ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲ ಎಂ.ಎನ್. ಕುಮಾರ್, ‘ನಿರ್ಬಂಧದ ಆದೇಶವನ್ನು ಪರಿಶೀಲನೆ ನಡೆಸುವ ಕುರಿತು ನಿಲುವು ತಿಳಿಸುವಂತೆ ಇದೇ 20ರಂದು ನ್ಯಾಯಪೀಠ ಸೂಚಿಸಿದೆ. ಆದರೆ, ಈ ನಿಟ್ಟಿನಲ್ಲಿನ ಕೆಲವು ವಿಚಾರಗಳನ್ನು ಇನ್ನೂ ನಿರ್ಧರಿಸಬೇಕಿದ್ದು, ಅದಕ್ಕಾಗಿ ಮೂರು ವಾರಗಳ ಕಾಲಾವಕಾಶ ನೀಡಬೇಕು‘ ಎಂದು ಕೋರಿದರು.