ಪ್ರಮಾಣ ಪತ್ರದಲ್ಲಿ ಏನಿದೆ?: ‘ಜಾತಿಗಣತಿ ವರದಿಯನ್ನು ಅನುಷ್ಠಾನಗೊಳಿಸಲು ನಿರ್ದೇಶಿಸಬೇಕು ಎಂದು ಕೋರಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಒಟ್ಟು 13 ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳು ಸಲ್ಲಿಸಿರುವ ಅರ್ಜಿ ಹಾಗೂ ಜಾತಿ ಆಧಾರಿತ ಗಣತಿಗೆ ನೀಡಲಾಗಿರುವ ಸರ್ಕಾರದ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಲಾಗಿರುವ ಅರ್ಜಿಗಳ ವಿಚಾರಣೆ ಈಗ ನಿರರ್ಥಕ. ಅಂತೆಯೇ, ಜಾತಿ ಗಣತಿಯನ್ನು ಪ್ರಶ್ನಿಸಿ ಬೀದರ್ನ ಶಿವರಾಜ ಕಣಶೆಟ್ಟಿ ಹಾಗೂ ಇತರರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವ ಅಗತ್ಯವಿಲ್ಲ’ ಎಂದು ಸರ್ಕಾರ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.