<p><strong>ಹುಬ್ಬಳ್ಳಿ: </strong>ಬೆಳಗಾವಿ, ವಿಜಯಪುರ, ಗದಗ, ಉತ್ತರ ಕನ್ನಡ, ಹಾವೇರಿ, ಹುಬ್ಬಳ್ಳಿಯಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗಿದೆ.</p>.<p>ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಆಲಿಕಲ್ಲು ಮಳೆ ಬಿರುಗಾಳಿಗೆ ಅಲ್ಲಿನ ಕಳ್ಳಕವಟಗಿ ಗ್ರಾಮದ ಶಿವಾನಂದ ಗಿಡ್ನವರ ಹಾಗೂ ಪರಮೇಶ್ವರ ಗಿಡ್ನವರ್ ಸಹೋದರರ, ಮಾರುಕಟ್ಟೆಗೆ ಕಳಿಸುವ ಹಂತದಲ್ಲಿರುವ 6 ಟನ್ ಒಣದ್ರಾಕ್ಷಿ ಹಾನಿಗೊಳಗಾಗಿದೆ.</p>.<p>ಉಳಿದಂತೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು, ಗಾಳಿಯೊಂದಿಗೆ ತುಂತುರು ಮಳೆಯಾಗಿದೆ.</p>.<p>ಬೆಳಗಾವಿ ನಗರ, ಕಿತ್ತೂರು ಮತ್ತು ಸವದತ್ತಿ ಭಾಗದಲ್ಲಿ ಸಂಜೆ ಜೋರು ಗಾಳಿ ಮತ್ತು ಗುಡುಗು ಸಮೇತ ಸಾಧಾರಣ ಮಳೆಯಾಯಿತು. ಗದಗ ತಾಲ್ಲೂಕಿನ ವಿವಿಧೆಡೆ ಗಾಳಿ, ಗುಡುಗು ಸಹಿತ ಜೋರಾದ ಮಳೆ ಸುರಿದಿದೆ. ಹುಬ್ಬಳ್ಳಿಯಲ್ಲಿ ಸಾಯಂಕಾಲದಿಂದ ರಾತ್ರಿಯವರೆಗೂ ತುಂತುರು ಮಳೆ ಮುಂದುವರಿದಿತ್ತು.</p>.<p>ಕರಾವಳಿಯಲ್ಲಿ ಗಾಳಿ, ಮಳೆ: ಕರಾವಳಿಯ ಕೆಲವೆಡೆ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಗುಡುಗು, ಸಿಡಿಲಿನೊಂದಿಗೆ ಮಳೆಯಾಗಿದೆ. ವಿದ್ಯುತ್ ಪೂರೈಕೆ ಸ್ಥಗಿತವಾಗಿತ್ತು.</p>.<p>ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಸುತ್ತಲಿನ ಪ್ರದೇಶಗಳು, ಕಡಬದ ಕೋಡಿಂಬಾಳದಲ್ಲಿ ಗುಡುಗು, ಸಿಡಿಲಿನೊಂದಿಗೆ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ನರಸಿಂಹರಾಜಪುರದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏ.14 ಮತ್ತು 15ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p><strong>ಧಾರಾಕಾರ ಮಳೆ:</strong> ಕೊಡಗು ಜಿಲ್ಲೆಯ ನಾಪೋಕ್ಲು, ತಲಕಾವೇರಿ, ವಿರಾಜಪೇಟೆ, ಚೆಟ್ಟಿಮಾನಿ, ಬೆಟ್ಟಗೇರಿ ಹಾಗೂ ಶನಿವಾರಸಂತೆ ಭಾಗದಲ್ಲಿ ಭಾನುವಾರ ಸಂಜೆ ಧಾರಾಕಾರ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಬೆಳಗಾವಿ, ವಿಜಯಪುರ, ಗದಗ, ಉತ್ತರ ಕನ್ನಡ, ಹಾವೇರಿ, ಹುಬ್ಬಳ್ಳಿಯಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗಿದೆ.</p>.<p>ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಆಲಿಕಲ್ಲು ಮಳೆ ಬಿರುಗಾಳಿಗೆ ಅಲ್ಲಿನ ಕಳ್ಳಕವಟಗಿ ಗ್ರಾಮದ ಶಿವಾನಂದ ಗಿಡ್ನವರ ಹಾಗೂ ಪರಮೇಶ್ವರ ಗಿಡ್ನವರ್ ಸಹೋದರರ, ಮಾರುಕಟ್ಟೆಗೆ ಕಳಿಸುವ ಹಂತದಲ್ಲಿರುವ 6 ಟನ್ ಒಣದ್ರಾಕ್ಷಿ ಹಾನಿಗೊಳಗಾಗಿದೆ.</p>.<p>ಉಳಿದಂತೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು, ಗಾಳಿಯೊಂದಿಗೆ ತುಂತುರು ಮಳೆಯಾಗಿದೆ.</p>.<p>ಬೆಳಗಾವಿ ನಗರ, ಕಿತ್ತೂರು ಮತ್ತು ಸವದತ್ತಿ ಭಾಗದಲ್ಲಿ ಸಂಜೆ ಜೋರು ಗಾಳಿ ಮತ್ತು ಗುಡುಗು ಸಮೇತ ಸಾಧಾರಣ ಮಳೆಯಾಯಿತು. ಗದಗ ತಾಲ್ಲೂಕಿನ ವಿವಿಧೆಡೆ ಗಾಳಿ, ಗುಡುಗು ಸಹಿತ ಜೋರಾದ ಮಳೆ ಸುರಿದಿದೆ. ಹುಬ್ಬಳ್ಳಿಯಲ್ಲಿ ಸಾಯಂಕಾಲದಿಂದ ರಾತ್ರಿಯವರೆಗೂ ತುಂತುರು ಮಳೆ ಮುಂದುವರಿದಿತ್ತು.</p>.<p>ಕರಾವಳಿಯಲ್ಲಿ ಗಾಳಿ, ಮಳೆ: ಕರಾವಳಿಯ ಕೆಲವೆಡೆ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಗುಡುಗು, ಸಿಡಿಲಿನೊಂದಿಗೆ ಮಳೆಯಾಗಿದೆ. ವಿದ್ಯುತ್ ಪೂರೈಕೆ ಸ್ಥಗಿತವಾಗಿತ್ತು.</p>.<p>ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಸುತ್ತಲಿನ ಪ್ರದೇಶಗಳು, ಕಡಬದ ಕೋಡಿಂಬಾಳದಲ್ಲಿ ಗುಡುಗು, ಸಿಡಿಲಿನೊಂದಿಗೆ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ನರಸಿಂಹರಾಜಪುರದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏ.14 ಮತ್ತು 15ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p><strong>ಧಾರಾಕಾರ ಮಳೆ:</strong> ಕೊಡಗು ಜಿಲ್ಲೆಯ ನಾಪೋಕ್ಲು, ತಲಕಾವೇರಿ, ವಿರಾಜಪೇಟೆ, ಚೆಟ್ಟಿಮಾನಿ, ಬೆಟ್ಟಗೇರಿ ಹಾಗೂ ಶನಿವಾರಸಂತೆ ಭಾಗದಲ್ಲಿ ಭಾನುವಾರ ಸಂಜೆ ಧಾರಾಕಾರ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>