ಶಿವಮೊಗ್ಗ:ಶಾಸಕ ಕೆ.ಎಸ್. ಈಶ್ವರಪ್ಪ ಅವರು ಅಧಿಕ ರಕ್ತದ ಒತ್ತಡ ಹಾಗೂ ಜಠರದುರಿತ ಸಮಸ್ಯೆಯಿಂದ ಶನಿವಾರ ಇಲ್ಲಿನ ಮೆಟ್ರೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿರಂತರ ಪ್ರಯಾಣ, ವಿಶ್ರಾಂತಿ ಕೊರತೆಯ ಕಾರಣ ಆರೋಗ್ಯದ ಸಮಸ್ಯೆ ಎದುರಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗಿದೆ. ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.