<p><strong>ಬೆಂಗಳೂರು</strong>: ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಶುಕ್ರವಾರ ರಾತ್ರಿ ಮತ್ತು ಶನಿವಾರ ಮಳೆಯಾಗಿದೆ. ರಾಯಚೂರು ಮತ್ತು ಮಾನ್ವಿಯಲ್ಲಿ ಶುಕ್ರವಾರ ರಾತ್ರಿ 15 ಮಿ.ಮೀ. ಮಳೆಯಾಗಿದೆ. ಬಾದಾಮಿಯಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.</p>.<p>ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಶನಿವಾರ ಸಂಜೆ ಅಬ್ಬರದ ಮಳೆ ಸುರಿಯಿತು. ಹೊಲದಿಂದ ಮರಳುವಾಗ ಮಹಿಳೆ ಮಕ್ಕಳೊಂದಿಗೆ ಮರದ ಕೆಳಗೆ ನಿಂತಿದ್ದರು. ಶಾಂತವ್ವಅಣ್ಣಪ್ಪ ಭೋವಿ (25) ಸ್ಥಳದಲ್ಲಿಯೇ ಸತ್ತಿದ್ದರೆ, ಇಬ್ಬರು ಮಕ್ಕಳು ಪಾರಾಗಿದ್ದಾರೆ.</p>.<p>ಹುಬ್ಬಳ್ಳಿಯಲ್ಲಿಯೂ ಸಂಜೆ ಕೆಲಕಾಲ ಮಳೆ ಸುರಿಯಿತು. ರಾಯಚೂರಿನ ಎಲ್ಬಿಎಸ್ ನಗರದ ಕಿಶನ್ ಅವರಿಗೆ ಸೇರಿದ ಮನೆ ಕುಸಿದಿದೆ. ತಗ್ಗು ಪ್ರದೇಶಗಳ 40ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ರಾತ್ರಿ ಇಡೀ ಪರದಾಡಿದರು.</p>.<p>ಮಾನ್ವಿ ತಾಲ್ಲೂಕಿನ ಕೋಡಗುಡ್ಡ ಹಳ್ಳದ ಸೇತುವೆ ಕೊಚ್ಚಿ ಹೋಗಿದೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ವಿವಿಧೆಡೆ ಅಲ್ಪ ಮಳೆಯಾಗಿದೆ.</p>.<p>ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಗಂಗನಮಕ್ಕಿ, ಜೆ.ಎಂ. ರಸ್ತೆ, ಛತ್ರಮೈದಾನ ಸೇರಿದಂತೆ ವಿವಿಧೆಡೆಯ ತಗ್ಗು ಪ್ರದೇಶಗಳಲ್ಲಿ ಮನೆ, ಕಟ್ಟಡಗಳಿಗೆ ನೀರು ನುಗ್ಗಿದೆ.</p>.<p>ಬಿದರಹಳ್ಳಿ, ಹಳೆಕೋಟೆ ಸೇರಿ ಹಲವೆಡೆ ಮರಗಳು ಉರುಳಿವೆ.</p>.<p><strong>8 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’</strong><br />ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇದೇ 31 ಮತ್ತು ಜೂನ್ 1ರಂದು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಈ ಭಾಗಗಳ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗಜಿಲ್ಲೆಗಳಲ್ಲಿ ಜೂ.1ರವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಜೂ.2 ರಂದು ಹೆಚ್ಚು ಮಳೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಶುಕ್ರವಾರ ರಾತ್ರಿ ಮತ್ತು ಶನಿವಾರ ಮಳೆಯಾಗಿದೆ. ರಾಯಚೂರು ಮತ್ತು ಮಾನ್ವಿಯಲ್ಲಿ ಶುಕ್ರವಾರ ರಾತ್ರಿ 15 ಮಿ.ಮೀ. ಮಳೆಯಾಗಿದೆ. ಬಾದಾಮಿಯಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.</p>.<p>ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಶನಿವಾರ ಸಂಜೆ ಅಬ್ಬರದ ಮಳೆ ಸುರಿಯಿತು. ಹೊಲದಿಂದ ಮರಳುವಾಗ ಮಹಿಳೆ ಮಕ್ಕಳೊಂದಿಗೆ ಮರದ ಕೆಳಗೆ ನಿಂತಿದ್ದರು. ಶಾಂತವ್ವಅಣ್ಣಪ್ಪ ಭೋವಿ (25) ಸ್ಥಳದಲ್ಲಿಯೇ ಸತ್ತಿದ್ದರೆ, ಇಬ್ಬರು ಮಕ್ಕಳು ಪಾರಾಗಿದ್ದಾರೆ.</p>.<p>ಹುಬ್ಬಳ್ಳಿಯಲ್ಲಿಯೂ ಸಂಜೆ ಕೆಲಕಾಲ ಮಳೆ ಸುರಿಯಿತು. ರಾಯಚೂರಿನ ಎಲ್ಬಿಎಸ್ ನಗರದ ಕಿಶನ್ ಅವರಿಗೆ ಸೇರಿದ ಮನೆ ಕುಸಿದಿದೆ. ತಗ್ಗು ಪ್ರದೇಶಗಳ 40ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ರಾತ್ರಿ ಇಡೀ ಪರದಾಡಿದರು.</p>.<p>ಮಾನ್ವಿ ತಾಲ್ಲೂಕಿನ ಕೋಡಗುಡ್ಡ ಹಳ್ಳದ ಸೇತುವೆ ಕೊಚ್ಚಿ ಹೋಗಿದೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ವಿವಿಧೆಡೆ ಅಲ್ಪ ಮಳೆಯಾಗಿದೆ.</p>.<p>ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಗಂಗನಮಕ್ಕಿ, ಜೆ.ಎಂ. ರಸ್ತೆ, ಛತ್ರಮೈದಾನ ಸೇರಿದಂತೆ ವಿವಿಧೆಡೆಯ ತಗ್ಗು ಪ್ರದೇಶಗಳಲ್ಲಿ ಮನೆ, ಕಟ್ಟಡಗಳಿಗೆ ನೀರು ನುಗ್ಗಿದೆ.</p>.<p>ಬಿದರಹಳ್ಳಿ, ಹಳೆಕೋಟೆ ಸೇರಿ ಹಲವೆಡೆ ಮರಗಳು ಉರುಳಿವೆ.</p>.<p><strong>8 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’</strong><br />ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇದೇ 31 ಮತ್ತು ಜೂನ್ 1ರಂದು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಈ ಭಾಗಗಳ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗಜಿಲ್ಲೆಗಳಲ್ಲಿ ಜೂ.1ರವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಜೂ.2 ರಂದು ಹೆಚ್ಚು ಮಳೆಯಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>