<p><strong>ಕಲಬುರಗಿ:</strong> ಕಲ್ಯಾಣ ಕರ್ನಾಟಕದ ವಿವಿಧೆಡೆ ಮಂಗಳವಾರ ಉತ್ತಮ ಮಳೆಯಾಗಿದೆ. ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ತಂಪೆರೆದಿದೆ.</p>.<p>ಕಲಬುರಗಿ ಜಿಲ್ಲೆಯ ಅಫಜಲಪುರ, ಚಿಂಚೋಳಿ, ಕಾಳಗಿ ತಾಲ್ಲೂಕುಗಳಲ್ಲಿ ಮಳೆ ಸುರಿದಿದೆ. ಅಫಜಲಪುರ ತಾಲ್ಲೂಕಿನಲ್ಲಿ ಅಕಾಲಿಕ ಮಳೆಗೆ 500 ಎಕರೆ ಜಮೀನಿನಲ್ಲಿ ಬಾಳೆ ಗಿಡಗಳು ನೆಲಕ್ಕುರುಳಿವೆ.</p>.<p>ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿಯಲ್ಲಿ ಸೋಮವಾರ ಸಿಡಿಲು ಬಡಿದು ಎರಡು ಹಸು, 20ಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಜೋಗಿನ ಮನೆ ಬಳಿ ಮರ ಬಿದ್ದು 3 ಕಾರು ಜಖಂಗೊಂಡಿವೆ.</p>.<p>ಬೀದರ್ ಜಿಲ್ಲೆಯ ಭಾಲ್ಕಿ, ಕಮಲನಗರ, ಚಿಟಗುಪ್ಪ, ಔರಾದ್ನಲ್ಲಿ ಧಾರಾಕಾರ ಮಳೆಯಾಗಿದೆ. ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದಲ್ಲಿ ಹಾಗೂ ಬಾವಗಿ, ಕಮಠಾಣ ಗ್ರಾಮದಲ್ಲೂ ಮನೆಯ ಶೀಟುಗಳು ಹಾರಿ ಹೋಗಿವೆ. </p>.<p>ಆಣದೂರ ಸಮೀಪ ಬೀದರ್–ಹುಮನಾಬಾದ್ ಮುಖ್ಯರಸ್ತೆಗೆ ವಿದ್ಯುತ್ ಕಂಬ ಉರುಳಿ ಸಂಚಾರಕ್ಕೆ ತೊಡಕಾಯಿತು. ಬಿರುಗಾಳಿ ತೀವ್ರವಾಗಿದ್ದರಿಂದ ಜನ ಹೊರಗೆ ಬರಲು ಹಿಂಜರಿದರು.</p>.<p>ಔರಾದ್ ತಾಲ್ಲೂಕಿನ ಗಡಿಕುಶನೂರದಲ್ಲಿ ಮರ ಬಿದ್ದು ಹುಸೇನಸಾಬ್ ಅವರು ಸಾಕಿದ್ದ ಎತ್ತು ಮೃತಪಟ್ಟಿದೆ. ಭಾಲ್ಕಿ ತಾಲ್ಲೂಕಿನ ಜಮಖಂಡಿಯಲ್ಲಿ ಸಿಡಿಲು ಬಡಿದು ರೈತ ಶ್ರೀಧರ ಬೋರ್ಕುಡೆ ಅವರಿಗೆ ಸೇರಿದ ಎತ್ತು ಮೃತಪಟ್ಟಿದೆ. ಯಾದಗಿರಿ ನಗರದಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿದಿದೆ. </p>.<p><strong>ಬಳ್ಳಾರಿಯಲ್ಲಿ ಮಳೆ: ಮರ, ಕಂಬಗಳು ಧರೆಗೆ</strong></p><p><br>ಬಳ್ಳಾರಿ ವರದಿ: ಬಳ್ಳಾರಿ ನಗರ ಸೇರಿ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ಎರಡೂವರೆ ಗಂಟೆ ಗುಡುಗು ಸಹಿತ ಭಾರಿ ಮಳೆ ಸುರಿದಿದ್ದು, ಮರ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದವು. </p>.<p>ವಿವಿಧೆಡೆ ವಿದ್ಯುತ್ ಕಂಬಗಳುಉರುಳಿದ್ದು, ಬಳ್ಳಾರಿ ನಗರದಾದ್ಯಂತ ವಿದ್ಯುತ್ ಕಡಿತವಾಯಿತು. ಸಮಸ್ಯೆ ಸರಿಪಡಿಸಲು ಜೆಸ್ಕಾಂ ಸಿಬ್ಬಂದಿ ಪರದಾಡಿದರು. ಅಂಡರ್ಪಾಸ್ಗಳಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು.</p>.<p>ನಗರದಲ್ಲಿ ಕನಿಷ್ಠ 500 ಮರಗಳು ಬಿದ್ದಿವೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್ ಹೇಳಿದರು. 60 ಕಂಬಗಳು ಉರುಳಿ ಬಿದ್ದಿವೆ ಎಂದು ಜೆಸ್ಕಾಂ ಅಧಿಕಾರಿಯೊಬ್ಬರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಕಲ್ಯಾಣ ಕರ್ನಾಟಕದ ವಿವಿಧೆಡೆ ಮಂಗಳವಾರ ಉತ್ತಮ ಮಳೆಯಾಗಿದೆ. ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ತಂಪೆರೆದಿದೆ.</p>.<p>ಕಲಬುರಗಿ ಜಿಲ್ಲೆಯ ಅಫಜಲಪುರ, ಚಿಂಚೋಳಿ, ಕಾಳಗಿ ತಾಲ್ಲೂಕುಗಳಲ್ಲಿ ಮಳೆ ಸುರಿದಿದೆ. ಅಫಜಲಪುರ ತಾಲ್ಲೂಕಿನಲ್ಲಿ ಅಕಾಲಿಕ ಮಳೆಗೆ 500 ಎಕರೆ ಜಮೀನಿನಲ್ಲಿ ಬಾಳೆ ಗಿಡಗಳು ನೆಲಕ್ಕುರುಳಿವೆ.</p>.<p>ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿಯಲ್ಲಿ ಸೋಮವಾರ ಸಿಡಿಲು ಬಡಿದು ಎರಡು ಹಸು, 20ಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಜೋಗಿನ ಮನೆ ಬಳಿ ಮರ ಬಿದ್ದು 3 ಕಾರು ಜಖಂಗೊಂಡಿವೆ.</p>.<p>ಬೀದರ್ ಜಿಲ್ಲೆಯ ಭಾಲ್ಕಿ, ಕಮಲನಗರ, ಚಿಟಗುಪ್ಪ, ಔರಾದ್ನಲ್ಲಿ ಧಾರಾಕಾರ ಮಳೆಯಾಗಿದೆ. ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದಲ್ಲಿ ಹಾಗೂ ಬಾವಗಿ, ಕಮಠಾಣ ಗ್ರಾಮದಲ್ಲೂ ಮನೆಯ ಶೀಟುಗಳು ಹಾರಿ ಹೋಗಿವೆ. </p>.<p>ಆಣದೂರ ಸಮೀಪ ಬೀದರ್–ಹುಮನಾಬಾದ್ ಮುಖ್ಯರಸ್ತೆಗೆ ವಿದ್ಯುತ್ ಕಂಬ ಉರುಳಿ ಸಂಚಾರಕ್ಕೆ ತೊಡಕಾಯಿತು. ಬಿರುಗಾಳಿ ತೀವ್ರವಾಗಿದ್ದರಿಂದ ಜನ ಹೊರಗೆ ಬರಲು ಹಿಂಜರಿದರು.</p>.<p>ಔರಾದ್ ತಾಲ್ಲೂಕಿನ ಗಡಿಕುಶನೂರದಲ್ಲಿ ಮರ ಬಿದ್ದು ಹುಸೇನಸಾಬ್ ಅವರು ಸಾಕಿದ್ದ ಎತ್ತು ಮೃತಪಟ್ಟಿದೆ. ಭಾಲ್ಕಿ ತಾಲ್ಲೂಕಿನ ಜಮಖಂಡಿಯಲ್ಲಿ ಸಿಡಿಲು ಬಡಿದು ರೈತ ಶ್ರೀಧರ ಬೋರ್ಕುಡೆ ಅವರಿಗೆ ಸೇರಿದ ಎತ್ತು ಮೃತಪಟ್ಟಿದೆ. ಯಾದಗಿರಿ ನಗರದಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿದಿದೆ. </p>.<p><strong>ಬಳ್ಳಾರಿಯಲ್ಲಿ ಮಳೆ: ಮರ, ಕಂಬಗಳು ಧರೆಗೆ</strong></p><p><br>ಬಳ್ಳಾರಿ ವರದಿ: ಬಳ್ಳಾರಿ ನಗರ ಸೇರಿ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ಎರಡೂವರೆ ಗಂಟೆ ಗುಡುಗು ಸಹಿತ ಭಾರಿ ಮಳೆ ಸುರಿದಿದ್ದು, ಮರ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದವು. </p>.<p>ವಿವಿಧೆಡೆ ವಿದ್ಯುತ್ ಕಂಬಗಳುಉರುಳಿದ್ದು, ಬಳ್ಳಾರಿ ನಗರದಾದ್ಯಂತ ವಿದ್ಯುತ್ ಕಡಿತವಾಯಿತು. ಸಮಸ್ಯೆ ಸರಿಪಡಿಸಲು ಜೆಸ್ಕಾಂ ಸಿಬ್ಬಂದಿ ಪರದಾಡಿದರು. ಅಂಡರ್ಪಾಸ್ಗಳಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು.</p>.<p>ನಗರದಲ್ಲಿ ಕನಿಷ್ಠ 500 ಮರಗಳು ಬಿದ್ದಿವೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್ ಹೇಳಿದರು. 60 ಕಂಬಗಳು ಉರುಳಿ ಬಿದ್ದಿವೆ ಎಂದು ಜೆಸ್ಕಾಂ ಅಧಿಕಾರಿಯೊಬ್ಬರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>