<p><strong>ಬೆಂಗಳೂರು:</strong> ರಾಜ್ಯದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬುಧವಾರ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಬೆಳೆ ನಷ್ಟವಾಗಿದೆ.</p>.<p>ಕಲಬುರ್ಗಿ ನಗರ ಸೇರಿದಂತೆ ಜಿಲ್ಲೆಯ ಚಿಂಚೋಳಿ, ಕಾಳಗಿ, ವಾಡಿ, ಚಿತ್ತಾಪುರ, ಅಫಜಲಪುರ, ಜೇವರ್ಗಿ, ಕಮಲಾಪುರ ಮತ್ತು ಯಡ್ರಾಮಿಯಲ್ಲಿ ಮಳೆಯಾಯಿತು. ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು ಇಂಗಳಗಿ– ಶಹಬಾದ್ ರಸ್ತೆ ಸಂಪರ್ಕ ಕಡಿತವಾಗಿದೆ.</p>.<p class="Subhead">ವ್ಯಕ್ತಿ ಸಾವು: ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಸಾಯಿಗಾಂವ ಹತ್ತಿರದ ಹಳ್ಳದ ಸೇತುವೆಯನ್ನು ಬೈಕ್ನಲ್ಲಿ ದಾಟು<br />ವಾಗ ನೀರಿನಲ್ಲಿ ಕೊಚ್ಚಿ ಹೋಗಿ ಬೋಳೆಗಾಂವ ಗ್ರಾಮದ ಮನೋಜ ಗುಂಡಾಜಿ (31) ಎಂಬುವರು ಮೃತಪಟ್ಟಿದ್ದಾರೆ.</p>.<p>ಭಾಲ್ಕಿ, ಕಮಲನಗರ, ಔರಾದ್ ಮತ್ತು ಹುಮನಾಬಾದ್ ತಾಲ್ಲೂಕಿನ ಹಳ್ಳಕೊಳ್ಳಗಳು ತುಂಬಿವೆ. ಮಾಂಜ್ರಾ ನದಿ ಒಳ ಹರಿವು ಹೆಚ್ಚಿದ್ದು, ನದಿಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಎದುರಾಗಿದೆ. ಔರಾದ್ ತಾಲ್ಲೂಕಿನಲ್ಲಿ ಹೊಲಗಳು ಜಲಾವೃತವಾಗಿವೆ. </p>.<p>ರಾಯಚೂರು ತಾಲ್ಲೂಕಿನಲ್ಲಿ ಮಳೆಗೆ ಬೆಳೆ ಹಾನಿಯಾಗಿದೆ. ಆತ್ಕೂರು,ಶಕ್ತಿನಗರ–ಕಾಡ್ಲೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಿರು ರೈಲ್ವೆ ಸೇತುವೆ ಜಲಾವೃತವಾಗಿದೆ. ಯಾದಗಿರಿ ಜಿಲ್ಲೆಯ ಕೆಲವಡೆ ಮನೆ ಮತ್ತು ಹೊಲಗದ್ದೆಗಳಲ್ಲಿ ನೀರು ನುಗ್ಗಿದೆ.</p>.<p>ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಸಮೀಪದ ಡಣಾಯಕನಕೆರೆಗೆ ಕೋಡಿ ಬಿದ್ದಿದ್ದು, ಜೋಳದ ಹೊಲಗಳು ಜಲಾವೃತವಾಗಿವೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಹಂಪಾಪಟ್ಟಣ, ಉಪನಾಯಕನಹಳ್ಳಿ ಮತ್ತು ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ತಲಾ ಒಂದೊಂದು ಮನೆಗಳಿಗೆ ಹಾನಿಯಾಗಿದೆ.</p>.<p>ಬಾಗಲಕೋಟೆ, ಗದಗ, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಭಾಗದಲ್ಲಿ ಬಿರುಸಾಗಿ ಮಳೆ ಸುರಿದಿದೆ.</p>.<p class="Subhead"><strong>ಬೋಟ್ ಮುಳುಗಡೆ–ರಕ್ಷಣೆ:</strong> ಉಡುಪಿ ಸಮೀಪದ ಮಲ್ಪೆ ಬಂದರಿನಿಂದ ಹೊರಟಿದ್ದ ‘ಹನುಮತೀರ್ಥ’ ಮೀನುಗಾರಿಕಾ ಬೋಟ್ ಮಂಗಳವಾರ ಸೇಂಟ್ ಮೇರಿಸ್ ದ್ವೀಪದ ಬಳಿ ಮುಳುಗಿದ್ದು, ಅದರಲ್ಲಿದ್ದ 29 ಮಂದಿಯನ್ನೂ ರಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬುಧವಾರ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಬೆಳೆ ನಷ್ಟವಾಗಿದೆ.</p>.<p>ಕಲಬುರ್ಗಿ ನಗರ ಸೇರಿದಂತೆ ಜಿಲ್ಲೆಯ ಚಿಂಚೋಳಿ, ಕಾಳಗಿ, ವಾಡಿ, ಚಿತ್ತಾಪುರ, ಅಫಜಲಪುರ, ಜೇವರ್ಗಿ, ಕಮಲಾಪುರ ಮತ್ತು ಯಡ್ರಾಮಿಯಲ್ಲಿ ಮಳೆಯಾಯಿತು. ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು ಇಂಗಳಗಿ– ಶಹಬಾದ್ ರಸ್ತೆ ಸಂಪರ್ಕ ಕಡಿತವಾಗಿದೆ.</p>.<p class="Subhead">ವ್ಯಕ್ತಿ ಸಾವು: ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಸಾಯಿಗಾಂವ ಹತ್ತಿರದ ಹಳ್ಳದ ಸೇತುವೆಯನ್ನು ಬೈಕ್ನಲ್ಲಿ ದಾಟು<br />ವಾಗ ನೀರಿನಲ್ಲಿ ಕೊಚ್ಚಿ ಹೋಗಿ ಬೋಳೆಗಾಂವ ಗ್ರಾಮದ ಮನೋಜ ಗುಂಡಾಜಿ (31) ಎಂಬುವರು ಮೃತಪಟ್ಟಿದ್ದಾರೆ.</p>.<p>ಭಾಲ್ಕಿ, ಕಮಲನಗರ, ಔರಾದ್ ಮತ್ತು ಹುಮನಾಬಾದ್ ತಾಲ್ಲೂಕಿನ ಹಳ್ಳಕೊಳ್ಳಗಳು ತುಂಬಿವೆ. ಮಾಂಜ್ರಾ ನದಿ ಒಳ ಹರಿವು ಹೆಚ್ಚಿದ್ದು, ನದಿಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಎದುರಾಗಿದೆ. ಔರಾದ್ ತಾಲ್ಲೂಕಿನಲ್ಲಿ ಹೊಲಗಳು ಜಲಾವೃತವಾಗಿವೆ. </p>.<p>ರಾಯಚೂರು ತಾಲ್ಲೂಕಿನಲ್ಲಿ ಮಳೆಗೆ ಬೆಳೆ ಹಾನಿಯಾಗಿದೆ. ಆತ್ಕೂರು,ಶಕ್ತಿನಗರ–ಕಾಡ್ಲೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಿರು ರೈಲ್ವೆ ಸೇತುವೆ ಜಲಾವೃತವಾಗಿದೆ. ಯಾದಗಿರಿ ಜಿಲ್ಲೆಯ ಕೆಲವಡೆ ಮನೆ ಮತ್ತು ಹೊಲಗದ್ದೆಗಳಲ್ಲಿ ನೀರು ನುಗ್ಗಿದೆ.</p>.<p>ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಸಮೀಪದ ಡಣಾಯಕನಕೆರೆಗೆ ಕೋಡಿ ಬಿದ್ದಿದ್ದು, ಜೋಳದ ಹೊಲಗಳು ಜಲಾವೃತವಾಗಿವೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಹಂಪಾಪಟ್ಟಣ, ಉಪನಾಯಕನಹಳ್ಳಿ ಮತ್ತು ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ತಲಾ ಒಂದೊಂದು ಮನೆಗಳಿಗೆ ಹಾನಿಯಾಗಿದೆ.</p>.<p>ಬಾಗಲಕೋಟೆ, ಗದಗ, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಭಾಗದಲ್ಲಿ ಬಿರುಸಾಗಿ ಮಳೆ ಸುರಿದಿದೆ.</p>.<p class="Subhead"><strong>ಬೋಟ್ ಮುಳುಗಡೆ–ರಕ್ಷಣೆ:</strong> ಉಡುಪಿ ಸಮೀಪದ ಮಲ್ಪೆ ಬಂದರಿನಿಂದ ಹೊರಟಿದ್ದ ‘ಹನುಮತೀರ್ಥ’ ಮೀನುಗಾರಿಕಾ ಬೋಟ್ ಮಂಗಳವಾರ ಸೇಂಟ್ ಮೇರಿಸ್ ದ್ವೀಪದ ಬಳಿ ಮುಳುಗಿದ್ದು, ಅದರಲ್ಲಿದ್ದ 29 ಮಂದಿಯನ್ನೂ ರಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>