<p><strong>ಬೆಂಗಳೂರು:</strong> ತಾಪಮಾನ ಏರಿಕೆಯಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇದೇ 23ರಿಂದ 26ರವರೆಗೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಈ ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ದಕ್ಷಿಣ ಒಳನಾಡಿನಲ್ಲಿ ಏ.24ರಂದು ವೇಗವಾದ ಗಾಳಿ ಸಹಿತ ಗುಡುಗು ಸಿಡಿಲು ಹೆಚ್ಚಾಗಿರಲಿದ್ದು, ಮಳೆ ಪ್ರಮಾಣ ಕಡಿಮೆ ಇರಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಶುಷ್ಕ ವಾತಾವರಣ ಇರಲಿದೆ.</p>.<p>ಶಿವಮೊಗ್ಗ ಜಿಲ್ಲೆಯ ಅರಸಾಳು ಭಾಗದಲ್ಲಿ ಬುಧವಾರ ಗರಿಷ್ಠ 8 ಸೆಂ.ಮೀ.ಮಳೆಯಾಗಿದೆ. ರಾಮಗಿರಿ, ಹುಂಚದಕಟ್ಟೆ 3, ಕಳಸಾ, ಹುಕ್ಕೇರಿ, ಬೆಳಗಾವಿ 2, ಬೈಲಹೊಂಗಲ, ಚಿಂಚೋಳಿ, ಕುಷ್ಟಗಿ, ದಾವಣಗೆರೆ, ಶೃಂಗೇರಿ, ಭರಮಸಾಗರದಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.</p>.<p>ಒಂದು ವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕನಿಷ್ಠ 35ರಿಂದ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಏರಿಕೆ ಕಂಡಿದೆ. ಸುಡುಬಿಸಿಲಿನ ಧಗೆಯ ಜೊತೆಗೆ ರಾತ್ರಿ ವೇಳೆ ಸೆಕೆಯೂ ಹೆಚ್ಚಾಗಿದೆ.</p>.<p>ಕಲಬುರ್ಗಿಯಲ್ಲಿ ಬುಧವಾರ 40.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ರಾಯಚೂರು 39, ವಿಜಯಪುರ, ಬೀದರ್, ಪಣಂಬೂರು, ದಾವಣಗೆರೆ, ಚಿಂತಾಮಣಿಯಲ್ಲಿ ತಲಾ 37 ಡಿಗ್ರಿ ಸೆಲ್ಸಿಯಸ್ ಹಾಗೂ ಮಡಿಕೇರಿಯಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತಾಪಮಾನ ಏರಿಕೆಯಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇದೇ 23ರಿಂದ 26ರವರೆಗೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಈ ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ದಕ್ಷಿಣ ಒಳನಾಡಿನಲ್ಲಿ ಏ.24ರಂದು ವೇಗವಾದ ಗಾಳಿ ಸಹಿತ ಗುಡುಗು ಸಿಡಿಲು ಹೆಚ್ಚಾಗಿರಲಿದ್ದು, ಮಳೆ ಪ್ರಮಾಣ ಕಡಿಮೆ ಇರಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಶುಷ್ಕ ವಾತಾವರಣ ಇರಲಿದೆ.</p>.<p>ಶಿವಮೊಗ್ಗ ಜಿಲ್ಲೆಯ ಅರಸಾಳು ಭಾಗದಲ್ಲಿ ಬುಧವಾರ ಗರಿಷ್ಠ 8 ಸೆಂ.ಮೀ.ಮಳೆಯಾಗಿದೆ. ರಾಮಗಿರಿ, ಹುಂಚದಕಟ್ಟೆ 3, ಕಳಸಾ, ಹುಕ್ಕೇರಿ, ಬೆಳಗಾವಿ 2, ಬೈಲಹೊಂಗಲ, ಚಿಂಚೋಳಿ, ಕುಷ್ಟಗಿ, ದಾವಣಗೆರೆ, ಶೃಂಗೇರಿ, ಭರಮಸಾಗರದಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.</p>.<p>ಒಂದು ವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕನಿಷ್ಠ 35ರಿಂದ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಏರಿಕೆ ಕಂಡಿದೆ. ಸುಡುಬಿಸಿಲಿನ ಧಗೆಯ ಜೊತೆಗೆ ರಾತ್ರಿ ವೇಳೆ ಸೆಕೆಯೂ ಹೆಚ್ಚಾಗಿದೆ.</p>.<p>ಕಲಬುರ್ಗಿಯಲ್ಲಿ ಬುಧವಾರ 40.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ರಾಯಚೂರು 39, ವಿಜಯಪುರ, ಬೀದರ್, ಪಣಂಬೂರು, ದಾವಣಗೆರೆ, ಚಿಂತಾಮಣಿಯಲ್ಲಿ ತಲಾ 37 ಡಿಗ್ರಿ ಸೆಲ್ಸಿಯಸ್ ಹಾಗೂ ಮಡಿಕೇರಿಯಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>