<p><strong>ಬೆಂಗಳೂರು:</strong> ರಾಜ್ಯದ ವಿವಿಧೆಡೆ ಮಳೆ ಮತ್ತಷ್ಟು ತೀವ್ರಗೊಂಡಿದೆ. ನದಿಗಳಲ್ಲಿ ಹರಿವು ಹೆಚ್ಚಿದ್ದು, ಜಲಪಾತಗಳು ಭೋರ್ಗರೆಯುತ್ತಿವೆ. ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವೆಡೆ ರಸ್ತೆಯಲ್ಲಿ ಭೂಕುಸಿತವಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.</p>.<p>ಆಗುಂಬೆ ಘಾಟಿ, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭೂಕುಸಿತವಾಗಿದೆ. ಕೊಡಗು ಜಿಲ್ಲೆಯಲ್ಲಿ ಮಡಿಕೇರಿ–ಮಂಗಳೂರು, ಮಡಿಕೇರಿ–ಕುಟ್ಟ ರಸ್ತೆಯಲ್ಲಿ ಮಣ್ಣುಕುಸಿದಿದೆ.</p>.<p>ಹಾಸನ ಜಿಲ್ಲೆ ಸಕಲೇಶಪುರದ ತಾಲ್ಲೂಕಿನ ಶಿರಾಡಿ ಘಾಟಿಯ ದೋಣಿಗಲ್ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದಿಂದ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಇಲ್ಲಿ ಚತುಷ್ಪಥ ರಸ್ತೆಗೆ ತಡೆಗೋಡೆ ನಿರ್ಮಾಣವಾಗಿಲ್ಲ. ಮಳೆಗಾಲದಲ್ಲಿ ಭೂಕುಸಿತ ಸಾಮಾನ್ಯವಾಗಿದ್ದು, ರಸ್ತೆಯಲ್ಲಿ 6 ಅಡಿ ಅಗಲ, 15 ಅಡಿ ಉದ್ದ ಹಾಗೂ 120 ಅಡಿ ಆಳಕ್ಕೆ ಮಣ್ಣು ಕುಸಿದಿದೆ.</p>.<p>ಕೊಡಗು ಜಿಲ್ಲೆಯ ಕಿಂಡಿ ಅಣೆಕಟ್ಟು ಭರ್ತಿಯಾಗಿ ಸಂಪಾಜೆಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮಂಗಳೂರು–ಮಡಿಕೇರಿ ರಸ್ತೆ ಜಲಾವೃತವಾಗಿದ್ದು, ಭಾಗಮಂಡಲ–ತ್ರಿವೇಣಿ ಸಂಗಮ, ಭಾಗಮಂಡಲ–ಮಡಿಕೇರಿ ರಸ್ತೆಯಲ್ಲಿ ಒಂದು ಅಡಿವರೆಗೂ ನೀರು ನಿಂತಿದೆ. ಜನಸಂಚಾರಕ್ಕೆ ಯಾಂತ್ರಿಕ ದೋಣಿ ವ್ಯವಸ್ಥೆ ಕಲ್ಪಿಸಲಾಗಿದೆ. ಮುಕ್ಕೋಡ್ಲು, ಹೊದಕಾನ–ಹೆಮ್ಮತಾಳು ಸೇತುವೆ ಮುಳುಗಡೆಯಾಗಿವೆ.</p>.<p>ಶಿವಮೊಗ್ಗ ಜಿಲ್ಲೆಯಲ್ಲಿ ಆಗುಂಬೆ ಸಮೀಪ ರಾಷ್ಟ್ರೀಯ ಹೆದ್ದಾರಿ 169ರ ಬಳಿ ಗುಡ್ಡ ಕುಸಿದಿದ್ದು, ಮಲೆನಾಡು–ಕರಾ<br />ವಳಿ ನಡುವಿನ ಸಂಪರ್ಕ ಬಹುತೇಕ ಕಡಿತವಾಗಿದೆ. ಆಗುಂಬೆಯಲ್ಲಿ 24 ಗಂಟೆ ಗಳಲ್ಲಿ 20.5 ಸೆಂ.ಮೀ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ವಿವಿಧೆಡೆ ಮಳೆ ಮತ್ತಷ್ಟು ತೀವ್ರಗೊಂಡಿದೆ. ನದಿಗಳಲ್ಲಿ ಹರಿವು ಹೆಚ್ಚಿದ್ದು, ಜಲಪಾತಗಳು ಭೋರ್ಗರೆಯುತ್ತಿವೆ. ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕೆಲವೆಡೆ ರಸ್ತೆಯಲ್ಲಿ ಭೂಕುಸಿತವಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.</p>.<p>ಆಗುಂಬೆ ಘಾಟಿ, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭೂಕುಸಿತವಾಗಿದೆ. ಕೊಡಗು ಜಿಲ್ಲೆಯಲ್ಲಿ ಮಡಿಕೇರಿ–ಮಂಗಳೂರು, ಮಡಿಕೇರಿ–ಕುಟ್ಟ ರಸ್ತೆಯಲ್ಲಿ ಮಣ್ಣುಕುಸಿದಿದೆ.</p>.<p>ಹಾಸನ ಜಿಲ್ಲೆ ಸಕಲೇಶಪುರದ ತಾಲ್ಲೂಕಿನ ಶಿರಾಡಿ ಘಾಟಿಯ ದೋಣಿಗಲ್ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದಿಂದ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಇಲ್ಲಿ ಚತುಷ್ಪಥ ರಸ್ತೆಗೆ ತಡೆಗೋಡೆ ನಿರ್ಮಾಣವಾಗಿಲ್ಲ. ಮಳೆಗಾಲದಲ್ಲಿ ಭೂಕುಸಿತ ಸಾಮಾನ್ಯವಾಗಿದ್ದು, ರಸ್ತೆಯಲ್ಲಿ 6 ಅಡಿ ಅಗಲ, 15 ಅಡಿ ಉದ್ದ ಹಾಗೂ 120 ಅಡಿ ಆಳಕ್ಕೆ ಮಣ್ಣು ಕುಸಿದಿದೆ.</p>.<p>ಕೊಡಗು ಜಿಲ್ಲೆಯ ಕಿಂಡಿ ಅಣೆಕಟ್ಟು ಭರ್ತಿಯಾಗಿ ಸಂಪಾಜೆಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮಂಗಳೂರು–ಮಡಿಕೇರಿ ರಸ್ತೆ ಜಲಾವೃತವಾಗಿದ್ದು, ಭಾಗಮಂಡಲ–ತ್ರಿವೇಣಿ ಸಂಗಮ, ಭಾಗಮಂಡಲ–ಮಡಿಕೇರಿ ರಸ್ತೆಯಲ್ಲಿ ಒಂದು ಅಡಿವರೆಗೂ ನೀರು ನಿಂತಿದೆ. ಜನಸಂಚಾರಕ್ಕೆ ಯಾಂತ್ರಿಕ ದೋಣಿ ವ್ಯವಸ್ಥೆ ಕಲ್ಪಿಸಲಾಗಿದೆ. ಮುಕ್ಕೋಡ್ಲು, ಹೊದಕಾನ–ಹೆಮ್ಮತಾಳು ಸೇತುವೆ ಮುಳುಗಡೆಯಾಗಿವೆ.</p>.<p>ಶಿವಮೊಗ್ಗ ಜಿಲ್ಲೆಯಲ್ಲಿ ಆಗುಂಬೆ ಸಮೀಪ ರಾಷ್ಟ್ರೀಯ ಹೆದ್ದಾರಿ 169ರ ಬಳಿ ಗುಡ್ಡ ಕುಸಿದಿದ್ದು, ಮಲೆನಾಡು–ಕರಾ<br />ವಳಿ ನಡುವಿನ ಸಂಪರ್ಕ ಬಹುತೇಕ ಕಡಿತವಾಗಿದೆ. ಆಗುಂಬೆಯಲ್ಲಿ 24 ಗಂಟೆ ಗಳಲ್ಲಿ 20.5 ಸೆಂ.ಮೀ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>