<p><strong>ಬೆಂಗಳೂರು:</strong> ರಾಜ್ಯದ ಕೊಡಗು, ಧಾರವಾಡ, ಉತ್ತರ ಕನ್ನಡ, ಬೀದರ್ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ.</p><p>ಆದರೆ, ಕರಾವಳಿಯಲ್ಲಿ ಶುಕ್ರವಾರದಂದು ಮಳೆ ಪ್ರಮಾಣ ತುಸು ತಗ್ಗಿದೆ. ಮಳೆ ಸಂಬಂಧಿತ ಅವಘಡ<br>ಗಳಲ್ಲಿ ಮೂವರು ಮೃತಪಟ್ಟಿದ್ದಾರೆ.</p><p><strong>ಹುಬ್ಬಳ್ಳಿ ವರದಿ: </strong></p><p>ಧಾರವಾಡ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಯ ಬಹುತೇಕ ಕಡೆ ಶುಕ್ರವಾರ ಮಳೆಯಾಯಿತು.</p><p>ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದಲ್ಲಿ ಆಗಾಗ ಬಿರುಸಿನ ಮಳೆ ಸುರಿಯಿತು. ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಭಟ್ಕಳ, ಹೊನ್ನಾವರ, ಕುಮಟಾ ಭಾಗದಲ್ಲಿ ಹಳ್ಳಗಳು ಭರ್ತಿಯಾಗಿವೆ. ಜಿಲ್ಲೆಯ ಸೂಪಾ, ಕದ್ರಾ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ 20 ಸಾವಿರ ಕ್ಯೂಸೆಕ್ ಮೀರಿದೆ.</p><p>ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಮತ್ತು ಸುತ್ತಮುತ್ತಲೂ ಮಳೆಯಾಯಿತು. ಹುಬ್ಬಳ್ಳಿಯಲ್ಲಿ ಕೆಲ ಕಡೆ ರಸ್ತೆಗಳು ಜಲಾವೃತವಾಗಿದ್ದವು. ಗದಗ ಜಿಲ್ಲೆಯ ಗಜೇಂದ್ರಗಡ, ನರಗುಂದ ಭಾಗದಲ್ಲಿ ಮಳೆಯಾಯಿತು.</p><p><strong>ಕೊಪ್ಪಳ, ಬೀದರ್ನಲ್ಲಿ ಉತ್ತಮ: </strong></p><p>ಕೊಪ್ಪಳ ಜಿಲ್ಲೆಯಾದ್ಯಂತ ಶುಕ್ರವಾರ ಉತ್ತಮ ಮಳೆಯಾಗಿದ್ದು, ಮಳೆ ಕೊರತೆಯಿಂದ ಆತಂಕದಲ್ಲಿದ್ದ ರೈತರಿಗೆ ಇದರಿಂದ ಖುಷಿಯಾಗಿದೆ.</p><p>ಕೊಪ್ಪಳ, ಮುನಿರಾಬಾದ್, ಗಂಗಾವತಿ ಭಾಗದಲ್ಲಿ ಜೋರು ಮಳೆ ಬಂದಿದೆ. ಹಲವು ದಿನಗಳ ಬಿಡುವಿನ ನಂತರ ಬೀದರ್ ಜಿಲ್ಲೆಯ ಹಲವೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ಬೀದರ್ ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮಧ್ಯಾಹ್ನ ಸುಮಾರು ಒಂದು ಗಂಟೆ ಜೋರಾಗಿ ಮಳೆ ಸುರಿದಿದೆ. </p><p><strong>ಮಡಿಕೇರಿ ವರದಿ: </strong></p><p>ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣ ಮಳೆಯಾಯಿತು. ಭಾರಿ ಮಳೆ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಶನಿವಾರ (ಜುಲೈ 19) ರೆಡ್ ಅಲರ್ಟ್ ಘೋಷಿಸಿದೆ. ಭಾಗಮಂಡಲದಲ್ಲಿ 4 ಸೆಂ.ಮೀ ಮಳೆಯಾಗಿದೆ.</p><p>ಕೊಡಗು ಜಿಲ್ಲೆಯ ಗಡಿ ಭಾಗಕರಿಕೆ–ಕೇರಳದ ಕಾಸರಗೋಡಿನ ಪಾಣತ್ತೂರು ಮಧ್ಯೆ ಹರಿಯುವ ಮಂಞಡ್ಕ ನದಿಯಲ್ಲಿ ಬೆಳಗಾವಿಯ ಯುವಕ ದುರುಗಪ್ಪ ಮಾದಾರ (19) ಎಂಬುವವರು ಬೈಕ್ ಸಮೇತ ಕೊಚ್ಚಿ ಹೋಗಿರುವ ಶಂಕೆ ಇದ್ದು, ನದಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p><strong>ಮಳೆ: ದಂಪತಿ, ಕಾರ್ಮಿಕನ ಶವ ಪತ್ತೆ</strong></p><p>ಮಂಗಳೂರು: ನಗರದಲ್ಲಿ ಮಧ್ಯಾಹ್ನದ ನಂತರ ಮಳೆಯ ತೀವ್ರತೆ ಹೆಚ್ಚಾಯಿತು. ಉಳ್ಳಾಲ ಬಳಿಯ ಪಿಲಾರು ರಾಜಕಾಲುವೆ ಕಾಲುಸಂಕ ದಾಟುವಾಗ ಬುಧವಾರ ನೀರು ಪಾಲಾಗಿದ್ದ ಕೂಲಿಕಾರ್ಮಿಕ, ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ಕೇಶವ ಶೆಟ್ಟಿ (64) ಅವರ ಮೃತದೇಹ ಶುಕ್ರವಾರ ರಾಜಕಾಲುವೆಯಲ್ಲಿ ಪತ್ತೆಯಾಗಿದೆ.</p><p>ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕಿನ ಹೊಡೆಯಾಲದಲ್ಲಿ ಹಳ್ಳ ಉಕ್ಕಿ ಹರಿದು ಗುರುವಾರ ನೀರಿನಲ್ಲಿ ಕೊಚ್ಚಿಹೋಗಿದ್ದ ಈಶ್ವರ (65), ಲತಾ (55) ದಂಪತಿಯ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಕೊಡಗು, ಧಾರವಾಡ, ಉತ್ತರ ಕನ್ನಡ, ಬೀದರ್ ಜಿಲ್ಲೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ.</p><p>ಆದರೆ, ಕರಾವಳಿಯಲ್ಲಿ ಶುಕ್ರವಾರದಂದು ಮಳೆ ಪ್ರಮಾಣ ತುಸು ತಗ್ಗಿದೆ. ಮಳೆ ಸಂಬಂಧಿತ ಅವಘಡ<br>ಗಳಲ್ಲಿ ಮೂವರು ಮೃತಪಟ್ಟಿದ್ದಾರೆ.</p><p><strong>ಹುಬ್ಬಳ್ಳಿ ವರದಿ: </strong></p><p>ಧಾರವಾಡ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಯ ಬಹುತೇಕ ಕಡೆ ಶುಕ್ರವಾರ ಮಳೆಯಾಯಿತು.</p><p>ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದಲ್ಲಿ ಆಗಾಗ ಬಿರುಸಿನ ಮಳೆ ಸುರಿಯಿತು. ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಭಟ್ಕಳ, ಹೊನ್ನಾವರ, ಕುಮಟಾ ಭಾಗದಲ್ಲಿ ಹಳ್ಳಗಳು ಭರ್ತಿಯಾಗಿವೆ. ಜಿಲ್ಲೆಯ ಸೂಪಾ, ಕದ್ರಾ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ 20 ಸಾವಿರ ಕ್ಯೂಸೆಕ್ ಮೀರಿದೆ.</p><p>ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಮತ್ತು ಸುತ್ತಮುತ್ತಲೂ ಮಳೆಯಾಯಿತು. ಹುಬ್ಬಳ್ಳಿಯಲ್ಲಿ ಕೆಲ ಕಡೆ ರಸ್ತೆಗಳು ಜಲಾವೃತವಾಗಿದ್ದವು. ಗದಗ ಜಿಲ್ಲೆಯ ಗಜೇಂದ್ರಗಡ, ನರಗುಂದ ಭಾಗದಲ್ಲಿ ಮಳೆಯಾಯಿತು.</p><p><strong>ಕೊಪ್ಪಳ, ಬೀದರ್ನಲ್ಲಿ ಉತ್ತಮ: </strong></p><p>ಕೊಪ್ಪಳ ಜಿಲ್ಲೆಯಾದ್ಯಂತ ಶುಕ್ರವಾರ ಉತ್ತಮ ಮಳೆಯಾಗಿದ್ದು, ಮಳೆ ಕೊರತೆಯಿಂದ ಆತಂಕದಲ್ಲಿದ್ದ ರೈತರಿಗೆ ಇದರಿಂದ ಖುಷಿಯಾಗಿದೆ.</p><p>ಕೊಪ್ಪಳ, ಮುನಿರಾಬಾದ್, ಗಂಗಾವತಿ ಭಾಗದಲ್ಲಿ ಜೋರು ಮಳೆ ಬಂದಿದೆ. ಹಲವು ದಿನಗಳ ಬಿಡುವಿನ ನಂತರ ಬೀದರ್ ಜಿಲ್ಲೆಯ ಹಲವೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ಬೀದರ್ ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮಧ್ಯಾಹ್ನ ಸುಮಾರು ಒಂದು ಗಂಟೆ ಜೋರಾಗಿ ಮಳೆ ಸುರಿದಿದೆ. </p><p><strong>ಮಡಿಕೇರಿ ವರದಿ: </strong></p><p>ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣ ಮಳೆಯಾಯಿತು. ಭಾರಿ ಮಳೆ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಶನಿವಾರ (ಜುಲೈ 19) ರೆಡ್ ಅಲರ್ಟ್ ಘೋಷಿಸಿದೆ. ಭಾಗಮಂಡಲದಲ್ಲಿ 4 ಸೆಂ.ಮೀ ಮಳೆಯಾಗಿದೆ.</p><p>ಕೊಡಗು ಜಿಲ್ಲೆಯ ಗಡಿ ಭಾಗಕರಿಕೆ–ಕೇರಳದ ಕಾಸರಗೋಡಿನ ಪಾಣತ್ತೂರು ಮಧ್ಯೆ ಹರಿಯುವ ಮಂಞಡ್ಕ ನದಿಯಲ್ಲಿ ಬೆಳಗಾವಿಯ ಯುವಕ ದುರುಗಪ್ಪ ಮಾದಾರ (19) ಎಂಬುವವರು ಬೈಕ್ ಸಮೇತ ಕೊಚ್ಚಿ ಹೋಗಿರುವ ಶಂಕೆ ಇದ್ದು, ನದಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p><strong>ಮಳೆ: ದಂಪತಿ, ಕಾರ್ಮಿಕನ ಶವ ಪತ್ತೆ</strong></p><p>ಮಂಗಳೂರು: ನಗರದಲ್ಲಿ ಮಧ್ಯಾಹ್ನದ ನಂತರ ಮಳೆಯ ತೀವ್ರತೆ ಹೆಚ್ಚಾಯಿತು. ಉಳ್ಳಾಲ ಬಳಿಯ ಪಿಲಾರು ರಾಜಕಾಲುವೆ ಕಾಲುಸಂಕ ದಾಟುವಾಗ ಬುಧವಾರ ನೀರು ಪಾಲಾಗಿದ್ದ ಕೂಲಿಕಾರ್ಮಿಕ, ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ಕೇಶವ ಶೆಟ್ಟಿ (64) ಅವರ ಮೃತದೇಹ ಶುಕ್ರವಾರ ರಾಜಕಾಲುವೆಯಲ್ಲಿ ಪತ್ತೆಯಾಗಿದೆ.</p><p>ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕಿನ ಹೊಡೆಯಾಲದಲ್ಲಿ ಹಳ್ಳ ಉಕ್ಕಿ ಹರಿದು ಗುರುವಾರ ನೀರಿನಲ್ಲಿ ಕೊಚ್ಚಿಹೋಗಿದ್ದ ಈಶ್ವರ (65), ಲತಾ (55) ದಂಪತಿಯ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>