<p><strong>ಕೊಡಗು</strong>: ಜಿಲ್ಲೆಯ ಹಲವೆಡೆ ಶುಕ್ರವಾರವೂ ಧಾರಾಕಾರ ಮಳೆ ಮುಂದುವರಿಯಿತು. ಮಡಿಕೇರಿ, ನಾಪೋಕ್ಲು ಮತ್ತು ವಿರಾಜಪೇಟೆಯಲ್ಲಿ ದಿನವಿಡೀ ಮಳೆ ಸುರಿಯಿತು.</p><p><strong>ಮಂಗಳೂರು ವರದಿ</strong>: ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಮುಂದುವರಿ<br>ದಿದೆ. ಬಂಟ್ವಾಳ ತಾಲ್ಲೂಕಿನಲ್ಲಿ ಎಡೆಬಿಡದೆ ಮಳೆ ಸುರಿದ ಕಾರಣ ಅಂಗನವಾಡಿ, ಶಾಲಾ– ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಮಧ್ಯಾಹ್ನದ ನಂತರ ಮಳೆ ಬಿರುಸುಗೊಂಡಿತು. ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಬ್ರಹ್ಮಾವರ, ಕಾಪು ವ್ಯಾಪ್ತಿಯಲ್ಲೂ ಬಿರುಸಿನ ಮಳೆ ಸುರಿದಿದೆ. </p><p>ಚಿಕ್ಕಮಗಳೂರು: ಜಿಲ್ಲೆಯ ಚಿಕ್ಕಮಗಳೂರು, ಕಳಸ, ಎನ್.ಆರ್.ಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ ತಾಲ್ಲೂಕಿನ ಹಲವೆಡೆ ಮಳೆ ಸುರಿಯಿತು. ಕಳಸ ತಾಲ್ಲೂಕಿನ ಚನ್ನಹಡ್ಲು ಬಳಿ ರಸ್ತೆ ಮಣ್ಣು ಕುಸಿದು ಸಂಚಾರಕ್ಕೆ ಅಡಚಣೆಯಾಗಿತ್ತು. ಹಿರೇಬೈಲು– ಮಲ್ಲೇಶನ ಗುಡ್ಡ, ಬಾಳೆಹೊಳೆ ಸೇರಿ ಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿತ್ತು.</p><p><strong>ಗಂಗಾವತಿ (ಕೊಪ್ಪಳ ಜಿಲ್ಲೆ): </strong>ತುಂಗಭದ್ರಾ ಜಲಾಶಯದಿಂದ ಶುಕ್ರವಾರ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಸಿರುವುದರಿಂದ ತಾಲ್ಲೂಕಿನ ವಿರೂಪಾಪುರಗಡ್ಡೆ, ನವವೃಂದಾವನಗಡ್ಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಆನೆಗೊಂದಿ ಭಾಗದ ಕೆಲ ದೇವಾಲಯ, ಮಂಟಪಗಳಿಗೆ ನೀರು ನುಗ್ಗಿದೆ. ಜಲಾಶಯದ ಒಳಹರಿವು ಹೆಚ್ಚಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಆನೆಗೊಂದಿ<br>ಯಲ್ಲಿರುವ ಕೃಷ್ಣದೇವರಾಯನ ಸಮಾಧಿಯ 64 ಸಾಲಿನ ಕಲ್ಲಿನ ಮಂಟಪ ಭಾಗಶಃ ಮುಳುಗಡೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಡಗು</strong>: ಜಿಲ್ಲೆಯ ಹಲವೆಡೆ ಶುಕ್ರವಾರವೂ ಧಾರಾಕಾರ ಮಳೆ ಮುಂದುವರಿಯಿತು. ಮಡಿಕೇರಿ, ನಾಪೋಕ್ಲು ಮತ್ತು ವಿರಾಜಪೇಟೆಯಲ್ಲಿ ದಿನವಿಡೀ ಮಳೆ ಸುರಿಯಿತು.</p><p><strong>ಮಂಗಳೂರು ವರದಿ</strong>: ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಮುಂದುವರಿ<br>ದಿದೆ. ಬಂಟ್ವಾಳ ತಾಲ್ಲೂಕಿನಲ್ಲಿ ಎಡೆಬಿಡದೆ ಮಳೆ ಸುರಿದ ಕಾರಣ ಅಂಗನವಾಡಿ, ಶಾಲಾ– ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಮಧ್ಯಾಹ್ನದ ನಂತರ ಮಳೆ ಬಿರುಸುಗೊಂಡಿತು. ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಬ್ರಹ್ಮಾವರ, ಕಾಪು ವ್ಯಾಪ್ತಿಯಲ್ಲೂ ಬಿರುಸಿನ ಮಳೆ ಸುರಿದಿದೆ. </p><p>ಚಿಕ್ಕಮಗಳೂರು: ಜಿಲ್ಲೆಯ ಚಿಕ್ಕಮಗಳೂರು, ಕಳಸ, ಎನ್.ಆರ್.ಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ ತಾಲ್ಲೂಕಿನ ಹಲವೆಡೆ ಮಳೆ ಸುರಿಯಿತು. ಕಳಸ ತಾಲ್ಲೂಕಿನ ಚನ್ನಹಡ್ಲು ಬಳಿ ರಸ್ತೆ ಮಣ್ಣು ಕುಸಿದು ಸಂಚಾರಕ್ಕೆ ಅಡಚಣೆಯಾಗಿತ್ತು. ಹಿರೇಬೈಲು– ಮಲ್ಲೇಶನ ಗುಡ್ಡ, ಬಾಳೆಹೊಳೆ ಸೇರಿ ಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿತ್ತು.</p><p><strong>ಗಂಗಾವತಿ (ಕೊಪ್ಪಳ ಜಿಲ್ಲೆ): </strong>ತುಂಗಭದ್ರಾ ಜಲಾಶಯದಿಂದ ಶುಕ್ರವಾರ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಸಿರುವುದರಿಂದ ತಾಲ್ಲೂಕಿನ ವಿರೂಪಾಪುರಗಡ್ಡೆ, ನವವೃಂದಾವನಗಡ್ಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಆನೆಗೊಂದಿ ಭಾಗದ ಕೆಲ ದೇವಾಲಯ, ಮಂಟಪಗಳಿಗೆ ನೀರು ನುಗ್ಗಿದೆ. ಜಲಾಶಯದ ಒಳಹರಿವು ಹೆಚ್ಚಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಆನೆಗೊಂದಿ<br>ಯಲ್ಲಿರುವ ಕೃಷ್ಣದೇವರಾಯನ ಸಮಾಧಿಯ 64 ಸಾಲಿನ ಕಲ್ಲಿನ ಮಂಟಪ ಭಾಗಶಃ ಮುಳುಗಡೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>