<p><strong>ಮಂಗಳೂರು</strong>: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಮೂವರು<br>ಮೃತಪಟ್ಟಿದ್ದಾರೆ.</p><p>ಸುಳ್ಯ ತಾಲ್ಲೂಕಿನ ಪೆರ್ಲಂಪಾಡಿಯಲ್ಲಿ ಅಲಿಕಲ್ಲು ಮಳೆ ಆಗಿದೆ. ಮಂಗಳೂರಿನಲ್ಲಿ ರಾತ್ರಿ 7.30ರ ಸುಮಾರಿಗೆ ಗುಡುಗು ಸಿಡಿಲಿನೊಂದಿಗೆ ಮಳೆಯಾಯಿತು.</p><p>ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಲವೆಡೆ ಮಳೆಯಾಗಿದೆ. ಕಳಸ ಪಟ್ಟಣ ಹಾಗೂ ಸುತ್ತಲಿನ ಪ್ರದೇಶದಲ್ಲೂ ಗುಡುಗು ಮತ್ತು ಗಾಳಿಯ ಆರ್ಭಟದೊಂದಿಗೆ ಭಾರಿ ಮಳೆ ಸುರಿದಿದೆ. </p><p><strong>ಕಲ್ಯಾಣ ಕರ್ನಾಟಕದ ಭಾಗದಲ್ಲಿ ಆಲಿಕಲ್ಲು ಮಳೆ:</strong></p><p>ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕೆ.ಗುಡದಿನ್ನಿ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಸಾಯಣ್ಣ ಯಾದವ (52) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p><strong>ಹುಬ್ಬಳ್ಳಿ: ಸಿಡಿಲಿಗೆ ಇಬ್ಬರು ಬಲಿ</strong></p><p>ಕಳೆದ 24 ಗಂಟೆಗಳಲ್ಲಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹರವಿ ಬಸಾಪುರ ಗ್ರಾಮದಲ್ಲಿ ರವಿಚಂದ್ರ ಚೌಟಗಿ (39) ಮತ್ತು ತೆಲಿಗಿ ಗ್ರಾಮದಲ್ಲಿ ಬಿ.ಹಾಲೇಶಪ್ಪ (55) ಎಂಬುವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p><p>ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ವಿವಿಧೆಡೆ ಆಲಿಕಲ್ಲು ಮಳೆಗೆ ನೂರಾರು ಎಕರೆ ಹಿಂಗಾರು ಭತ್ತದ ಬೆಳೆ ಹಾನಿಯಾಗಿದೆ.</p><p>ಬಾಗಲಕೋಟೆ ನಗರ ಸೇರಿ ಕೆರೂರ, ಲೋಕಾಪುರದಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಬೀದರ್ ಜಿಲ್ಲೆಯ ಭಾಲ್ಕಿ ಗ್ರಾಮೀಣ ಪ್ರದೇಶ ಹಾಗೂ ಯಾದಗಿರಿ ಜಿಲ್ಲೆಯ ಗುರುಮಠಕಲ್ನ ಸುತ್ತಮುತ್ತ ಆಲಿಕಲ್ಲು ಮಳೆಯಾಗಿದೆ.</p><p>ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮದನಾ ಗ್ರಾಮದಲ್ಲಿ ಭಾರಿ ಮಳೆ, ಗಾಳಿಗೆ ಮಹೇಶ ಬಸಪ್ಪ ಕೂತನವೊಯ್ನ್ ಎಂಬುವವರು ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಪಪ್ಪಾಯ ಸಸಿಗಳು ಮುರಿದು ಬಿದ್ದಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ ಎಂದು ರೈತ ತಿಳಿಸಿದ್ದಾರೆ. </p><p><strong>ಮಡಿಕೇರಿಯಲ್ಲಿ ಬಿರುಸಿನ ಮಳೆ</strong></p><p>ಮಡಿಕೇರಿ ನಗರ ಸೇರಿದಂತೆ ತಾಲ್ಲೂಕಿನ ಹಲವೆಡೆ ಭಾನುವಾರ ಮಧ್ಯಾಹ್ನ ಗುಡುಗು–ಸಿಡಿಲು ಸಹಿತ ಬಿರುಸಿನ ಮಳೆ ಸುರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಮೂವರು<br>ಮೃತಪಟ್ಟಿದ್ದಾರೆ.</p><p>ಸುಳ್ಯ ತಾಲ್ಲೂಕಿನ ಪೆರ್ಲಂಪಾಡಿಯಲ್ಲಿ ಅಲಿಕಲ್ಲು ಮಳೆ ಆಗಿದೆ. ಮಂಗಳೂರಿನಲ್ಲಿ ರಾತ್ರಿ 7.30ರ ಸುಮಾರಿಗೆ ಗುಡುಗು ಸಿಡಿಲಿನೊಂದಿಗೆ ಮಳೆಯಾಯಿತು.</p><p>ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಲವೆಡೆ ಮಳೆಯಾಗಿದೆ. ಕಳಸ ಪಟ್ಟಣ ಹಾಗೂ ಸುತ್ತಲಿನ ಪ್ರದೇಶದಲ್ಲೂ ಗುಡುಗು ಮತ್ತು ಗಾಳಿಯ ಆರ್ಭಟದೊಂದಿಗೆ ಭಾರಿ ಮಳೆ ಸುರಿದಿದೆ. </p><p><strong>ಕಲ್ಯಾಣ ಕರ್ನಾಟಕದ ಭಾಗದಲ್ಲಿ ಆಲಿಕಲ್ಲು ಮಳೆ:</strong></p><p>ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕೆ.ಗುಡದಿನ್ನಿ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಸಾಯಣ್ಣ ಯಾದವ (52) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p><strong>ಹುಬ್ಬಳ್ಳಿ: ಸಿಡಿಲಿಗೆ ಇಬ್ಬರು ಬಲಿ</strong></p><p>ಕಳೆದ 24 ಗಂಟೆಗಳಲ್ಲಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಹರವಿ ಬಸಾಪುರ ಗ್ರಾಮದಲ್ಲಿ ರವಿಚಂದ್ರ ಚೌಟಗಿ (39) ಮತ್ತು ತೆಲಿಗಿ ಗ್ರಾಮದಲ್ಲಿ ಬಿ.ಹಾಲೇಶಪ್ಪ (55) ಎಂಬುವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p><p>ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ವಿವಿಧೆಡೆ ಆಲಿಕಲ್ಲು ಮಳೆಗೆ ನೂರಾರು ಎಕರೆ ಹಿಂಗಾರು ಭತ್ತದ ಬೆಳೆ ಹಾನಿಯಾಗಿದೆ.</p><p>ಬಾಗಲಕೋಟೆ ನಗರ ಸೇರಿ ಕೆರೂರ, ಲೋಕಾಪುರದಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಬೀದರ್ ಜಿಲ್ಲೆಯ ಭಾಲ್ಕಿ ಗ್ರಾಮೀಣ ಪ್ರದೇಶ ಹಾಗೂ ಯಾದಗಿರಿ ಜಿಲ್ಲೆಯ ಗುರುಮಠಕಲ್ನ ಸುತ್ತಮುತ್ತ ಆಲಿಕಲ್ಲು ಮಳೆಯಾಗಿದೆ.</p><p>ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮದನಾ ಗ್ರಾಮದಲ್ಲಿ ಭಾರಿ ಮಳೆ, ಗಾಳಿಗೆ ಮಹೇಶ ಬಸಪ್ಪ ಕೂತನವೊಯ್ನ್ ಎಂಬುವವರು ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಪಪ್ಪಾಯ ಸಸಿಗಳು ಮುರಿದು ಬಿದ್ದಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ ಎಂದು ರೈತ ತಿಳಿಸಿದ್ದಾರೆ. </p><p><strong>ಮಡಿಕೇರಿಯಲ್ಲಿ ಬಿರುಸಿನ ಮಳೆ</strong></p><p>ಮಡಿಕೇರಿ ನಗರ ಸೇರಿದಂತೆ ತಾಲ್ಲೂಕಿನ ಹಲವೆಡೆ ಭಾನುವಾರ ಮಧ್ಯಾಹ್ನ ಗುಡುಗು–ಸಿಡಿಲು ಸಹಿತ ಬಿರುಸಿನ ಮಳೆ ಸುರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>