<p><strong>ಕಾರವಾರ: </strong>ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರವೂ (ಜುಲೈ 23) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ‘ರೆಡ್ ಅಲರ್ಟ್’ ಘೋಷಿಸಿದೆ.</p>.<p>ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾದ ಪರಿಣಾಮ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿತ್ತು. ಮಳೆ ಮತ್ತೆ ತೀವ್ರತೆ ಪಡೆಯುವ ಸಾಧ್ಯತೆ ಇರುವುದರಿಂದ ಜುಲೈ 24ರವರೆಗೆ ‘ರೆಡ್ ಅಲರ್ಟ್‘ ಘೋಷಿಸಲಾಗಿದ್ದು, 204 ಮಿ.ಮೀಗಿಂತ ಅಧಿಕ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ.</p>.<p><strong>ಇದನ್ನೂ ಓದಿ...</strong><a href="https://www.prajavani.net/stories/stateregional/heavy-rainfall-kodagu-dakshina-652810.html" target="_blank"><strong>ಮೈದುಂಬಿದ ಕಾವೇರಿ, ಲಕ್ಷ್ಮಣತೀರ್ಥ</strong></a></p>.<p>ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕೋರಿದ್ದಾರೆ. ಪ್ರಕೃತಿ ವಿಕೋಪ ಸಂಬಂಧ ಸಹಾಯವಾಣಿ ಆರಂಭಿಸಲಾಗಿದ್ದು ಸಮಸ್ಯೆಯಾದರೆ<strong> ದೂರವಾಣಿ: 08272 221077</strong> ಹಾಗೂ ಮೊಬೈಲ್: <strong>85500 01077 </strong>ಸಂಪರ್ಕಿಸಲು ಕೋರಲಾಗಿದೆ.</p>.<p><strong>ಶಾಲಾ–ಕಾಲೇಜುಗಳಿಗೆ ರಜೆ<br />ಕಾರವಾರ:</strong> ಭಾರಿ ಮಳೆ ಬೀಳುವ ಮುನ್ಸೂಚನೆ ಇರುವ ಕಾರಣ ಜಿಲ್ಲೆಯ ಕರಾವಳಿ ತಾಲ್ಲೂಕುಗಳ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.</p>.<p>ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಈ ಭಾಗಕ್ಕೆ ‘ರೆಡ್ ಅಲರ್ಟ್’ಪ್ರಕಟವಾಗಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸುವಂತೆ ಕಾರವಾರ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಅವರಿಗೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಸೂಚನೆ ನೀಡಿದ್ದಾರೆ.</p>.<p>ಇಂದು ನೀಡಲಾಗಿರುವ ರಜೆಯಿಂದ ನಷ್ಟವಾದ ತರಗತಿಗಳನ್ನು ಭಾನುವಾರ ಹಮ್ಮಿಕೊಂಡು ಸರಿದೂಗಿಸಿಕೊಳ್ಳುವಂತೆಯೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರವೂ (ಜುಲೈ 23) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ‘ರೆಡ್ ಅಲರ್ಟ್’ ಘೋಷಿಸಿದೆ.</p>.<p>ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾದ ಪರಿಣಾಮ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿತ್ತು. ಮಳೆ ಮತ್ತೆ ತೀವ್ರತೆ ಪಡೆಯುವ ಸಾಧ್ಯತೆ ಇರುವುದರಿಂದ ಜುಲೈ 24ರವರೆಗೆ ‘ರೆಡ್ ಅಲರ್ಟ್‘ ಘೋಷಿಸಲಾಗಿದ್ದು, 204 ಮಿ.ಮೀಗಿಂತ ಅಧಿಕ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ.</p>.<p><strong>ಇದನ್ನೂ ಓದಿ...</strong><a href="https://www.prajavani.net/stories/stateregional/heavy-rainfall-kodagu-dakshina-652810.html" target="_blank"><strong>ಮೈದುಂಬಿದ ಕಾವೇರಿ, ಲಕ್ಷ್ಮಣತೀರ್ಥ</strong></a></p>.<p>ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕೋರಿದ್ದಾರೆ. ಪ್ರಕೃತಿ ವಿಕೋಪ ಸಂಬಂಧ ಸಹಾಯವಾಣಿ ಆರಂಭಿಸಲಾಗಿದ್ದು ಸಮಸ್ಯೆಯಾದರೆ<strong> ದೂರವಾಣಿ: 08272 221077</strong> ಹಾಗೂ ಮೊಬೈಲ್: <strong>85500 01077 </strong>ಸಂಪರ್ಕಿಸಲು ಕೋರಲಾಗಿದೆ.</p>.<p><strong>ಶಾಲಾ–ಕಾಲೇಜುಗಳಿಗೆ ರಜೆ<br />ಕಾರವಾರ:</strong> ಭಾರಿ ಮಳೆ ಬೀಳುವ ಮುನ್ಸೂಚನೆ ಇರುವ ಕಾರಣ ಜಿಲ್ಲೆಯ ಕರಾವಳಿ ತಾಲ್ಲೂಕುಗಳ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.</p>.<p>ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ಈ ಭಾಗಕ್ಕೆ ‘ರೆಡ್ ಅಲರ್ಟ್’ಪ್ರಕಟವಾಗಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸುವಂತೆ ಕಾರವಾರ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಅವರಿಗೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಸೂಚನೆ ನೀಡಿದ್ದಾರೆ.</p>.<p>ಇಂದು ನೀಡಲಾಗಿರುವ ರಜೆಯಿಂದ ನಷ್ಟವಾದ ತರಗತಿಗಳನ್ನು ಭಾನುವಾರ ಹಮ್ಮಿಕೊಂಡು ಸರಿದೂಗಿಸಿಕೊಳ್ಳುವಂತೆಯೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>