<p><strong>ಮಂಗಳೂರು:</strong> ಭಾರಿ ಮಳೆಯಿಂದಾಗಿ ಪಯಸ್ವಿನಿ ನದಿ ಉಕ್ಕಿಹರಿದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶದಲ್ಲಿರುವ ಸಂಪಾಜೆ ಸಮೀಪದ ಪೆರಾಜೆ ಬಿಳಿಯಾರು ಎಂಬಲ್ಲಿ ಹಳ್ಳವೊಂದು ಸೇತುವೆ ಮೇಲೆ ಉಕ್ಕಿ ಹರಿದು ರಸ್ತೆ ಜಲಾವೃತವಾಗಿದೆ.</p>.<p>ಬುಧವಾರ ನಸುಕಿನಲ್ಲಿ 3.30ರಿಂದ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಂತಿದ್ದವು.</p>.<p>ಪ್ರವಾಹದ ನೀರಿನಲ್ಲಿ ಸಿಲುಕಿ ಕೆಎಎಸ್ಆರ್ಟಿಸಿಯ ರಾಜಹಂಸ ಬಸ್ ಕೆಟ್ಟು ನಿಂತಿದೆ.</p>.<p>ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಅಗ್ನಿಶಾಮಕ ದಳದ ಸಿಬ್ಬಂದಿ ರಾಜಹಂಸ ಬಸ್ನಲ್ಲಿದ್ದ ಒಂಬತ್ತು ಮಂದಿ ಪ್ರಯಾಣಿಕರನ್ನು ದೋಣಿಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು. 5.15 ರ ಬಳಿಕ ನೀರಿನ ಮಟ್ಟ ತುಸು ಇಳಿಕೆಯಾಗ ತೊಡಗಿದೆ.</p>.<p>ಮೈಸೂರು- ಮಡಿಕೇರಿ - ಮಂಗಳೂರನ್ನು ಸಂಪರ್ಕಿಸುವ ರಸ್ತೆ ಇದಾಗಿದೆ. ರಾತ್ರಿ ವೇಳೆಯೂ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಪ್ರವಾಹದಿಂದ ಅಂತರ ಜಿಲ್ಲಾ ಸಂಪರ್ಕವೇ ಕಡಿತಗೊಂಡಿದೆ.</p>.<p>‘ಎರಡು ದಿನಗಳಿಂದ ನದಿಯ ನೀರಿನ ಮಟ್ಟ ಹೆಚ್ಚಳವಾಗಿತ್ತು. ಬುಧವಾರ ರಾತ್ರಿ ನದಿ ಉಕ್ಕಿ ಹರಿದಿದೆ. ಪಯಸ್ವಿನಿ ನದಿಯಲ್ಲಿ ಪ್ರವಾಹ ಉಂಟಾಗಿರುವುದರಿಂದ ಇಲ್ಲಿನ ಹಳ್ಳದ ನೀರು ಕಟ್ಟಿಕೊಂಡು ಸೇತುವೆ ಜಲಾವೃತವಾಗಿದೆ’ ಎಂದು ಸ್ಥಳೀಯ ನಿವಾಸಿ ಅನುಷಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಭಾರಿ ಮಳೆಯಿಂದಾಗಿ ಪಯಸ್ವಿನಿ ನದಿ ಉಕ್ಕಿಹರಿದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶದಲ್ಲಿರುವ ಸಂಪಾಜೆ ಸಮೀಪದ ಪೆರಾಜೆ ಬಿಳಿಯಾರು ಎಂಬಲ್ಲಿ ಹಳ್ಳವೊಂದು ಸೇತುವೆ ಮೇಲೆ ಉಕ್ಕಿ ಹರಿದು ರಸ್ತೆ ಜಲಾವೃತವಾಗಿದೆ.</p>.<p>ಬುಧವಾರ ನಸುಕಿನಲ್ಲಿ 3.30ರಿಂದ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಂತಿದ್ದವು.</p>.<p>ಪ್ರವಾಹದ ನೀರಿನಲ್ಲಿ ಸಿಲುಕಿ ಕೆಎಎಸ್ಆರ್ಟಿಸಿಯ ರಾಜಹಂಸ ಬಸ್ ಕೆಟ್ಟು ನಿಂತಿದೆ.</p>.<p>ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಅಗ್ನಿಶಾಮಕ ದಳದ ಸಿಬ್ಬಂದಿ ರಾಜಹಂಸ ಬಸ್ನಲ್ಲಿದ್ದ ಒಂಬತ್ತು ಮಂದಿ ಪ್ರಯಾಣಿಕರನ್ನು ದೋಣಿಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತಲುಪಿಸಿದರು. 5.15 ರ ಬಳಿಕ ನೀರಿನ ಮಟ್ಟ ತುಸು ಇಳಿಕೆಯಾಗ ತೊಡಗಿದೆ.</p>.<p>ಮೈಸೂರು- ಮಡಿಕೇರಿ - ಮಂಗಳೂರನ್ನು ಸಂಪರ್ಕಿಸುವ ರಸ್ತೆ ಇದಾಗಿದೆ. ರಾತ್ರಿ ವೇಳೆಯೂ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಪ್ರವಾಹದಿಂದ ಅಂತರ ಜಿಲ್ಲಾ ಸಂಪರ್ಕವೇ ಕಡಿತಗೊಂಡಿದೆ.</p>.<p>‘ಎರಡು ದಿನಗಳಿಂದ ನದಿಯ ನೀರಿನ ಮಟ್ಟ ಹೆಚ್ಚಳವಾಗಿತ್ತು. ಬುಧವಾರ ರಾತ್ರಿ ನದಿ ಉಕ್ಕಿ ಹರಿದಿದೆ. ಪಯಸ್ವಿನಿ ನದಿಯಲ್ಲಿ ಪ್ರವಾಹ ಉಂಟಾಗಿರುವುದರಿಂದ ಇಲ್ಲಿನ ಹಳ್ಳದ ನೀರು ಕಟ್ಟಿಕೊಂಡು ಸೇತುವೆ ಜಲಾವೃತವಾಗಿದೆ’ ಎಂದು ಸ್ಥಳೀಯ ನಿವಾಸಿ ಅನುಷಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>