ಧಾರವಾಡ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಕಮಲಾಪುರ, ನವಲಗುಂದದ ಕೆಲಭಾಗಗಳಲ್ಲಿ ಮನೆಗಳು ಕುಸಿದಿವೆ. ನವಲಗುಂದ, ಅಣ್ಣಿಗೇರಿಯಲ್ಲಿ ಗೋವಿನ ಜೋಳ, ಹತ್ತಿ ಬೆಳೆ ನಾಶವಾಗಿದೆ. ಬೆಳಗಾವಿಯಲ್ಲೂ ಮಳೆ ಮುಂದುವರಿದಿದೆ. ಸವದತ್ತಿ ತಾಲ್ಲೂಕಿನ ಇನಾಮಹೊಂಗಲ ಬಳಿಯ ಧಾರವಾಡ ಸಂಪರ್ಕಿಸುವ ಸೇತುವೆ ಇನ್ನೂ ಜಲಾವೃತವಾಗಿಯೇ ಇದೆ. ಮೂಡಲಗಿ ತಾಲ್ಲೂಕಿನಲ್ಲಿ ಘಟಪ್ರಭಾ ನದಿಗೆ ನಿರ್ಮಿಸಿರುವ ಢವಳೇಶ್ವರ ಮತ್ತು ಅವರಾದಿಯ ಕೆಳಮಟ್ಟದ ಸೇತುವೆಗಳು ಜಲಾವೃತಗೊಂಡಿದ್ದು, ಕಳೆದ ನಾಲ್ಕು ದಿನಗಳಿಂದ ಸಂಚಾರ ಸ್ಥಗಿತಗೊಂಡಿದೆ.