ಬೆಂಗಳೂರು/ಉಡುಪಿ:ಅಂಫನ್ ಚಂಡಮಾರುತ ಪ್ರಭಾವದಿಂದ ಮಂಗಳವಾರ ಮತ್ತು ಬುಧವಾರ (19 ಹಾಗೂ 20) ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಭಾಗದಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಸುರಿಯಲಿದ್ದು, ಸಾರ್ವಜನಿಕರು ಎಚ್ಚರವಾಗಿರಬೇಕು ಎಂದು ಸೂಚನೆ ನೀಡಲಾಗಿದೆ.
‘64ಮಿ.ಮೀ.ನಿಂದ 115 ಮಿ.ಮೀ.ನಷ್ಟು ಮಳೆ ಸುರಿಯಬಹುದು. ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಹಾಗೂ ಪೂರ್ವ ಕರಾವಳಿಯಲ್ಲಿ ತಲೆದೋರಿರುವ ಚಂಡಮಾರುತಗಳಿಂದಾಗಿ ಈ ಬೆಳವಣಿಗೆ ಉಂಟಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.