‘ಮೃತಪಟ್ಟ ವ್ಯಕ್ತಿ ಮತ್ತು ಆರೋಪಿ ನಡುವೆ ಹಣಕಾಸಿನ ವಹಿವಾಟು ನಡೆದಿದೆ ಎಂಬುದನ್ನು ಸಾಬೀತುಪಡಿಸುವ ಯಾವುದೇ ಸಾಕ್ಷ್ಯ ಇಲ್ಲ. ಹಣ ಕೊಟ್ಟಿರುವುದನ್ನು ರಾಚಪ್ಪ ಅವರ ಮಗ ನೋಡಿಲ್ಲ. ಸಣ್ಣ ಡೈರಿಯನ್ನು ನಿರ್ವಹಿಸುತ್ತಿದ್ದರು ಎನ್ನಲಾಗಿದ್ದು, ಅದನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ. ಡೈರಿಯಲ್ಲಿ ಸಾಲದ ವಿವರಗಳನ್ನು ದಾಖಲು ಮಾಡುತ್ತಿದ್ದರು ಎನ್ನಲಾದ ರಾಚಪ್ಪ ಅವರ ಮಗಳನ್ನೂ ನ್ಯಾಯಾಲಯ ವಿಚಾರಣೆ ನಡೆಸಿಲ್ಲ. ಹೀಗಾಗಿ ಹಣಕಾಸಿನ ವ್ಯವಹಾರ ನಡೆದಿದೆ ಎಂಬುದೇ ರುಜುವಾತಾಗಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.