<p><strong>ಬೆಂಗಳೂರು</strong>: ‘ಬ್ಯಾಂಕುಗಳಿಂದ ಕೋಟ್ಯಂತರ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸಿ ಕಮಿಷನ್ ಪಡೆದು ₹40 ಕೋಟಿ ವಂಚನೆ ಮಾಡಿದ್ದಾರೆ’ ಎಂಬ ಪ್ರಕರಣದ ಮೂವರು ಆರೋಪಿಗಳ ವಿರುದ್ಧದ 11 ಎಫ್ಐಆರ್ಗಳನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.</p>.<p>ಈ ಸಂಬಂಧ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p>.<p>‘ಪ್ರಕರಣದ ಅಪರಾಧದ ಆರೋಪಗಳು ತನಿಖಾ ಹಂತದಲ್ಲಿವೆ. ಆರೋಪಗಳ ಬಗ್ಗೆ ತನಿಖೆ ನಡೆಯಬೇಕು ಎಂಬುದು ಕಾನೂನಿನ ಸ್ಪಷ್ಟ ನಿಯಮ. ಹಾಗಾಗಿ, ಈ ಹಂತದಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<p>‘ಆರೋಪಿಗಳು ಹಲವು ಜನರೊಂದಿಗೆ ಆರ್ಥಿಕ ವಹಿವಾಟು ನಡೆಸಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದ್ದರಿಂದ, ಇಂತಹ ಪ್ರಕರಣಗಳಲ್ಲಿ ತನಿಖೆಗೆ ಅಡ್ಡಿಪಡಿಸುವ ಪ್ರಶ್ನೆ ಉದ್ಭವಿಸುವುದಿಲ್ಲ’ ಎಂದು ನ್ಯಾಯಪೀಠ ವಿವರಿಸಿದೆ.</p>.<p>ಆರೋಪಿಗಳಾದ ಮಂಗಳೂರಿನ ದಂಪತಿ ರೋಶನ್ ಸಲ್ಡಾನಾ, ಅವರ ಪತ್ನಿ ಡಾಫ್ನಿ ನೀತು ಡಿಸೋಜಾ ಮತ್ತು ಚಿತ್ರದುರ್ಗದ ಎನ್.ಚಂದ್ರಶೇಖರ್ ತಮ್ಮ ವಿರುದ್ಧದ 11 ಎಫ್ಐಆರ್ ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬ್ಯಾಂಕುಗಳಿಂದ ಕೋಟ್ಯಂತರ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸಿ ಕಮಿಷನ್ ಪಡೆದು ₹40 ಕೋಟಿ ವಂಚನೆ ಮಾಡಿದ್ದಾರೆ’ ಎಂಬ ಪ್ರಕರಣದ ಮೂವರು ಆರೋಪಿಗಳ ವಿರುದ್ಧದ 11 ಎಫ್ಐಆರ್ಗಳನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.</p>.<p>ಈ ಸಂಬಂಧ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p>.<p>‘ಪ್ರಕರಣದ ಅಪರಾಧದ ಆರೋಪಗಳು ತನಿಖಾ ಹಂತದಲ್ಲಿವೆ. ಆರೋಪಗಳ ಬಗ್ಗೆ ತನಿಖೆ ನಡೆಯಬೇಕು ಎಂಬುದು ಕಾನೂನಿನ ಸ್ಪಷ್ಟ ನಿಯಮ. ಹಾಗಾಗಿ, ಈ ಹಂತದಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<p>‘ಆರೋಪಿಗಳು ಹಲವು ಜನರೊಂದಿಗೆ ಆರ್ಥಿಕ ವಹಿವಾಟು ನಡೆಸಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದ್ದರಿಂದ, ಇಂತಹ ಪ್ರಕರಣಗಳಲ್ಲಿ ತನಿಖೆಗೆ ಅಡ್ಡಿಪಡಿಸುವ ಪ್ರಶ್ನೆ ಉದ್ಭವಿಸುವುದಿಲ್ಲ’ ಎಂದು ನ್ಯಾಯಪೀಠ ವಿವರಿಸಿದೆ.</p>.<p>ಆರೋಪಿಗಳಾದ ಮಂಗಳೂರಿನ ದಂಪತಿ ರೋಶನ್ ಸಲ್ಡಾನಾ, ಅವರ ಪತ್ನಿ ಡಾಫ್ನಿ ನೀತು ಡಿಸೋಜಾ ಮತ್ತು ಚಿತ್ರದುರ್ಗದ ಎನ್.ಚಂದ್ರಶೇಖರ್ ತಮ್ಮ ವಿರುದ್ಧದ 11 ಎಫ್ಐಆರ್ ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>