ರಾಜ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಸಂಕಷ್ಟ ಮತ್ತು ಸಂಭ್ರಮ ಎರಡಕ್ಕೂ ಕಾರಣವಾಗಿದೆ. ಒಂದೆಡೆ, ನದಿಗಳು, ಜಲಾಶಯ, ಕೆರೆ–ಕೊಳ್ಳಗಳು ತುಂಬಿ ಹರಿಯುತ್ತಿದ್ದರೆ, ಮತ್ತೊಂದೆಡೆ ಬೆಳೆದ ಬೆಳೆಗಳು ಮಳೆಯಿಂದ ಹಾನಿಗೀಡಾಗಿವೆ. ಬೆಂಗಳೂರು ಸೇರಿದಂತೆ ಹಲವೆಡೆ ಕಟ್ಟಡಗಳು ಕುಸಿದು ಬೀಳುತ್ತಿವೆ. ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ.