<p><strong>ಮೈಸೂರು</strong>/<strong>ಹುಬ್ಬಳ್ಳಿ</strong>: ರಾಜ್ಯದ ವಿವಿಧಡೆ ಭಾನುವಾರ ಧಾರಾಕಾರ ಮಳೆಯಾಗಿದೆ. ಮೈಸೂರು ನಗರದಲ್ಲಿ ಮುಂಜಾನೆ ಸಾಧಾರಣ ಮಳೆಯಾಯಿತು. ಮಧ್ಯಾಹ್ನದ ನಂತರ ಗುಡುಗು ಸಹಿತ ಜೋರು ಮಳೆ ಸುರಿಯಿತು. ಕೊಡಗು ಜಿಲ್ಲೆಯ ಕೇರಳ ಗಡಿ ಭಾಗ ಕುಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ. </p><p>ಹುಬ್ಬಳ್ಳಿಯಲ್ಲಿ ನಗರ ಹಾಗೂ ಧಾರವಾಡ ಜಿಲ್ಲೆಯ ಕೆಲವೆಡೆ ಶನಿವಾರ ತಡರಾತ್ರಿ ಹಾಗೂ ಭಾನುವಾರ ನಸುಕಿನಲ್ಲಿ ಗುಡುಗು ಸಹಿತ ರಭಸದ ಮಳೆಯಾಗಿದೆ. ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರ್ಷಧಾರೆಯಾಗಿದೆ.</p><p>ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವದವರೆಗೆ ಧಾರಾಕಾರ ಮಳೆ ಸುರಿದಿದೆ.</p><p>ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಾದ್ಯಂತ ಶನಿವಾರ ರಾತ್ರಿ ಭರ್ಜರಿ ಮಳೆಯಾಗಿದೆ. ರಾತ್ರಿ 8 ಗಂಟೆಗೆ ಆರಂಭವಾದ ಮಳೆ ಮಧ್ಯರಾತ್ರಿಯವರೆಗೂ ಒಂದೇಸಮನೆ ಸುರಿಯಿತು. ಕೆರೆ, ಕಟ್ಟೆ, ಜಮೀನುಗಳಲ್ಲಿ ನೀರು ನಿಂತಿದೆ. ಬರದಿಂದ ತತ್ತರಿಸಿದ್ದ ಜನರಲ್ಲಿ ಮುಂಗಾರುಪೂರ್ವ ಮಳೆ ಸಂತಸ ಉಂಟುಮಾಡಿದೆ.</p><p>ಹಲವು ಹಳ್ಳ, ಕೊಳ್ಳಗಳು ತುಂಬಿವೆ. ಎಂ.ಜಿ. ದಿಬ್ಬದಲ್ಲಿನ ಕೆರೆಯ ಏರಿ ಬಿರುಕು ಬಿಟ್ಟಿದೆ.</p><p>ಶಿವಮೊಗ್ಗ ವರದಿ: ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯ ಆರ್ಭಟ ಮುಂದುವರಿದಿದೆ. ಭಾನುವಾರ ಬೆಳಿಗ್ಗೆ ಭದ್ರಾ ಜಲಾಶಯದ ಒಳಹರಿವು 1,150 ಕ್ಯುಸೆಕ್ಗೆ ಏರಿಕೆಯಾಗಿತ್ತು. ಈ ವರ್ಷ ಇದೇ ಮೊದಲ ಬಾರಿಗೆ ಒಳಹರಿವು 1,000 ಕ್ಯುಸೆಕ್ ದಾಟಿದೆ. ಶನಿವಾರ ಬೆಳಿಗ್ಗೆ ಒಳಹರಿವಿನ ಪ್ರಮಾಣ 571 ಕ್ಯುಸೆಕ್ ಇತ್ತು. 24 ಗಂಟೆಯ ಅವಧಿಯಲ್ಲಿ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ದುಪ್ಪಟ್ಟಾಗಿದೆ.</p><p><strong>ತುಮಕೂರು ವರದಿ</strong>: ಜಿಲ್ಲೆಯ ವಿವಿಧೆಡೆ ಎರಡು–ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಧುಗಿರಿ ಭಾಗದಲ್ಲಿಯೂ ಉತ್ತಮ ಮಳೆ ಸುರಿದಿದೆ. ಬಿತ್ತನೆ ಕಾರ್ಯವೂ ಚುರುಕುಗೊಂಡಿದೆ. ನಿರಂತರ ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ತುಮಕೂರು ಬಳಿಯ ರಾಷ್ತ್ರೀಯ ಹೆದ್ದಾರಿ 48ರಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳದ ಸಮೀಪ 5 ಕಿ.ಮೀವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.</p><p>ಚೋಳೇನಹಳ್ಳಿ ಕೆರೆ, ಹೊಸಕೆರೆ, ರೆಡ್ಡಿಹಳ್ಳಿ ಹಾಗೂ ಹನುಮಂತಪುರ ಕೆರೆ ಸೇರಿದಂತೆ ಹಲವು ಕೆರೆಗಳಿಗೆ ನೀರು ಹರಿದಿದೆ.</p><p><strong>ಕೊಪ್ಪಳ</strong>: ಸಿಡಿಲು ಬಡಿದು ರೈತ ಸಾವು ಕೊಪ್ಪಳ: ಜಿಲ್ಲೆಯಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.</p><p>ಭಾನುವಾರವೂ ಕೊಪ್ಪಳ, ಹನುಮಸಾಗರ, ಕುಷ್ಟಗಿ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕುಷ್ಟಗಿ ತಾಲ್ಲೂಕಿನ ಬಚನಾಳ ಗ್ರಾಮದಲ್ಲಿ ಹೊಲದಲ್ಲಿ ಕೆಲಸದಲ್ಲಿ ನಿರತನಾಗಿದ್ದ ರೈತ ಈಶಪ್ಪ ಕಳಮಳ್ಳಿ (33) ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p><p>ರಾಯಚೂರು ಜಿಲ್ಲೆಯ ಸಿಂಧನೂರು ಹಾಗೂ ಕವಿತಾಳದಲ್ಲಿ ಸಾಧಾರಣ ಮಳೆಯಾಗಿದೆ. ಬಿಸಿಲಿನ ಧಗೆ ಕಡಿಮೆಯಾಗಿದೆ. </p><p><strong>ಬೆಂಗಳೂರಿನಲ್ಲಿ ಧಾರಾಕಾರ ಮಳೆ</strong></p><p>ಬೆಂಗಳೂರು: ನಗರದ ಹಲವೆಡೆ ಒಂದು ವಾರದಿಂದ ಸಂಜೆ, ರಾತ್ರಿ ವೇಳೆ ಧಾರಾಕಾರ ಮಳೆಯಾಗುತ್ತಿದೆ. ಮಳೆಯಾಗದೆ ಉಷ್ಣಾಂಶ ಏರಿಕೆಯಾಗಿ ಜನರು ಬಸವಳಿಯುವ ಸ್ಥಿತಿ ನಿರ್ಮಾಣವಾಗಿತ್ತು. ಕುಡಿಯುವ ನೀರಿಗೆ ಗಂಭೀರ ಸಮಸ್ಯೆ ಎದುರಾಗಿತ್ತು. ದುಬಾರಿ ಹಣ ನೀಡಿ ಜನರು ಟ್ಯಾಂಕರ್ನ ನೀರು ಖರೀದಿಸುತ್ತಿದ್ದರು.</p><p>ವಾರದಿಂದ ಸುರಿಯುತ್ತಿರುವ ಮಳೆ ವಾತಾವರಣ ತಂಪಾಗಿಸುವ ಜೊತೆಗೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗುವಂತಾಗಿದೆ.</p><p>ಶನಿವಾರ ತಡರಾತ್ರಿ ಹಾಗೂ ಭಾನುವಾರ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ನಗರದ ಹಲವೆಡೆ ಧಾರಾಕಾರ ಮಳೆಯಾಗಿದೆ. ಹೆಸರಘಟ್ಟದಲ್ಲಿ 9 ಸೆಂ.ಮೀ ಹಾಗೂ ಯಲಹಂಕದಲ್ಲಿ 8 ಸೆಂ.ಮೀ ಮಳೆ ಸುರಿದಿದೆ. ಯಲಹಂಕದ ನಾರ್ತ್ಹುಡ್ ಅಪಾರ್ಟ್ಮೆಂಟ್ ಒಳಗೆ ನೀರು ನುಗ್ಗಿತ್ತು. ರಸ್ತೆಗಳು ಜಲಾವೃತ್ತಗೊಂಡು ಜನರು ಪರದಾಡಿದರು.</p><p><strong>ಕೇರಳದ ಹಲವೆಡೆ ವರ್ಷಧಾರೆ</strong></p><p>ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದ್ದು, ಗುಡ್ಡಗಾಡು ಮತ್ತು ಕರಾವಳಿ ಪ್ರದೇಶಗಳ ಜನರಿಗೆ ಹೆಚ್ಚು ಜಾಗರೂಕವಾಗಿರುವಂತೆ ಅಧಿಕಾರಿಗಳು ಭಾನುವಾರ ಸೂಚನೆ ನೀಡಿದ್ದಾರೆ. </p><p>ಹವಾಮಾನ ಇಲಾಖೆಯು, ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಸೋಮವಾರವು ‘ರೆಡ್ ಅಲರ್ಟ್’ ಘೋಷಿಸಿದ್ದು, ತಿರುವನಂತಪುರ, ಕೊಲ್ಲಂ, ಆಲಪ್ಪುಳ ಮತ್ತು ಎರ್ನಾಕುಳ ಸೇರಿ ಇತರ ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.</p><p>ತಿರುವನಂತಪುರದಲ್ಲಿ ಶನಿವಾರ ರಾತ್ರಿ ಭಾರಿ ಮಳೆಯಾಗಿದೆ. ನಗರ ಮತ್ತು ಅದರ ಉಪನಗರಗಳ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕೆಲವೆಡೆ ಮನೆ, ಅಂಗಡಿಗಳು ಜಲಾವೃತಗೊಂಡಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>/<strong>ಹುಬ್ಬಳ್ಳಿ</strong>: ರಾಜ್ಯದ ವಿವಿಧಡೆ ಭಾನುವಾರ ಧಾರಾಕಾರ ಮಳೆಯಾಗಿದೆ. ಮೈಸೂರು ನಗರದಲ್ಲಿ ಮುಂಜಾನೆ ಸಾಧಾರಣ ಮಳೆಯಾಯಿತು. ಮಧ್ಯಾಹ್ನದ ನಂತರ ಗುಡುಗು ಸಹಿತ ಜೋರು ಮಳೆ ಸುರಿಯಿತು. ಕೊಡಗು ಜಿಲ್ಲೆಯ ಕೇರಳ ಗಡಿ ಭಾಗ ಕುಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ. </p><p>ಹುಬ್ಬಳ್ಳಿಯಲ್ಲಿ ನಗರ ಹಾಗೂ ಧಾರವಾಡ ಜಿಲ್ಲೆಯ ಕೆಲವೆಡೆ ಶನಿವಾರ ತಡರಾತ್ರಿ ಹಾಗೂ ಭಾನುವಾರ ನಸುಕಿನಲ್ಲಿ ಗುಡುಗು ಸಹಿತ ರಭಸದ ಮಳೆಯಾಗಿದೆ. ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರ್ಷಧಾರೆಯಾಗಿದೆ.</p><p>ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವದವರೆಗೆ ಧಾರಾಕಾರ ಮಳೆ ಸುರಿದಿದೆ.</p><p>ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಾದ್ಯಂತ ಶನಿವಾರ ರಾತ್ರಿ ಭರ್ಜರಿ ಮಳೆಯಾಗಿದೆ. ರಾತ್ರಿ 8 ಗಂಟೆಗೆ ಆರಂಭವಾದ ಮಳೆ ಮಧ್ಯರಾತ್ರಿಯವರೆಗೂ ಒಂದೇಸಮನೆ ಸುರಿಯಿತು. ಕೆರೆ, ಕಟ್ಟೆ, ಜಮೀನುಗಳಲ್ಲಿ ನೀರು ನಿಂತಿದೆ. ಬರದಿಂದ ತತ್ತರಿಸಿದ್ದ ಜನರಲ್ಲಿ ಮುಂಗಾರುಪೂರ್ವ ಮಳೆ ಸಂತಸ ಉಂಟುಮಾಡಿದೆ.</p><p>ಹಲವು ಹಳ್ಳ, ಕೊಳ್ಳಗಳು ತುಂಬಿವೆ. ಎಂ.ಜಿ. ದಿಬ್ಬದಲ್ಲಿನ ಕೆರೆಯ ಏರಿ ಬಿರುಕು ಬಿಟ್ಟಿದೆ.</p><p>ಶಿವಮೊಗ್ಗ ವರದಿ: ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯ ಆರ್ಭಟ ಮುಂದುವರಿದಿದೆ. ಭಾನುವಾರ ಬೆಳಿಗ್ಗೆ ಭದ್ರಾ ಜಲಾಶಯದ ಒಳಹರಿವು 1,150 ಕ್ಯುಸೆಕ್ಗೆ ಏರಿಕೆಯಾಗಿತ್ತು. ಈ ವರ್ಷ ಇದೇ ಮೊದಲ ಬಾರಿಗೆ ಒಳಹರಿವು 1,000 ಕ್ಯುಸೆಕ್ ದಾಟಿದೆ. ಶನಿವಾರ ಬೆಳಿಗ್ಗೆ ಒಳಹರಿವಿನ ಪ್ರಮಾಣ 571 ಕ್ಯುಸೆಕ್ ಇತ್ತು. 24 ಗಂಟೆಯ ಅವಧಿಯಲ್ಲಿ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ದುಪ್ಪಟ್ಟಾಗಿದೆ.</p><p><strong>ತುಮಕೂರು ವರದಿ</strong>: ಜಿಲ್ಲೆಯ ವಿವಿಧೆಡೆ ಎರಡು–ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಧುಗಿರಿ ಭಾಗದಲ್ಲಿಯೂ ಉತ್ತಮ ಮಳೆ ಸುರಿದಿದೆ. ಬಿತ್ತನೆ ಕಾರ್ಯವೂ ಚುರುಕುಗೊಂಡಿದೆ. ನಿರಂತರ ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ತುಮಕೂರು ಬಳಿಯ ರಾಷ್ತ್ರೀಯ ಹೆದ್ದಾರಿ 48ರಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳದ ಸಮೀಪ 5 ಕಿ.ಮೀವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.</p><p>ಚೋಳೇನಹಳ್ಳಿ ಕೆರೆ, ಹೊಸಕೆರೆ, ರೆಡ್ಡಿಹಳ್ಳಿ ಹಾಗೂ ಹನುಮಂತಪುರ ಕೆರೆ ಸೇರಿದಂತೆ ಹಲವು ಕೆರೆಗಳಿಗೆ ನೀರು ಹರಿದಿದೆ.</p><p><strong>ಕೊಪ್ಪಳ</strong>: ಸಿಡಿಲು ಬಡಿದು ರೈತ ಸಾವು ಕೊಪ್ಪಳ: ಜಿಲ್ಲೆಯಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.</p><p>ಭಾನುವಾರವೂ ಕೊಪ್ಪಳ, ಹನುಮಸಾಗರ, ಕುಷ್ಟಗಿ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕುಷ್ಟಗಿ ತಾಲ್ಲೂಕಿನ ಬಚನಾಳ ಗ್ರಾಮದಲ್ಲಿ ಹೊಲದಲ್ಲಿ ಕೆಲಸದಲ್ಲಿ ನಿರತನಾಗಿದ್ದ ರೈತ ಈಶಪ್ಪ ಕಳಮಳ್ಳಿ (33) ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p><p>ರಾಯಚೂರು ಜಿಲ್ಲೆಯ ಸಿಂಧನೂರು ಹಾಗೂ ಕವಿತಾಳದಲ್ಲಿ ಸಾಧಾರಣ ಮಳೆಯಾಗಿದೆ. ಬಿಸಿಲಿನ ಧಗೆ ಕಡಿಮೆಯಾಗಿದೆ. </p><p><strong>ಬೆಂಗಳೂರಿನಲ್ಲಿ ಧಾರಾಕಾರ ಮಳೆ</strong></p><p>ಬೆಂಗಳೂರು: ನಗರದ ಹಲವೆಡೆ ಒಂದು ವಾರದಿಂದ ಸಂಜೆ, ರಾತ್ರಿ ವೇಳೆ ಧಾರಾಕಾರ ಮಳೆಯಾಗುತ್ತಿದೆ. ಮಳೆಯಾಗದೆ ಉಷ್ಣಾಂಶ ಏರಿಕೆಯಾಗಿ ಜನರು ಬಸವಳಿಯುವ ಸ್ಥಿತಿ ನಿರ್ಮಾಣವಾಗಿತ್ತು. ಕುಡಿಯುವ ನೀರಿಗೆ ಗಂಭೀರ ಸಮಸ್ಯೆ ಎದುರಾಗಿತ್ತು. ದುಬಾರಿ ಹಣ ನೀಡಿ ಜನರು ಟ್ಯಾಂಕರ್ನ ನೀರು ಖರೀದಿಸುತ್ತಿದ್ದರು.</p><p>ವಾರದಿಂದ ಸುರಿಯುತ್ತಿರುವ ಮಳೆ ವಾತಾವರಣ ತಂಪಾಗಿಸುವ ಜೊತೆಗೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗುವಂತಾಗಿದೆ.</p><p>ಶನಿವಾರ ತಡರಾತ್ರಿ ಹಾಗೂ ಭಾನುವಾರ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ನಗರದ ಹಲವೆಡೆ ಧಾರಾಕಾರ ಮಳೆಯಾಗಿದೆ. ಹೆಸರಘಟ್ಟದಲ್ಲಿ 9 ಸೆಂ.ಮೀ ಹಾಗೂ ಯಲಹಂಕದಲ್ಲಿ 8 ಸೆಂ.ಮೀ ಮಳೆ ಸುರಿದಿದೆ. ಯಲಹಂಕದ ನಾರ್ತ್ಹುಡ್ ಅಪಾರ್ಟ್ಮೆಂಟ್ ಒಳಗೆ ನೀರು ನುಗ್ಗಿತ್ತು. ರಸ್ತೆಗಳು ಜಲಾವೃತ್ತಗೊಂಡು ಜನರು ಪರದಾಡಿದರು.</p><p><strong>ಕೇರಳದ ಹಲವೆಡೆ ವರ್ಷಧಾರೆ</strong></p><p>ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದ್ದು, ಗುಡ್ಡಗಾಡು ಮತ್ತು ಕರಾವಳಿ ಪ್ರದೇಶಗಳ ಜನರಿಗೆ ಹೆಚ್ಚು ಜಾಗರೂಕವಾಗಿರುವಂತೆ ಅಧಿಕಾರಿಗಳು ಭಾನುವಾರ ಸೂಚನೆ ನೀಡಿದ್ದಾರೆ. </p><p>ಹವಾಮಾನ ಇಲಾಖೆಯು, ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಸೋಮವಾರವು ‘ರೆಡ್ ಅಲರ್ಟ್’ ಘೋಷಿಸಿದ್ದು, ತಿರುವನಂತಪುರ, ಕೊಲ್ಲಂ, ಆಲಪ್ಪುಳ ಮತ್ತು ಎರ್ನಾಕುಳ ಸೇರಿ ಇತರ ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.</p><p>ತಿರುವನಂತಪುರದಲ್ಲಿ ಶನಿವಾರ ರಾತ್ರಿ ಭಾರಿ ಮಳೆಯಾಗಿದೆ. ನಗರ ಮತ್ತು ಅದರ ಉಪನಗರಗಳ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕೆಲವೆಡೆ ಮನೆ, ಅಂಗಡಿಗಳು ಜಲಾವೃತಗೊಂಡಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>