ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಆಯ್ಕೆ ಮಾಡುವುದು ಹೈಕಮಾಂಡ್‌: ಬಿ.ಕೆ. ಹರಿಪ್ರಸಾದ್‌

Last Updated 11 ಮೇ 2022, 16:27 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತದೆ. ಶಾಸಕ ಜಮೀರ್‌ ಅಹಮ್ಮದ್ ಒಬ್ಬರೇ ನಿರ್ಧರಿಸುವುದಿಲ್ಲ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಬಯಸಿ ಜಮೀರ್‌ ಅಹಮ್ಮದ್‌ ಪೂಜೆ ಸಲ್ಲಿಸಿರುವ ಕುರಿತು ಪತ್ರಕರ್ತರು ಪ್ರಶ್ನಿಸಿದರು. ಆಗ ಉತ್ತರ ನೀಡಿದ ಹರಿಪ್ರಸಾದ್‌, ‘ನಮ್ಮ ಪಕ್ಷದಲ್ಲಿ ವೈಯಕ್ತಿಕ ಹೇಳಿಕೆಗಳಿಗೆ ಅವಕಾಶವಿದೆ. ಅದು ಜಮೀರ್‌ ಅವರ ವೈಯಕ್ತಿಕ ಹೇಳಿಕೆ. ಆದರೆ, ಮುಖ್ಯಮಂತ್ರಿ ಯಾರು ಎನ್ನುವುದನ್ನು ಅವರೇ ನಿರ್ಧರಿಸುವುದಿಲ್ಲ’ ಎಂದರು.

‘ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಯ್ಕೆ ಹೇಗೆ ನಡೆಯುತ್ತದೆ ಎಂಬುದು ಪಕ್ಷದ ಎಲ್ಲ ನಾಯಕರಿಗೂ ಗೊತ್ತಿದೆ. ಶಾಸಕರ ಅಭಿಪ್ರಾಯ ಆಧರಿಸಿ ಪಕ್ಷದ ವರಿಷ್ಠರು ನಿರ್ಧಾರಕ್ಕೆ ಬರುತ್ತಾರೆ. ಒಬ್ಬರು ಇಂತಹ ಹೇಳಿಕೆ ಕೊಟ್ಟರೆ ಎಲ್ಲ 80 ಮಂದಿ ಶಾಸಕರೂ ಹೀಗೆಯೇ ಹೇಳಿಕೆ ನೀಡಬೇಕು ಎಂದೇನೂ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದಷ್ಟೇ ಅವರು ಹೇಳಿದ್ದಾರೆ’ ಎಂದು ಹೇಳಿದರು.

‘ಅವರು ಪ್ರಾರ್ಥನೆ ಮಾಡಿ ಎಂದಿದ್ದಾರೆ. ನೀವೂ ಪ್ರಾರ್ಥನೆ ಮಾಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಚುಟುಕಾಗಿ ಪ್ರತಿಕ್ರಿಯಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT