ಇದಕ್ಕೆ ಪ್ರತಿಕ್ರಿಯಿಸಿದ್ದ ನಿಂಬಾಳ್ಕರ್, ತಮ್ಮ ಮೇಲಿನ ಕ್ರಿಮಿನಲ್ ಪ್ರಕ್ರಿಯೆಯನ್ನು ಹೈಕೋರ್ಟ್ ವಜಾಗೊಳಿಸಿರುವುದರಿಂದ ಇಲಾಖಾ ವಿಚಾರಣೆಯನ್ನು ಮುಕ್ತಾಯಗೊಳಿಸಬೇಕು ಎಂದು 2021ರ ಮೇ 18ರಂದು ಪತ್ರ ಬರೆದಿದ್ದರು. ಅದಕ್ಕೆ ರಾಜ್ಯ ಸರ್ಕಾರವು ಕ್ರಿಮಿನಲ್ ಪ್ರಕ್ರಿಯೆ ಮತ್ತು ಇಲಾಖಾ ವಿಚಾರಣೆ ವಿಭಿನ್ನ ತತ್ವದ ಮೇಲೆ ನಡೆಸಲಾಗುತ್ತದೆ. ಕ್ರಿಮಿನಲ್ ಪ್ರಕ್ರಿಯೆ ವಜಾ ಮಾಡಿರುವುದರಿಂದ ಇಲಾಖಾ ವಿಚಾರಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿತ್ತು. ಅಲ್ಲದೆ, ನಿಂಬಾಳ್ಕರ್ ಮತ್ತು ಇನ್ನೊಬ್ಬ ಐಪಿಎಸ್ ಅಧಿಕಾರಿ ಎಸ್. ಮುರುಗನ್ ವಿರುದ್ಧ ವಿಚಾರಣೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ.ಎಂ. ತಿಮ್ಮಯ್ಯ ಅವರನ್ನು ನೇಮಿಸಿತ್ತು.