಕಡೆ ಮಂಗಳವಾರ ರಾತ್ರಿ ಮತ್ತು ಬುಧವಾರ ಉತ್ತಮ ಮಳೆಯಾಯಿತು. ಬಹುತೇಕ ಕಡೆ ಮನೆಗಳಿಗೆ ಹಾನಿಯಾಗಿದೆ. ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದವು.</p><p>ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಸಮೀಪದ ಚಂದನಹೊಸೂರ ಗ್ರಾಮದ ಬಳಿ ಮಂಗಳವಾರ ರಾತ್ರಿ ತಾರಿಹಾಳ ಗ್ರಾಮ ಪಂಚಾಯಿತಿ ಸಿಬ್ಬಂದಿ, ಖಾನಾಪೂರ ತಾಲ್ಲೂಕಿನ ಗಾಡಿಕೊಪ್ಪ ಗ್ರಾಮದ ನಿವಾಸಿ ಸುರೇಶ ನಿಜಗುಣಿ ಗುಂಡಣ್ಣವರ (48) ಅವರು ಹಳ್ಳ ದಾಟುವ ವೇಳೆ ಬೈಕ್ ಸಮೇತ ಕೊಚ್ಚಿಕೊಂಡು ಹೋದರು.</p><p>ವಿಜಯಪುರ ಜಿಲ್ಲೆಯಲ್ಲಿ 19 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಎರಡು ಆಕಳು ಸಾವಿಗೀಡಾಗಿವೆ. ಡೋಣಿ ನದಿ ಉಕ್ಕಿ ಹರಿದು ನದಿಪಾತ್ರದ ಹೊಲಗಳಿಗೆ ನೀರು ನುಗ್ಗಿದೆ. </p><p>ತಿಕೋಟಾ ತಾಲ್ಲೂಕಿನ ಕಳ್ಳಕವಟಗಿ- ವಿಜಯಪುರ ರಸ್ತೆಯಲ್ಲಿರುವ ಸಂಗಮನಾಥ ದೇವಸ್ಥಾನ ಬಳಿ ಸೇತುವೆ ಮೇಲೆ ಹಳ್ಳ ಉಕ್ಕಿ ಹರಿದಿದೆ. ಮುಳುಗಿದ್ದ ಸೇತುವೆ ಮೇಲೆ ಬೈಕಿನಲ್ಲಿ ದಾಟಲು ಮುಂದಾಗಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಜನರು ರಕ್ಷಿಸಿದರು. </p><p>ಬಾಗಲಕೋಟೆ ನಗರದ ಹಾಗೂ ಸುತ್ತ ಮುತ್ತಲ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯಿತು. ಇಳಕಲ್, ಹುನಗುಂದ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಗಿ, ಕೆಲ ಹೊತ್ತು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಹಿರೇಹಳ್ಳ ತುಂಬಿ ಹರಿದಿದ್ದರಿಂದ ವಿಜಯ ಮಹಾಂತೇಶ ಕರ್ತೃ ಗದ್ದುಗೆ ತಲುಪುವ ಸೇತುವೆ ಜಲಾವೃತಗೊಂಡಿತು.</p><p>ಉತ್ತರ ಕನ್ನಡ ಜಿಲ್ಲೆಯ<br>ಹೊನ್ನಾವರ ತಾಲ್ಲೂಕಿನ ಕೆಲವೆಡೆ ಬಿರುಗಾಳಿ ಸಹಿತ ಜೋರು ಮಳೆ ಸುರಿಯಿತು. ಮಳೆಗೆ ಗುಂಡಬಾಳ ನದಿ ತುಂಬಿ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತು. ನದಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಗುಡ್ಡ ಕುಸಿಯಿತು.<br>ರಸ್ತೆಗಳು ಕೊಚ್ಚಿಹೋಗಿ, ಕಂದಕ ಸೃಷ್ಟಿಯಾಗಿದೆ. ಕೆಲ ಹಳ್ಳಗಳ ತಡೆಗೋಡೆಗಳು ಕುಸಿದಿವೆ.</p><p>ವಿಜಯನಗರ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದ್ದರಿಂದ ಕೂಡ್ಲಿಗಿಯಲ್ಲಿ ಮೂರು ಕೆರೆ ಕೋಡಿ ಬಿದ್ದಿವೆ. ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೊಸಪೇಟೆ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಯಿತು. ಕೊಟ್ಟೂರು ತಾಲ್ಲೂಕಿನಲ್ಲಿ ನಾಲ್ಕು ಮನೆಗಳು, ಹೂವಿನಹಡಗಲಿ ತಾಲ್ಲೂಕಿನಲ್ಲಿ ಒಂದು ಮನೆ ಕುಸಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>