<p><strong>ಬೆಂಗಳೂರು:</strong> ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿ 10 ಜಿಲ್ಲೆಗಳಲ್ಲಿ ಇದೇ 27 ಮತ್ತು 28ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಈ ಭಾಗಗಳ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರದವರೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ.</p>.<p>ವಿಜಯಪುರ ಜಿಲ್ಲೆಯ ನಾಲತವಾಡದಲ್ಲಿ ಮಂಗಳವಾರ 6 ಸೆಂ.ಮೀ. ಮಳೆಯಾಗಿದೆ. ಶಿರಹಟ್ಟಿ, ಪಾಂಡವಪುರ, ಹೊಸದುರ್ಗ, ಶ್ರೀರಂಗಪಟ್ಟಣ 4, ಇಳಕಲ್, ಗದಗ, ಬೇಲೂರು, ಮೈಸೂರು 3, ಕುಷ್ಟಗಿ, ಶಿಗ್ಗಾಂವ, ಬೆಳ್ಳಟ್ಟಿ, ತಿಪಟೂರು, ಆನೇಕಲ್ನಲ್ಲಿ 2 ಸೆಂ.ಮೀ ಮಳೆಯಾಗಿದೆ.</p>.<p><strong>ಇಂದಿನಿಂದ ಸುಡುಗಾಳಿ:</strong> ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸುಡುಗಾಳಿ ಬೀಸಲಿದ್ದು, ಸಾರ್ವಜನಿಕರು ಬಿಸಿಲಿಗೆ ಮೈಯೊಡ್ಡದಂತೆ ಇಲಾಖೆ ಎಚ್ಚರಿಸಿದೆ. ಕಲಬುರ್ಗಿಯಲ್ಲಿ ಮಂಗಳವಾರ 44.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿ 10 ಜಿಲ್ಲೆಗಳಲ್ಲಿ ಇದೇ 27 ಮತ್ತು 28ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಈ ಭಾಗಗಳ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರದವರೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ.</p>.<p>ವಿಜಯಪುರ ಜಿಲ್ಲೆಯ ನಾಲತವಾಡದಲ್ಲಿ ಮಂಗಳವಾರ 6 ಸೆಂ.ಮೀ. ಮಳೆಯಾಗಿದೆ. ಶಿರಹಟ್ಟಿ, ಪಾಂಡವಪುರ, ಹೊಸದುರ್ಗ, ಶ್ರೀರಂಗಪಟ್ಟಣ 4, ಇಳಕಲ್, ಗದಗ, ಬೇಲೂರು, ಮೈಸೂರು 3, ಕುಷ್ಟಗಿ, ಶಿಗ್ಗಾಂವ, ಬೆಳ್ಳಟ್ಟಿ, ತಿಪಟೂರು, ಆನೇಕಲ್ನಲ್ಲಿ 2 ಸೆಂ.ಮೀ ಮಳೆಯಾಗಿದೆ.</p>.<p><strong>ಇಂದಿನಿಂದ ಸುಡುಗಾಳಿ:</strong> ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸುಡುಗಾಳಿ ಬೀಸಲಿದ್ದು, ಸಾರ್ವಜನಿಕರು ಬಿಸಿಲಿಗೆ ಮೈಯೊಡ್ಡದಂತೆ ಇಲಾಖೆ ಎಚ್ಚರಿಸಿದೆ. ಕಲಬುರ್ಗಿಯಲ್ಲಿ ಮಂಗಳವಾರ 44.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>