<p><strong>ಬೆಂಗಳೂರು</strong>: ಕಲ್ಯಾಣ ಕರ್ನಾಟಕ, ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದೆ. ಬೀದರ್ ಜಿಲ್ಲೆಯಲ್ಲಿ ಎರಡು ಸೇತುವೆಗಳಿಗೆ ಹಾನಿಯಾಗಿದೆ. ಬಸವ ಕಲ್ಯಾಣದಲ್ಲಿ ಕಳೆದ 24 ಗಂಟೆಗಳಲ್ಲಿ ಗರಿಷ್ಠ 11 ಸೆಂ.ಮೀ ಮಳೆಯಾಗಿದೆ. </p><p>ಕಲಬುರಗಿ ವರದಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸೋಮವಾರ ರಾತ್ರಿಯಿಡೀ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. </p><p>ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಕೋಹಿನೂರ್ ವ್ಯಾಪ್ತಿಯಲ್ಲಿ 250 ಎಕರೆ ಜಮೀನಿನಲ್ಲಿ ಬೆಳೆ ಮಳೆಗೆ ಕೊಚ್ಚಿಹೋಗಿದೆ. ಎರಡು ಸೇತುವೆಗಳಿಗೆ ಹಾನಿಯಾಗಿದೆ. ಬಸವಕಲ್ಯಾಣದಲ್ಲಿ 11 ಸೆಂ.ಮೀ ಮಳೆ ಸುರಿದಿದೆ. ಬೀದರ್ ನಗರ ಹಾಗೂ ಸುತ್ತಮುತ್ತ ಮಂಗಳವಾರ ಸಂಜೆ ಉತ್ತಮವಾಗಿ ಮಳೆ ಬಿದ್ದಿದೆ. </p><p>ಕಲಬುರಗಿ ನಗರವೂ ಸೇರಿದಂತೆ ಸೇಡಂ, ಚಿತ್ತಾಪುರ, ಚಿಂಚೋಳಿ, ಕಾಳಗಿ ಹಾಗೂ ಜೇವರ್ಗಿ ತಾಲ್ಲೂಕುಗಳಲ್ಲಿ ಸೋಮವಾರ ರಾತ್ರಿ ಉತ್ತಮವಾಗಿ ಮಳೆ ಸುರಿದಿದೆ. </p><p>ಕೊಪ್ಪಳ ಜಿಲ್ಲೆಯ ಕೊಪ್ಪಳ, ಗಂಗಾವತಿ, ಮುನಿರಾಬಾದ್ ಭಾಗದಲ್ಲಿ ಮಂಗಳವಾರ ಮಳೆಯಾಗಿದೆ. ಮಳೆ ಚುರುಕಾಗಿರುವುದರಿಂದ ಯೂರಿಯಾ ರಸಗೊಬ್ಬರಕ್ಕಾಗಿ ರೈತರು ಪರದಾಡುವಂತಾಗಿದೆ.</p><p>ರಾಯಚೂರು, ಸಿಂಧನೂರು, ದೇವದುರ್ಗದಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಉತ್ತಮವಾಗಿ ಮಳೆ ಸುರಿದಿದೆ. </p><p>26ರವರೆಗೆ ಯಲ್ಲೊ ಅಲರ್ಟ್ (ಮಂಗಳೂರು ವರದಿ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಂಚ ತಗ್ಗಿದ್ದ ಮಳೆ ಮಂಗಳವಾರ ಮತ್ತೆ ಬಿರುಸುಗೊಂಡಿತು. ಇಡೀ ದಿನ ಎಡೆಬಿಡದೆ ಹದವಾದ ಮಳೆ ಸುರಿಯಿತು.</p><p>ಜು.26ರವರೆಗೆ ಜಿಲ್ಲೆಯಲ್ಲಿ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ನಾಡದೋಣಿ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p><p>ನಿರಂತರ ಮಳೆ (ಮಡಿಕೇರಿ ವರದಿ): ನಗರದಲ್ಲಿ ಮಂಗಳವಾರ ದಿನ ವಿಡೀ ಮಳೆಯಾಗಿದೆ. ಮಡಿಕೇರಿ, ಪೊನ್ನಂಪೇಟೆ ತಾಲ್ಲೂಕಿನಲ್ಲಿ ಸರಾಸರಿ 4 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಲ್ಯಾಣ ಕರ್ನಾಟಕ, ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದೆ. ಬೀದರ್ ಜಿಲ್ಲೆಯಲ್ಲಿ ಎರಡು ಸೇತುವೆಗಳಿಗೆ ಹಾನಿಯಾಗಿದೆ. ಬಸವ ಕಲ್ಯಾಣದಲ್ಲಿ ಕಳೆದ 24 ಗಂಟೆಗಳಲ್ಲಿ ಗರಿಷ್ಠ 11 ಸೆಂ.ಮೀ ಮಳೆಯಾಗಿದೆ. </p><p>ಕಲಬುರಗಿ ವರದಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸೋಮವಾರ ರಾತ್ರಿಯಿಡೀ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. </p><p>ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಕೋಹಿನೂರ್ ವ್ಯಾಪ್ತಿಯಲ್ಲಿ 250 ಎಕರೆ ಜಮೀನಿನಲ್ಲಿ ಬೆಳೆ ಮಳೆಗೆ ಕೊಚ್ಚಿಹೋಗಿದೆ. ಎರಡು ಸೇತುವೆಗಳಿಗೆ ಹಾನಿಯಾಗಿದೆ. ಬಸವಕಲ್ಯಾಣದಲ್ಲಿ 11 ಸೆಂ.ಮೀ ಮಳೆ ಸುರಿದಿದೆ. ಬೀದರ್ ನಗರ ಹಾಗೂ ಸುತ್ತಮುತ್ತ ಮಂಗಳವಾರ ಸಂಜೆ ಉತ್ತಮವಾಗಿ ಮಳೆ ಬಿದ್ದಿದೆ. </p><p>ಕಲಬುರಗಿ ನಗರವೂ ಸೇರಿದಂತೆ ಸೇಡಂ, ಚಿತ್ತಾಪುರ, ಚಿಂಚೋಳಿ, ಕಾಳಗಿ ಹಾಗೂ ಜೇವರ್ಗಿ ತಾಲ್ಲೂಕುಗಳಲ್ಲಿ ಸೋಮವಾರ ರಾತ್ರಿ ಉತ್ತಮವಾಗಿ ಮಳೆ ಸುರಿದಿದೆ. </p><p>ಕೊಪ್ಪಳ ಜಿಲ್ಲೆಯ ಕೊಪ್ಪಳ, ಗಂಗಾವತಿ, ಮುನಿರಾಬಾದ್ ಭಾಗದಲ್ಲಿ ಮಂಗಳವಾರ ಮಳೆಯಾಗಿದೆ. ಮಳೆ ಚುರುಕಾಗಿರುವುದರಿಂದ ಯೂರಿಯಾ ರಸಗೊಬ್ಬರಕ್ಕಾಗಿ ರೈತರು ಪರದಾಡುವಂತಾಗಿದೆ.</p><p>ರಾಯಚೂರು, ಸಿಂಧನೂರು, ದೇವದುರ್ಗದಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಉತ್ತಮವಾಗಿ ಮಳೆ ಸುರಿದಿದೆ. </p><p>26ರವರೆಗೆ ಯಲ್ಲೊ ಅಲರ್ಟ್ (ಮಂಗಳೂರು ವರದಿ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಂಚ ತಗ್ಗಿದ್ದ ಮಳೆ ಮಂಗಳವಾರ ಮತ್ತೆ ಬಿರುಸುಗೊಂಡಿತು. ಇಡೀ ದಿನ ಎಡೆಬಿಡದೆ ಹದವಾದ ಮಳೆ ಸುರಿಯಿತು.</p><p>ಜು.26ರವರೆಗೆ ಜಿಲ್ಲೆಯಲ್ಲಿ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ನಾಡದೋಣಿ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p><p>ನಿರಂತರ ಮಳೆ (ಮಡಿಕೇರಿ ವರದಿ): ನಗರದಲ್ಲಿ ಮಂಗಳವಾರ ದಿನ ವಿಡೀ ಮಳೆಯಾಗಿದೆ. ಮಡಿಕೇರಿ, ಪೊನ್ನಂಪೇಟೆ ತಾಲ್ಲೂಕಿನಲ್ಲಿ ಸರಾಸರಿ 4 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>