<p><strong>ಬೆಂಗಳೂರು</strong>: ಮೈಸೂರು ಅರಮನೆ ದ್ವಾರದ ಮುಂಭಾಗದಲ್ಲಿ ಗುರುವಾರ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿರುವ ಪ್ರಕರಣದ ವಿಸ್ತೃತ ತನಿಖೆ ನಡೆಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹೀಲಿಯಂ ಬಲೂನು ಮಾರುತ್ತಿದ್ದದ್ದು ಲಖನೌನ ವ್ಯಕ್ತಿ. ಕೆಲವೇ ದಿನಗಳ ಹಿಂದೆ ಆತ ಇಲ್ಲಿಗೆ ಬಂದು ಬಲೂನು ವ್ಯಾಪಾರ ಮಾಡುತ್ತಿದ್ದ. ಆತನಿಗೆ ಹೀಲಿಯಂ ಸಿಲಿಂಡರ್ ಹೇಗೆ ಲಭಿಸಿತು ಎಂಬುದರ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದೇನೆ’ ಎಂದರು.</p>.<p>‘ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸ್ಥಳಗಳಲ್ಲಿ ಸಣ್ಣ–ಪುಟ್ಟ ವ್ಯಾಪಾರ ನಡೆಸುವವರ ಮೇಲೆ ನಿಯಂತ್ರಣ ಇದ್ದಂತಿಲ್ಲ. ಈ ಅವಘಡವನ್ನು ಸೂಕ್ಷ್ಮವಾಗಿ ನೋಡಬೇಕಿದೆ. ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಜತೆಗೂ ಚರ್ಚಿಸುವಂತೆ ಸೂಚಿಸಿದ್ದೇನೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳುವ ಸಂಬಂಧ ಭಾನುವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.ಬಲೂನ್ಗೆ ಹೀಲಿಯಂ ತುಂಬುವಾಗ ಸಿಲಿಂಡರ್ ಸ್ಫೋಟ: ಗಾಯಾಳು ಮಹಿಳೆ ಸಾವು.ಮೈಸೂರು | ಸಿಲಿಂಡರ್ ಸ್ಫೋಟ: ಬಲೂನ್ ಮಾರುವ ವ್ಯಕ್ತಿ ಸಾವು, ಐವರಿಗೆ ಗಾಯ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೈಸೂರು ಅರಮನೆ ದ್ವಾರದ ಮುಂಭಾಗದಲ್ಲಿ ಗುರುವಾರ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿರುವ ಪ್ರಕರಣದ ವಿಸ್ತೃತ ತನಿಖೆ ನಡೆಸಿ, ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹೀಲಿಯಂ ಬಲೂನು ಮಾರುತ್ತಿದ್ದದ್ದು ಲಖನೌನ ವ್ಯಕ್ತಿ. ಕೆಲವೇ ದಿನಗಳ ಹಿಂದೆ ಆತ ಇಲ್ಲಿಗೆ ಬಂದು ಬಲೂನು ವ್ಯಾಪಾರ ಮಾಡುತ್ತಿದ್ದ. ಆತನಿಗೆ ಹೀಲಿಯಂ ಸಿಲಿಂಡರ್ ಹೇಗೆ ಲಭಿಸಿತು ಎಂಬುದರ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದೇನೆ’ ಎಂದರು.</p>.<p>‘ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸ್ಥಳಗಳಲ್ಲಿ ಸಣ್ಣ–ಪುಟ್ಟ ವ್ಯಾಪಾರ ನಡೆಸುವವರ ಮೇಲೆ ನಿಯಂತ್ರಣ ಇದ್ದಂತಿಲ್ಲ. ಈ ಅವಘಡವನ್ನು ಸೂಕ್ಷ್ಮವಾಗಿ ನೋಡಬೇಕಿದೆ. ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಜತೆಗೂ ಚರ್ಚಿಸುವಂತೆ ಸೂಚಿಸಿದ್ದೇನೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳುವ ಸಂಬಂಧ ಭಾನುವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.ಬಲೂನ್ಗೆ ಹೀಲಿಯಂ ತುಂಬುವಾಗ ಸಿಲಿಂಡರ್ ಸ್ಫೋಟ: ಗಾಯಾಳು ಮಹಿಳೆ ಸಾವು.ಮೈಸೂರು | ಸಿಲಿಂಡರ್ ಸ್ಫೋಟ: ಬಲೂನ್ ಮಾರುವ ವ್ಯಕ್ತಿ ಸಾವು, ಐವರಿಗೆ ಗಾಯ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>