ಹಾಸನ/ಕೊಡಗು:ಹಾಸನ ಜಿಲ್ಲೆಯ ಹಳೇಬೀಡು ಹೊರವಲಯದ ಹಳ್ಳಿಗಳಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಹತ್ತಿ, ಜೋಳ, ಸೂರ್ಯಕಾಂತಿ ಬೆಳೆಗೆ ಹಾನಿಯಾಗಿದೆ. ಜಿ.ಸಾಣೇನಹಳ್ಳಿಯಲ್ಲಿ 20 ಎಕರೆ ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. 1 ಅಡಿ ಎತ್ತರ ಬೆಳೆದಿದ್ದ ಹತ್ತಿ ಗಿಡಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಗ್ರಾಮದ ಹಳ್ಳ ತುಂಬಿ ಹರಿಯುತ್ತಿದ್ದು, ಕೆರೆಯಲ್ಲಿ ಎರಡು ಅಡಿ ನೀರು ಏರಿಕೆಯಾಗಿದೆ.