ರಾಜ್ಯದ ಕೆಲವು ಅರಣ್ಯಗಳ ನಿರ್ದಿಷ್ಟ ಪ್ರದೇಶಗಳಲ್ಲಿ ಪದೇ ಪದೇ ಕಾಳ್ಗಿಚ್ಚು ಸಂಭವಿಸುತ್ತಿದೆ. 15 ವರ್ಷಗಳ ದತ್ತಾಂಶ ಆಧಾರದಲ್ಲಿ, ಇಂತಹ ಪ್ರದೇಶಗಳನ್ನು ‘ಹಾಟ್ಸ್ಪಾಟ್’ಗಳೆಂದು ಗುರುತಿಸಲಾಗಿದೆ ಎಂಬ ಮಾಹಿತಿ ಪಡೆದ ಸಚಿವರು, ‘ಈ ಪ್ರದೇಶಗಳಲ್ಲಿ ಹೆಚ್ಚಿನ ಅಗ್ನಿವೀಕ್ಷಕರನ್ನು ನಿಯೋಜಿಸಬೇಕು ಮತ್ತು ಡ್ರೋನ್ ಕ್ಯಾಮೆರಾಗಳ ಮೂಲಕ ಕಣ್ಗಾವಲು ಇಡಬೇಕು’ ಎಂದು ಹೇಳಿದರು.