<p><strong>ಬೆಂಗಳೂರು</strong>: ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಪ್ರದೇಶದಲ್ಲಿರುವ ಅಕೇಶಿಯಾ ನೆಡುತೋಪನ್ನು ತೆರವು ಮಾಡಿ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>5,678 ಎಕರೆಯಷ್ಟು ವಿಸ್ತಾರವಾಗಿರುವ ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ಅವರು ಸ್ಥಳೀಯರು, ದನಗಾಹಿ ಮತ್ತು ಕುರಿಗಾಹಿಗಳ ಜತೆಗೆ ಮಾತುಕತೆ ನಡೆಸಿದರು. ಅರಣ್ಯೀಕರಣದ ಹೆಸರಿನಲ್ಲಿ ಅಕೇಶಿಯಾ ನೆಡುತೋಪುಗಳನ್ನು ಅಭಿವೃದ್ಧಿಪಡಿಸಿರುವ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಕೇಶಿಯಾವು ಜಾನುವಾರುಗಳಿಗೆ ಮೇವಾಗಿಯೂ ಉಪಯೋಗವಾಗುವುದಿಲ್ಲ, ಪಕ್ಷಿಗಳಿಗೆ ಆಹಾರವನ್ನೂ ಒದಗಿಸುವುದಿಲ್ಲ. ಬದಲಿಗೆ ಸ್ಥಳೀಯ ಸಸ್ಯ ಪ್ರಭೇದಗಳನ್ನು ನಾಶಪಡಿಸುತ್ತವೆ. ಹೀಗಾಗಿ ಈ ನೆಡುತೋಪುಗಳನ್ನು ತೆರವು ಮಾಡಿ, ಹುಲ್ಲುಗಾವಲು ಬೆಳೆಸಲು ಕ್ರಮ ತೆಗೆದುಕೊಳ್ಳಿ. ಅಗತ್ಯವಿರುವೆಡೆ, ಪಕ್ಷಿಗಳಿಗೆ ಅನುಕೂಲವಾಗುವಂತೆ ಕಾಡುಹಣ್ಣಿನ ಸಸಿಗಳನ್ನು ಹಾಕಿ’ ಎಂದು ನಿರ್ದೇಶನ ನೀಡಿದರು.</p>.<p>‘10 ಲಕ್ಷ ಜನರಿಗೆ ನೀರು ಪೂರೈಸುವ ಸಾಮರ್ಥ್ಯವಿರುವ ಹೆಸರಘಟ್ಟ ಕೆರೆಗೆ ಗೃಹ ಮತ್ತು ಕೈಗಾರಿಕಾ ಕೊಳಚೆ ನೀರು ಹಾಗೂ ತ್ಯಾಜ್ಯ ಸೇರದಂತೆ ಎಚ್ಚರವಹಿಸಬೇಕು. ಅರ್ಕಾವತಿ ನದಿಯೂ ಮಲಿನವಾಗುವುದನ್ನು ತಡೆಯಬೇಕು. ಈ ಕಾರ್ಯಗಳಿಗೆ ಜಲಮಂಡಳಿ, ಸ್ಥಳೀಯ ಸಂಸ್ಥೆಗಳ ಅನುದಾನ ಹಾಗೂ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿ ಬಳಸಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಿ’ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ ಅವರಿಗೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಪ್ರದೇಶದಲ್ಲಿರುವ ಅಕೇಶಿಯಾ ನೆಡುತೋಪನ್ನು ತೆರವು ಮಾಡಿ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>5,678 ಎಕರೆಯಷ್ಟು ವಿಸ್ತಾರವಾಗಿರುವ ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ಅವರು ಸ್ಥಳೀಯರು, ದನಗಾಹಿ ಮತ್ತು ಕುರಿಗಾಹಿಗಳ ಜತೆಗೆ ಮಾತುಕತೆ ನಡೆಸಿದರು. ಅರಣ್ಯೀಕರಣದ ಹೆಸರಿನಲ್ಲಿ ಅಕೇಶಿಯಾ ನೆಡುತೋಪುಗಳನ್ನು ಅಭಿವೃದ್ಧಿಪಡಿಸಿರುವ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಕೇಶಿಯಾವು ಜಾನುವಾರುಗಳಿಗೆ ಮೇವಾಗಿಯೂ ಉಪಯೋಗವಾಗುವುದಿಲ್ಲ, ಪಕ್ಷಿಗಳಿಗೆ ಆಹಾರವನ್ನೂ ಒದಗಿಸುವುದಿಲ್ಲ. ಬದಲಿಗೆ ಸ್ಥಳೀಯ ಸಸ್ಯ ಪ್ರಭೇದಗಳನ್ನು ನಾಶಪಡಿಸುತ್ತವೆ. ಹೀಗಾಗಿ ಈ ನೆಡುತೋಪುಗಳನ್ನು ತೆರವು ಮಾಡಿ, ಹುಲ್ಲುಗಾವಲು ಬೆಳೆಸಲು ಕ್ರಮ ತೆಗೆದುಕೊಳ್ಳಿ. ಅಗತ್ಯವಿರುವೆಡೆ, ಪಕ್ಷಿಗಳಿಗೆ ಅನುಕೂಲವಾಗುವಂತೆ ಕಾಡುಹಣ್ಣಿನ ಸಸಿಗಳನ್ನು ಹಾಕಿ’ ಎಂದು ನಿರ್ದೇಶನ ನೀಡಿದರು.</p>.<p>‘10 ಲಕ್ಷ ಜನರಿಗೆ ನೀರು ಪೂರೈಸುವ ಸಾಮರ್ಥ್ಯವಿರುವ ಹೆಸರಘಟ್ಟ ಕೆರೆಗೆ ಗೃಹ ಮತ್ತು ಕೈಗಾರಿಕಾ ಕೊಳಚೆ ನೀರು ಹಾಗೂ ತ್ಯಾಜ್ಯ ಸೇರದಂತೆ ಎಚ್ಚರವಹಿಸಬೇಕು. ಅರ್ಕಾವತಿ ನದಿಯೂ ಮಲಿನವಾಗುವುದನ್ನು ತಡೆಯಬೇಕು. ಈ ಕಾರ್ಯಗಳಿಗೆ ಜಲಮಂಡಳಿ, ಸ್ಥಳೀಯ ಸಂಸ್ಥೆಗಳ ಅನುದಾನ ಹಾಗೂ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿ ಬಳಸಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಿ’ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ ಅವರಿಗೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>