<p><strong>ಬೆಂಗಳೂರು: </strong>ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.11 ಮತ್ತು 12ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಎರಡೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.</p>.<p>ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅ.13 ರಿಂದ 15ರವರೆಗೆ ಹೆಚ್ಚು ಮಳೆಯಾಗುವ ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವ ಇರುವುದಾಗಿ ಇಲಾಖೆ ಮಾಹಿತಿ ನೀಡಿದೆ.</p>.<p><strong>ಮಳೆ ಎಲ್ಲಿ, ಎಷ್ಟು?: </strong>ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಹಾಗೂ ಕೊಪ್ಪಳ ಜಿಲ್ಲೆಯ ಮುನಿರಾಬಾದ್ನಲ್ಲಿ ಭಾನುವಾರ ತಲಾ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ.</p>.<p>ಅಥಣಿ 7, ಶಿಡ್ಲಘಟ್ಟ 5, ಕಾರವಾರ, ಚಿಂತಾಮಣಿ, ಶಿರಾ 4, ಮಾನ್ವಿ, ಗೌರಿಬಿದನೂರು, ಮಾಗಡಿ 3, ತೊಂಡೆಬಾವಿ 2, ಮಂಗಳೂರು, ಉಡುಪಿ, ಕೊಪ್ಪಳ, ಚಿಕ್ಕೋಡಿ, ಕಲಬುರಗಿ, ರಾಯಚೂರು, ಬೆಂಗಳೂರು ನಗರ, ನೆಲಮಂಗಲ, ಹಿರಿಯೂರು ಹಾಗೂ ಮಧುಗಿರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.11 ಮತ್ತು 12ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಎರಡೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.</p>.<p>ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅ.13 ರಿಂದ 15ರವರೆಗೆ ಹೆಚ್ಚು ಮಳೆಯಾಗುವ ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವ ಇರುವುದಾಗಿ ಇಲಾಖೆ ಮಾಹಿತಿ ನೀಡಿದೆ.</p>.<p><strong>ಮಳೆ ಎಲ್ಲಿ, ಎಷ್ಟು?: </strong>ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಹಾಗೂ ಕೊಪ್ಪಳ ಜಿಲ್ಲೆಯ ಮುನಿರಾಬಾದ್ನಲ್ಲಿ ಭಾನುವಾರ ತಲಾ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ.</p>.<p>ಅಥಣಿ 7, ಶಿಡ್ಲಘಟ್ಟ 5, ಕಾರವಾರ, ಚಿಂತಾಮಣಿ, ಶಿರಾ 4, ಮಾನ್ವಿ, ಗೌರಿಬಿದನೂರು, ಮಾಗಡಿ 3, ತೊಂಡೆಬಾವಿ 2, ಮಂಗಳೂರು, ಉಡುಪಿ, ಕೊಪ್ಪಳ, ಚಿಕ್ಕೋಡಿ, ಕಲಬುರಗಿ, ರಾಯಚೂರು, ಬೆಂಗಳೂರು ನಗರ, ನೆಲಮಂಗಲ, ಹಿರಿಯೂರು ಹಾಗೂ ಮಧುಗಿರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>