<p><strong>ಬೆಂಗಳೂರು</strong>: ಅತ್ತೆಯ ಮನೆಯಲ್ಲಿ ಠಿಕಾಣಿ ಹೂಡಿ ಆಸ್ತಿ ಲಪಟಾಯಿಸಲು ಸಂಚು ಹೂಡಿದ್ದ ಆರೋಪದಡಿ ಸೊಸೆಗೆ ಮನೆ ಖಾಲಿ ಮಾಡುವಂತೆ ನಿರ್ದೇಶಿಸಿದ್ದ ಬಳ್ಳಾರಿ ಉಪವಿಭಾಗಾಧಿಕಾರಿ (ಎಸಿ) ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.</p>.<p>‘ಬಳ್ಳಾರಿ ಉಪವಿಭಾಗಾಧಿಕಾರಿ 2025ರ ಜೂನ್ 17ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೋರಿ ಸೊಸೆ (45) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಈ ಕುರಿತಂತೆ ಆದೇಶಿಸಿದೆ.</p>.<p>‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ–2007ರ ಅನುಸಾರ ಅತ್ಯಂತ ಅಪರೂಪದ ಸಂದರ್ಭಗಳಲ್ಲಿ ಮಾತ್ರವೇ ಹಿರಿಯರನ್ನು ಮನೆಯಿಂದ ಹೊರಹಾಕುವ ಆದೇಶವನ್ನು ಸಮರ್ಥನೀಯ ಎಂದು ನಿರ್ಣಯಿಸಬಹುದು’ ಎಂಬ ಅಭಿಪ್ರಾಯವನ್ನು ನ್ಯಾಯಪೀಠ ವ್ಯಕ್ತಪಡಿಸಿದೆ.</p>.<p><strong>ಪ್ರಕರಣವೇನು?</strong></p><p> ಪ್ರಕರಣದಲ್ಲಿ ಪೋಷಕರ ಮಗ ಸುಮಾರು ಎಂಟು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಸೊಸೆ ಮತ್ತು ಅತ್ತೆಯ (65) ನಡುವಿನ ಸಂಬಂಧ ಹಳಸಿತ್ತು. ಸರ್ಕಾರಿ ಕೆಲಸ ಸಿಗಲಿದೆ ಎಂಬ ಕಾರಣಕ್ಕೆ ಸೊಸೆ ಆಂಧ್ರಪ್ರದೇಶಕ್ಕೆ ವಾಸ ಬದಲಿಸಿದ್ದರು.</p>.<p>ಏತನ್ಮಧ್ಯೆ, ಬಳ್ಳಾರಿಯ ಸಿದ್ಧಾರ್ಥ ನಗರದಲ್ಲಿ ಸ್ವಯಾರ್ಜಿತವಾಗಿ ನಿಮಿಸಿದ ಮನೆಯಲ್ಲಿ ಅತ್ತೆ ವಾಸವಿದ್ದರು. ಹಣಕಾಸಿನ ತೊಂದರೆಯಿಂದ ಮನೆಯನ್ನು ಮಾರಾಟ ಮಾಡಲು ಉದ್ದೇಶಿಸಿ, ಮುಂಗಡ ಹಣ ಪಡೆದಿದ್ದರು. ಈ ವಿಷಯ ತಿಳಿದು ಮನೆಗೆ ಬಂದಿದ್ದ ಸೊಸೆ, ‘ನನಗೂ ಆಸ್ತಿಯಲ್ಲಿ ಪಾಲು ನೀಡಬೇಕು ಇಲ್ಲವೇ ₹60 ಲಕ್ಷ ನೀಡಬೇಕು’ ಎಂದು ಹೇಳಿ ಮನೆಯಲ್ಲಿದ್ದ ಅತ್ತೆಗೆ ಸಂಬಂಧಿಸಿದ ವಸ್ತುಗಳನ್ನು ಹೊರಹಾಕಿ, ಮನೆಯಲ್ಲಿ ಠಿಕಾಣಿ ಹೂಡಿದ್ದರು.</p>.<p>ಪೋಷಕರ ಸಕ್ಷಮ ಪ್ರಾಧಿಕಾರವಾದ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿಯ ಅಧ್ಯಕ್ಷರೂ ಆದ ಬಳ್ಳಾರಿ ಉಪವಿಭಾಗಾಧಿಕಾರಿಗೆ ಅರ್ಜಿ ಸಲ್ಲಿಸಿದ್ದ ಅತ್ತೆ, ‘ನಮ್ಮ ಆಸ್ತಿ ರಕ್ಷಣೆ, ಮಾನಸಿಕ ಶಾಂತಿ ಮತ್ತು ಪ್ರಾಣ ರಕ್ಷಣೆ ನೀಡಬೇಕು’ ಎಂದು ಕೋರಿದ್ದರು.</p>.<p>ಅರ್ಜಿ ವಿಚಾರಣೆ ನಡೆಸಿದ್ದ ಸಕ್ಷಮ ಪ್ರಾಧಿಕಾರ, ‘ಸೊಸೆ ಮನೆಯನ್ನು ಖಾಲಿ ಮಾಡಬೇಕು. ಸದರಿ ಆಸ್ತಿಯನ್ನು ಮನವಿದಾರರ ಹೆಸರಿಗೆ ನೋಂದಾಯಿಸಬೇಕು’ ಎಂದು ಬಳ್ಳಾರಿ ಉಪನೋಂದಣಾಧಿಕಾರಿಗೆ ಆದೇಶಿಸಿದ್ದರು. ಈ ಆದೇಶವನ್ನು ಸೊಸೆ ಹೈಕೋರ್ಟ್ನಲ್ಲಿ ಪ್ರಶ್ನಿಸಿ ‘ರದ್ದುಗೊಳಿಸಬೇಕು’ ಎಂದು ಕೋರಿದ್ದರು.</p>.<p> <strong>‘ಹಿರಿಯ ನಾಗರಿಕರ ಗೌರವ ಕಾಪಾಡಬೇಕು’ </strong></p><p>‘ಹಿರಿಯ ನಾಗರಿಕರು ಎನಿಸಿರುವ ಅತ್ತೆಯನ್ನು ಸೊಸೆ ಔಟ್ ಔಸ್ನಲ್ಲಿ (ಹೊರಮನೆ) ಇರಿಸಿದ್ದಾರೆ. ಇದರಿಂದ ಅತ್ತೆ ತಮ್ಮ ಸ್ವಂತ ಮನೆಗೆ ಗೌರವಯುತ ಪ್ರವೇಶ ಹೊಂದುವ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. ಮನೆಯು ಸೊಸೆಯ ವಶದಲ್ಲಿದ್ದು ಅವರು ಆ ಆವರಣದಲ್ಲಿ ವಾಸಿಸುತ್ತಿಲ್ಲ. ಪತಿಯ ಮರಣದ ನಂತರ ಸೊಸೆ ಆಂಧ್ರಪ್ರದೇಶಕ್ಕೆ ತಮ್ಮ ನಿವಾಸವನ್ನು ಬದಲಾಯಿಸಿದ್ದಾರೆ. ಅತ್ತೆಯೊಂದಿಗೆ ಸೊಸೆಯ ಸಂಬಂಧ ಹಳಸಿದೆ. ಈ ಆಧಾರದಡಿ ಮನೆಯ ಆವರಣವನ್ನು ಉಳಿಸಿಕೊಳ್ಳಲು ಸೊಸೆಗೆ ಒತ್ತಾಯಿಸಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅತ್ತೆಯ ಮನೆಯಲ್ಲಿ ಠಿಕಾಣಿ ಹೂಡಿ ಆಸ್ತಿ ಲಪಟಾಯಿಸಲು ಸಂಚು ಹೂಡಿದ್ದ ಆರೋಪದಡಿ ಸೊಸೆಗೆ ಮನೆ ಖಾಲಿ ಮಾಡುವಂತೆ ನಿರ್ದೇಶಿಸಿದ್ದ ಬಳ್ಳಾರಿ ಉಪವಿಭಾಗಾಧಿಕಾರಿ (ಎಸಿ) ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.</p>.<p>‘ಬಳ್ಳಾರಿ ಉಪವಿಭಾಗಾಧಿಕಾರಿ 2025ರ ಜೂನ್ 17ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೋರಿ ಸೊಸೆ (45) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಈ ಕುರಿತಂತೆ ಆದೇಶಿಸಿದೆ.</p>.<p>‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ–2007ರ ಅನುಸಾರ ಅತ್ಯಂತ ಅಪರೂಪದ ಸಂದರ್ಭಗಳಲ್ಲಿ ಮಾತ್ರವೇ ಹಿರಿಯರನ್ನು ಮನೆಯಿಂದ ಹೊರಹಾಕುವ ಆದೇಶವನ್ನು ಸಮರ್ಥನೀಯ ಎಂದು ನಿರ್ಣಯಿಸಬಹುದು’ ಎಂಬ ಅಭಿಪ್ರಾಯವನ್ನು ನ್ಯಾಯಪೀಠ ವ್ಯಕ್ತಪಡಿಸಿದೆ.</p>.<p><strong>ಪ್ರಕರಣವೇನು?</strong></p><p> ಪ್ರಕರಣದಲ್ಲಿ ಪೋಷಕರ ಮಗ ಸುಮಾರು ಎಂಟು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಸೊಸೆ ಮತ್ತು ಅತ್ತೆಯ (65) ನಡುವಿನ ಸಂಬಂಧ ಹಳಸಿತ್ತು. ಸರ್ಕಾರಿ ಕೆಲಸ ಸಿಗಲಿದೆ ಎಂಬ ಕಾರಣಕ್ಕೆ ಸೊಸೆ ಆಂಧ್ರಪ್ರದೇಶಕ್ಕೆ ವಾಸ ಬದಲಿಸಿದ್ದರು.</p>.<p>ಏತನ್ಮಧ್ಯೆ, ಬಳ್ಳಾರಿಯ ಸಿದ್ಧಾರ್ಥ ನಗರದಲ್ಲಿ ಸ್ವಯಾರ್ಜಿತವಾಗಿ ನಿಮಿಸಿದ ಮನೆಯಲ್ಲಿ ಅತ್ತೆ ವಾಸವಿದ್ದರು. ಹಣಕಾಸಿನ ತೊಂದರೆಯಿಂದ ಮನೆಯನ್ನು ಮಾರಾಟ ಮಾಡಲು ಉದ್ದೇಶಿಸಿ, ಮುಂಗಡ ಹಣ ಪಡೆದಿದ್ದರು. ಈ ವಿಷಯ ತಿಳಿದು ಮನೆಗೆ ಬಂದಿದ್ದ ಸೊಸೆ, ‘ನನಗೂ ಆಸ್ತಿಯಲ್ಲಿ ಪಾಲು ನೀಡಬೇಕು ಇಲ್ಲವೇ ₹60 ಲಕ್ಷ ನೀಡಬೇಕು’ ಎಂದು ಹೇಳಿ ಮನೆಯಲ್ಲಿದ್ದ ಅತ್ತೆಗೆ ಸಂಬಂಧಿಸಿದ ವಸ್ತುಗಳನ್ನು ಹೊರಹಾಕಿ, ಮನೆಯಲ್ಲಿ ಠಿಕಾಣಿ ಹೂಡಿದ್ದರು.</p>.<p>ಪೋಷಕರ ಸಕ್ಷಮ ಪ್ರಾಧಿಕಾರವಾದ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿಯ ಅಧ್ಯಕ್ಷರೂ ಆದ ಬಳ್ಳಾರಿ ಉಪವಿಭಾಗಾಧಿಕಾರಿಗೆ ಅರ್ಜಿ ಸಲ್ಲಿಸಿದ್ದ ಅತ್ತೆ, ‘ನಮ್ಮ ಆಸ್ತಿ ರಕ್ಷಣೆ, ಮಾನಸಿಕ ಶಾಂತಿ ಮತ್ತು ಪ್ರಾಣ ರಕ್ಷಣೆ ನೀಡಬೇಕು’ ಎಂದು ಕೋರಿದ್ದರು.</p>.<p>ಅರ್ಜಿ ವಿಚಾರಣೆ ನಡೆಸಿದ್ದ ಸಕ್ಷಮ ಪ್ರಾಧಿಕಾರ, ‘ಸೊಸೆ ಮನೆಯನ್ನು ಖಾಲಿ ಮಾಡಬೇಕು. ಸದರಿ ಆಸ್ತಿಯನ್ನು ಮನವಿದಾರರ ಹೆಸರಿಗೆ ನೋಂದಾಯಿಸಬೇಕು’ ಎಂದು ಬಳ್ಳಾರಿ ಉಪನೋಂದಣಾಧಿಕಾರಿಗೆ ಆದೇಶಿಸಿದ್ದರು. ಈ ಆದೇಶವನ್ನು ಸೊಸೆ ಹೈಕೋರ್ಟ್ನಲ್ಲಿ ಪ್ರಶ್ನಿಸಿ ‘ರದ್ದುಗೊಳಿಸಬೇಕು’ ಎಂದು ಕೋರಿದ್ದರು.</p>.<p> <strong>‘ಹಿರಿಯ ನಾಗರಿಕರ ಗೌರವ ಕಾಪಾಡಬೇಕು’ </strong></p><p>‘ಹಿರಿಯ ನಾಗರಿಕರು ಎನಿಸಿರುವ ಅತ್ತೆಯನ್ನು ಸೊಸೆ ಔಟ್ ಔಸ್ನಲ್ಲಿ (ಹೊರಮನೆ) ಇರಿಸಿದ್ದಾರೆ. ಇದರಿಂದ ಅತ್ತೆ ತಮ್ಮ ಸ್ವಂತ ಮನೆಗೆ ಗೌರವಯುತ ಪ್ರವೇಶ ಹೊಂದುವ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. ಮನೆಯು ಸೊಸೆಯ ವಶದಲ್ಲಿದ್ದು ಅವರು ಆ ಆವರಣದಲ್ಲಿ ವಾಸಿಸುತ್ತಿಲ್ಲ. ಪತಿಯ ಮರಣದ ನಂತರ ಸೊಸೆ ಆಂಧ್ರಪ್ರದೇಶಕ್ಕೆ ತಮ್ಮ ನಿವಾಸವನ್ನು ಬದಲಾಯಿಸಿದ್ದಾರೆ. ಅತ್ತೆಯೊಂದಿಗೆ ಸೊಸೆಯ ಸಂಬಂಧ ಹಳಸಿದೆ. ಈ ಆಧಾರದಡಿ ಮನೆಯ ಆವರಣವನ್ನು ಉಳಿಸಿಕೊಳ್ಳಲು ಸೊಸೆಗೆ ಒತ್ತಾಯಿಸಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>