<p><strong>ಬೆಂಗಳೂರು:</strong> ‘ಎರಡು ಹಸು ಕಳವಾಗಿವೆ ಎಂಬ ಪ್ರಕರಣ ದಾಖಲಿಸಿಕೊಳ್ಳುವ ಕರ್ನಾಟಕ ಪೊಲೀಸರು, ಗಂಭೀರ ಅಪರಾಧಗಳ ಬಗ್ಗೆ ತಲೆಕೆಡಿಸಿಕೊಳ್ಳುವುದು ಅಷ್ಟರಲ್ಲೇ ಇದೆ’ ಎಂದು ಹೈಕೋರ್ಟ್, ಪೊಲೀಸರ ಕಾರ್ಯ ವೈಖರಿ ಬಗ್ಗೆ ಮತ್ತೊಮ್ಮೆ ವ್ಯಂಗ್ಯವಾಡಿದೆ.</p><p>‘ಚನ್ನಪಟ್ಟಣ ಗ್ರಾಮಾಂತರ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ನಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಮತ್ತು ಸ್ಥಳೀಯ ಜೆಎಂಎಫ್ಸಿ ಕೋರ್ಟ್ನಲ್ಲಿರುವ ವಿಚಾರಣೆ ರದ್ದುಗೊಳಿಸಬೇಕು’ ಎಂದು ಕೋರಿ ತೋಟನಹಳ್ಳಿಯ ಮಂಗಳಮ್ಮ ಸೇರಿದಂತೆ ಒಟ್ಟು ನಾಲ್ವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p><p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎನ್.ವಿನೋದ್, ‘2024ರಲ್ಲಿ ಎರಡು ಹಸು ಕಳುವಾಗಿವೆ ಎಂಬ ಆರೋಪದಡಿ ಒಂದೇ ಕುಟುಂಬದ ನಾಲ್ವರ ವಿರುದ್ಧ 2026ರಲ್ಲಿ ಕಳವು ಪ್ರಕರಣ ದಾಖಲಿಸಲಾಗಿದೆ’ ಎಂದು ದೂರಿದರು.</p><p>ಇದಕ್ಕೆ ಪ್ರಾಸಿಕ್ಯೂಷನ್ ವಿರುದ್ಧ ಗರಂ ಆದ ನ್ಯಾಯಪೀಠ, ‘ಎರಡು ವರ್ಷಗಳ ಹಿಂದೆ ಎರಡು ಹಸು ನಾಪತ್ತೆಯಾಗಿವೆ ಎಂಬ ಆರೋಪಕ್ಕೆ ಈಗ ಪ್ರಕರಣ ದಾಖಲಿಸಿದ್ದೀರಿ. ಆದರೆ, ನೈಜ ಅಪರಾಧ ಪ್ರಕರಣಗಳನ್ನು ನೀವು ದಾಖಲಿಸುವುದೇ ಇಲ್ಲ. ಸಂತ್ರಸ್ತರು ನೂರು ಬಾರಿ ಪೊಲೀಸ್ ಠಾಣೆ ಮೆಟ್ಟಿಲೇರಬೇಕಲ್ಲವೇ’ ಎಂದು ಕುಟುಕಿ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಎರಡು ಹಸು ಕಳವಾಗಿವೆ ಎಂಬ ಪ್ರಕರಣ ದಾಖಲಿಸಿಕೊಳ್ಳುವ ಕರ್ನಾಟಕ ಪೊಲೀಸರು, ಗಂಭೀರ ಅಪರಾಧಗಳ ಬಗ್ಗೆ ತಲೆಕೆಡಿಸಿಕೊಳ್ಳುವುದು ಅಷ್ಟರಲ್ಲೇ ಇದೆ’ ಎಂದು ಹೈಕೋರ್ಟ್, ಪೊಲೀಸರ ಕಾರ್ಯ ವೈಖರಿ ಬಗ್ಗೆ ಮತ್ತೊಮ್ಮೆ ವ್ಯಂಗ್ಯವಾಡಿದೆ.</p><p>‘ಚನ್ನಪಟ್ಟಣ ಗ್ರಾಮಾಂತರ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ನಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಮತ್ತು ಸ್ಥಳೀಯ ಜೆಎಂಎಫ್ಸಿ ಕೋರ್ಟ್ನಲ್ಲಿರುವ ವಿಚಾರಣೆ ರದ್ದುಗೊಳಿಸಬೇಕು’ ಎಂದು ಕೋರಿ ತೋಟನಹಳ್ಳಿಯ ಮಂಗಳಮ್ಮ ಸೇರಿದಂತೆ ಒಟ್ಟು ನಾಲ್ವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p><p>ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎನ್.ವಿನೋದ್, ‘2024ರಲ್ಲಿ ಎರಡು ಹಸು ಕಳುವಾಗಿವೆ ಎಂಬ ಆರೋಪದಡಿ ಒಂದೇ ಕುಟುಂಬದ ನಾಲ್ವರ ವಿರುದ್ಧ 2026ರಲ್ಲಿ ಕಳವು ಪ್ರಕರಣ ದಾಖಲಿಸಲಾಗಿದೆ’ ಎಂದು ದೂರಿದರು.</p><p>ಇದಕ್ಕೆ ಪ್ರಾಸಿಕ್ಯೂಷನ್ ವಿರುದ್ಧ ಗರಂ ಆದ ನ್ಯಾಯಪೀಠ, ‘ಎರಡು ವರ್ಷಗಳ ಹಿಂದೆ ಎರಡು ಹಸು ನಾಪತ್ತೆಯಾಗಿವೆ ಎಂಬ ಆರೋಪಕ್ಕೆ ಈಗ ಪ್ರಕರಣ ದಾಖಲಿಸಿದ್ದೀರಿ. ಆದರೆ, ನೈಜ ಅಪರಾಧ ಪ್ರಕರಣಗಳನ್ನು ನೀವು ದಾಖಲಿಸುವುದೇ ಇಲ್ಲ. ಸಂತ್ರಸ್ತರು ನೂರು ಬಾರಿ ಪೊಲೀಸ್ ಠಾಣೆ ಮೆಟ್ಟಿಲೇರಬೇಕಲ್ಲವೇ’ ಎಂದು ಕುಟುಕಿ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>